ಮಂಗಳೂರು : ಸಿಎಂ ಬಗ್ಗೆ ಶಾಸಕ ಹರೀಶ್ ಪೂಂಜಾ ಕಲೆಕ್ಷನ್ ಮಾಸ್ಟರ್ ಎಂಬ ಹೇಳಿಕೆ ವಿಚಾರವಾಗಿ ಸಿಎಂ ಸಿದ್ದರಾಮಯ್ ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ಹರೀಶ್ ಪೂಂಜಾ ಶಾಸಕನಾಗಿರೋದು ಮೊನ್ನೆ. ನಾನು 83 ರಿಂದ ಶಾಸಕನಾಗಿ, 85ರಲ್ಲೇ ಮಿನಿಸ್ಟರ್ ಆಗಿದ್ದವನು.ಯಾರೂ ನನ್ನನ್ನು ಈ ರೀತಿ ಕರೆದಿರಲಿಲ್ಲ. ಇವರು ಪಾಪ ಇನ್ನೂ ರಾಜಕೀಯದಲ್ಲಿ ಬಚ್ಚಾ. ಇದನ್ನು ಹಿಂದಿನ ಬಿಜೆಪಿ ಸರ್ಕಾರ ಮತ್ತು ಬಿಜೆಪಿ ಮುಖ್ಯಮಂತ್ರಿಗಳಿಗೆ ಹೇಳಲಿ ಎಂದು ಕಿಡಿಕಾರಿದರು.
50 ಕೋಟಿ ಆಫರ್ ಬಗ್ಗೆ ನನಗೆ ಗೊತ್ತಿಲ್ಲ, ರವಿ ಹತ್ತಿರ ಕೇಳಿ. ಯಾರು ಹೇಳಿದ್ದಾರೋ ಅವರ ಹತ್ತಿರ ಕೇಳಿ. ನನಗೆ ಯಾವುದೇ ಮಾಹಿತಿ ಬಂದಿಲ್ಲ. ಬಿಜೆಪಿಯವರು ನಮ್ಮ ಸರ್ಕಾರ ಅಸ್ಥಿರ ಮಾಡಲು ಪ್ರಯತ್ನಿಸುತ್ತಿದ್ದಾರೆ ಎನ್ನುವ ಮಾಹಿತಿ ಇದೆ. 50 ಕೋಟಿ ಕೊಟ್ಟು ಅಧಿಕಾರದ ಆಫರ್ ಮಾಡುತ್ತಿದ್ದಾರೆ ಎನ್ನುವ ಬಗ್ಗೆ ಮಾಹಿತಿ ಇಲ್ಲ ಎಂದರು.
ಪರಮೇಶ್ವರ್ ಮನೆಯಲ್ಲಿ ಡಿನ್ನರ್ ಪಾರ್ಟಿ ಕುರಿತಾಗಿ ಮಾತನಾಡಿದ ಅವರು, ಪರಮೇಶ್ವರ್ ಊಟಕ್ಕೆ ಕರೆದಿದ್ದರು, ಹೋಗಿದ್ದೇವೆ. ಅದಕ್ಕೆ ಮಸಾಲೆ ಯಾಕೆ ಹಾಕ್ತೀರಾ? ಅವರು ನನಗೆ, ಮಹಾದೇವಪ್ಪ, ಸತೀಶ್ ಜಾರಕಿಹೊಳಿಗೆ ಊಟಕ್ಕೆ ಕರೆದಿದ್ದರು. ಅಲ್ಲಿ ಯಾವುದೇ ರಾಜಕೀಯ ಇಲ್ಲ. ಅದೆಲ್ಲಾ ಸುಳ್ಳು. ಬಣ್ಣ ಕಟ್ಟಲಾಗ್ತಿದೆ ಎಂದು ಸ್ಪಷ್ಟನೆ ನೀಡಿದರು.
ಮೊದಲ ಹಂತದಲ್ಲಿ ಕೆಲ ಶಾಸಕರಿಗೆ ನಿಗಮ ಮಂಡಳಿ ಕೊಡುತ್ತೇವೆ. ಎರಡನೇ ಹಂತದಲ್ಲಿ ಕಾರ್ಯಕರ್ತರು, ನಾಯಕರಿಗೆ ಶೀಘ್ರವಾಗಿ ಹಂಚಿಕೆ ಮಾಡಲಾಗುತ್ತದೆ. ನಾವು ಬರ ಪರಿಹಾರ 7,900 ಕೋಟಿ ಕೇಳಿದ್ದೇವೆ. ಆದರೆ ಕೇಂದ್ರ ಸರ್ಕಾರ ಒಂದು ರೂ. ಪರಿಹಾರ ಕೊಟ್ಟಿಲ್ಲ. ಕೇಂದ್ರ ಸರ್ಕಾರ ಕರ್ನಾಟಕದ ಬಗ್ಗೆ ಮಲತಾಯಿ ಧೋರಣೆ ಹೊಂದಿದೆ ಎಂದರು. ಇನ್ನು ಕಾರ್ಕಳದ ಪರಶುರಾಮ ಮೂರ್ತಿ ಅಸಲಿನಾ? ನಕಲಿನಾ ಎಂಬುದರ ಕುರಿತು ತನಿಖೆ ಆಗಲಿದೆ ಎಂದು ಹೇಳಿದರು.
ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…
ಬೆಂಗಳೂರು : ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…
ಕೊಳ್ಳೇಗಾಲ : ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ ಎಂದು ಮಾಜಿ ಸಚಿವ ಎನ್.ಮಹೇಶ್ ಮಾರ್ಮಿಕವಾಗಿ…
ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ…
ಹನೂರು : ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಧನಗಾಹಿ ಮೇಲೆ ಚಿರತೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.…
ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…