ಧಾರವಾಡ : ಹಾಲು ಕುಡಿದು ಸಾಯೋವರಿಗೆ ವಿಷ ಹಾಕಿ ಯಾರಾದ್ರೂ ಸಾಯಿಸ್ತಾರಾ? ಎಂದು ಮಾಜಿ ಸಚಿವ ಗೋವಿಂದ ಕಾರಜೋಳ ಪ್ರಶ್ನಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾವು ಸರ್ಕಾರ ಬಿಳಿಸೋಕೆ ಹೋಗಿಲ್ಲ. ಹಾಲು ಕುಡಿದು ಸಾಯೋವರಿಗೆ ವಿಷ ಹಾಕಿ ಯಾರಾದ್ರೂ ಸಾಯಿಸ್ತಾರಾ? ಕಾಂಗ್ರೆಸ್ನವರು ಹಾಲು ಕುಡಿದು ಸಾಯೋಕೆ ತಯಾರಾಗಿದ್ದಾರೆ. ಬಿಜೆಪಿಯವರು ನಾವು ಸರ್ಕಾರ ಬೀಳಿಸುವ ಪಾಪದ ಕೆಲಸ ಮಾಡೋದಿಲ್ಲ ಎಂದರು.
ಕಾಂಗ್ರೆಸ್ ಸರ್ಕಾರದಲ್ಲಿ ಲಿಂಗಾಯತರು 2 ದರ್ಜೆ ನಾಯಕರಾಗಿ ಕೆಲಸ ಮಾಡ್ತಾ ಇದ್ದಾರೆ. ಲಿಂಗಾಯತರು ಗೌಡ್ರ ಲೆಕ್ಕದಲ್ಲಿಯೂ ಇಲ್ಲ, ಕುಲಕರ್ಣಿ ಪುಸ್ತಕದಲ್ಲಿಯೂ ಇಲ್ಲ. ರಾಜ್ಯ ಕಾಂಗ್ರೆಸ್ ಸರ್ಕಾರ ವರ್ಗಾವಣೆ ದಂಧೆಯಲ್ಲಿ ಮುಳುಗಿದೆ. ದಲಿತರು, ಹಿಂದುಳಿದವರು, ಗೌಡರ 3 ಗುಂಪುಗಳು ಕಾಂಗ್ರೆಸ್ ಸರ್ಕಾರದಲ್ಲಿವೆ. ಸಿದ್ದರಾಮಯ್ಯ ಕೇವಲ ಮಹಿಳೆಯರಿಗೆ ಉಚಿತ ಬಸ್ ಪಾಸ್ ಕೊಟ್ಟು, ಪುರುಷರಿಗೆ ಫ್ರೀ ಬಸ್ ಕೊಡದೇ ಪಾಪದ ಕೆಲಸ ಮಾಡ್ತಾ ಇದ್ದಾರೆ. ರಾಜ್ಯ ಸರ್ಕಾರ 5 ತಿಂಗಳಲ್ಲಿ ಸಂಪೂರ್ಣ ಆಡಳಿತ ನಡೆಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ.
ಗ್ಯಾರಂಟಿ ಯೋಜನೆಗಳನ್ನು ಕೊಟ್ಟು ಸಿಎಂ ಸಿದ್ದರಾಮಯ್ಯ ಅವರು ಭಂಡತನಕ್ಕೆ ಬಿದ್ದಿದ್ದಾರೆ. ಸುಳ್ಳು ಗ್ಯಾರಂಟಿಗಳನ್ನು ನೋಡಿ ಸರ್ಕಾರಕ್ಕೆ ,ಜನರು ಕಲ್ಲು ಹೊಡೆಯುವ ಕಾಲ ಬರುತ್ತೆ.ಸಿಎಂ ಸಿದ್ದರಾಮಯ್ಯ ಮಾತನ್ನು ಯಾರೂ ಕೇಳುತ್ತಿಲ್ಲ. ಮಂತ್ರಿಗಳಿಗೆ ಊಟ-ತಿಂಡಿ ಕೊಟ್ಟು ಗದ್ದ-ತುಟಿ ಸವರುವ ಪರಿಸ್ಥಿತಿ ಸಿಎಂ ಸಿದ್ದರಾಮಯ್ಯರಿಗೆ ಬಂದಿದೆ ಎಂದು ವ್ಯಂಗ್ಯವಾಡಿದರು.
ಮೈಸೂರು: ಬದಲಿ ನಿವೇಶನ ಹಂಚಿಕೆ, ೫೦:೫೦ ಅನುಪಾತದಲ್ಲಿ ನಿವೇಶನ ಅಕ್ರಮ ಹಂಚಿಕೆ ಹಗರಣದಿಂದಾಗಿ ಇಡೀ ರಾಜ್ಯದ ಗಮನ ಸೆಳೆದಿರುವ ಮೈಸೂರು…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜುಂಬೂ ಸವಾರಿ ಸಾಗುವ ಮಾರ್ಗದಲ್ಲಿ ಕಳೆದ ಎರಡೂ ವರ್ಷಗಳಿಂದ ಬಿದ್ದಿದ್ದ ಬೃಹತ್ ಮರದ ಕಾಂಡವನ್ನು…
ಮೈಸೂರು: ಈ ಬಾರಿಯ ದಸರಾ ಮಹೋತ್ಸವದ ಜಂಬೂ ಸವಾರಿಯನ್ನು ವೀಕ್ಷಿಸಲು ಆಗಮಿಸಿದ ಎಲ್ಲರಿಗೂ ಚಿನ್ನದ ಅಂಬಾರಿ ನೋಡುವ ಅವಕಾಶ ಸಿಗಬೇಕು…
ಮೈಸೂರು: ಸಾಂಸ್ಕೃತಿಕ ರಾಜಧಾನಿ, ಅರಮನೆಗಳ ನಗರಿ ಎಂದು ಕರೆಯುವ ಮೈಸೂರನ್ನು ಗರಡಿ ಮನೆಗಳ ನಗರಿ ಎಂದೂ ಇತ್ತೀಚಿನ ವರ್ಷಗಳಲ್ಲಿ ಕರೆಯುವುದು…
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…