ಕರ್ನಾಟಕದಲ್ಲಿ ಮಹಿಳೆಯರ ರಕ್ಷಣೆಯೇ ಮುಖ್ಯ
ಬೆಂಗಳೂರು : ಕನ್ನಡ ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ನಂಥ ಪ್ರಕರಣಗಳು ಕಂಡು ಬಂದರೆ, ಸರ್ಕಾರ ಕಠಿಣ ಕ್ರಮಕೈಗೊಳ್ಳಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.
ಕನ್ನಡ ಚಿತ್ರರಂಗದಲ್ಲೂ ಕಾಸ್ಟಿಂಗ್ ಕೌಚ್ ಸದ್ದು ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವರು, ಆ ರೀತಿ ಏನಾದರೂ ಆಗಿದ್ದರೆ ಕ್ರಮ ತೆಗೆದುಕೊಳ್ಳಲಾಗುವುದು. ಮಹಿಳೆಯರ ರಕ್ಷಣೆಯೇ ನಮಗೆ ಮುಖ್ಯ ಎಂದು ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಆ ವಿಚಾರದ ಬಗ್ಗೆ ಭರವಸೆ ನೀಡಿದ್ದಾರೆ. ಮಹಿಳೆಯರ ರಕ್ಷಣೆಗೆ ಸರ್ಕಾರ ಸದಾ ಬದ್ಧವಾಗಿದೆ. ಕಾಸ್ಟಿಂಗ್ ಕೌಚ್ ನಂತ ಪ್ರಕರಣಗಳು ಕಂಡು ಬಂದರೆ ಯಾವುದೇ ಮುಲಾಜಿಲ್ಲದೆ ಕ್ರಮ ಕೈಗೊಳ್ಳುತ್ತೇವೆ ಎಂದು ಸಚಿವರು ಹೇಳಿದರು.
ಶೀಘ್ರವೇ ಅಂಗನವಾಡಿ ಶಿಕ್ಷಕಿಯರಿಗೆ ವೇತನ
3 ಜಿಲ್ಲೆಗಳ ಅಂಗನವಾಡಿ ಶಿಕ್ಷಕಿಯರಿಗೆ ಬಾಕಿ ಉಳಿದಿರುವ ವೇತನವನ್ನು ಶೀಘ್ರವೇ ಬಿಡುಗಡೆಗೊಳಿಸಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಎಲ್ಲಾ ವಿಚಾರವೂ ಅಂಗನವಾಡಿ ಶಿಕ್ಷಕಿಯರಿಗೆ ಗೊತ್ತಿದೆ. ರಾಜ್ಯ ಸರ್ಕಾರದಿಂದ 7 ಸಾವಿರ ರೂ, ಕೇಂದ್ರದಿಂದ 4 ಸಾವಿರ ರೂ ನೀಡಲಾಗುತ್ತಿದೆ. ಈಗಾಗಲೇ ಕೇಂದ್ರ ಸಚಿವರ ಜೊತೆ ಮಾತಾಡಿದ್ದೇನೆ. ಈ ಹಿಂದೆಯೂ ಹಲವು ಬಾರಿ ವೇತನ ವಿಳಂಬ ಆಗಿತ್ತು. ಗೌರಿ ಗಣೇಶ ಹಬ್ಬದೊಳಗೆ ಹಣ ಬಿಡುಗಡೆಗೆ ಪ್ರಯತ್ನ ಮಾಡುತ್ತೇವೆ ಎಂದು ಸಚಿವರು ಹೇಳಿದ್ದಾರೆ.
ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…
ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…
ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…