Mysore
21
overcast clouds

Social Media

ಭಾನುವಾರ, 16 ಆಗಸ್ಟ್ 2026
Light
Dark

ಹಾಲು ಕುಡಿದು ಸಾಯೋವರಿಗೆ ವಿಷ ಹಾಕಿ ಯಾರಾದ್ರೂ ಸಾಯಿಸ್ತಾರಾ? : ಗೋವಿಂದ ಕಾರಜೋಳ

ಧಾರವಾಡ : ಹಾಲು ಕುಡಿದು ಸಾಯೋವರಿಗೆ ವಿಷ ಹಾಕಿ ಯಾರಾದ್ರೂ ಸಾಯಿಸ್ತಾರಾ? ಎಂದು ಮಾಜಿ ಸಚಿವ ಗೋವಿಂದ ಕಾರಜೋಳ ಪ್ರಶ್ನಿಸಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾವು ಸರ್ಕಾರ ಬಿಳಿಸೋಕೆ ಹೋಗಿಲ್ಲ. ಹಾಲು ಕುಡಿದು ಸಾಯೋವರಿಗೆ ವಿಷ ಹಾಕಿ ಯಾರಾದ್ರೂ ಸಾಯಿಸ್ತಾರಾ? ಕಾಂಗ್ರೆಸ್‌ನವರು ಹಾಲು ಕುಡಿದು ಸಾಯೋಕೆ ತಯಾರಾಗಿದ್ದಾರೆ. ಬಿಜೆಪಿಯವರು ನಾವು ಸರ್ಕಾರ ಬೀಳಿಸುವ ಪಾಪದ‌ ಕೆಲಸ ಮಾಡೋದಿಲ್ಲ ಎಂದರು. ‌

ಕಾಂಗ್ರೆಸ್ ಸರ್ಕಾರದಲ್ಲಿ ಲಿಂಗಾಯತರು 2 ದರ್ಜೆ ನಾಯಕರಾಗಿ ಕೆಲಸ ಮಾಡ್ತಾ ಇದ್ದಾರೆ. ಲಿಂಗಾಯತರು ಗೌಡ್ರ ಲೆಕ್ಕದಲ್ಲಿಯೂ ಇಲ್ಲ, ಕುಲಕರ್ಣಿ ಪುಸ್ತಕದಲ್ಲಿಯೂ ಇಲ್ಲ. ರಾಜ್ಯ ಕಾಂಗ್ರೆಸ್ ಸರ್ಕಾರ ವರ್ಗಾವಣೆ ದಂಧೆಯಲ್ಲಿ ಮುಳುಗಿದೆ. ದಲಿತರು, ಹಿಂದುಳಿದವರು, ಗೌಡರ 3 ಗುಂಪುಗಳು ಕಾಂಗ್ರೆಸ್ ಸರ್ಕಾರದಲ್ಲಿವೆ. ಸಿದ್ದರಾಮಯ್ಯ ಕೇವಲ ಮಹಿಳೆಯರಿಗೆ ಉಚಿತ ಬಸ್ ಪಾಸ್ ಕೊಟ್ಟು, ಪುರುಷರಿಗೆ ಫ್ರೀ ಬಸ್ ಕೊಡದೇ ಪಾಪದ ಕೆಲಸ ಮಾಡ್ತಾ ಇದ್ದಾರೆ. ರಾಜ್ಯ ಸರ್ಕಾರ 5 ತಿಂಗಳಲ್ಲಿ ಸಂಪೂರ್ಣ ಆಡಳಿತ ನಡೆಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ.

ಗ್ಯಾರಂಟಿ ಯೋಜನೆಗಳನ್ನು ‌ಕೊಟ್ಟು ಸಿಎಂ ಸಿದ್ದರಾಮಯ್ಯ ಅವರು ಭಂಡತನಕ್ಕೆ ಬಿದ್ದಿದ್ದಾರೆ. ಸುಳ್ಳು ಗ್ಯಾರಂಟಿಗಳನ್ನು ನೋಡಿ ಸರ್ಕಾರಕ್ಕೆ ,ಜನರು ಕಲ್ಲು ಹೊಡೆಯುವ ಕಾಲ ಬರುತ್ತೆ.ಸಿಎಂ ಸಿದ್ದರಾಮಯ್ಯ ಮಾತನ್ನು ಯಾರೂ ಕೇಳುತ್ತಿಲ್ಲ. ಮಂತ್ರಿಗಳಿಗೆ ಊಟ-ತಿಂಡಿ ಕೊಟ್ಟು ಗದ್ದ-ತುಟಿ ಸವರುವ ಪರಿಸ್ಥಿತಿ ‌ಸಿಎಂ ಸಿದ್ದರಾಮಯ್ಯರಿಗೆ ಬಂದಿದೆ ಎಂದು ವ್ಯಂಗ್ಯವಾಡಿದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!