ಧಾರವಾಡ : ಹಾಲು ಕುಡಿದು ಸಾಯೋವರಿಗೆ ವಿಷ ಹಾಕಿ ಯಾರಾದ್ರೂ ಸಾಯಿಸ್ತಾರಾ? ಎಂದು ಮಾಜಿ ಸಚಿವ ಗೋವಿಂದ ಕಾರಜೋಳ ಪ್ರಶ್ನಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾವು ಸರ್ಕಾರ ಬಿಳಿಸೋಕೆ ಹೋಗಿಲ್ಲ. ಹಾಲು ಕುಡಿದು ಸಾಯೋವರಿಗೆ ವಿಷ ಹಾಕಿ ಯಾರಾದ್ರೂ ಸಾಯಿಸ್ತಾರಾ? ಕಾಂಗ್ರೆಸ್ನವರು ಹಾಲು ಕುಡಿದು ಸಾಯೋಕೆ ತಯಾರಾಗಿದ್ದಾರೆ. ಬಿಜೆಪಿಯವರು ನಾವು ಸರ್ಕಾರ ಬೀಳಿಸುವ ಪಾಪದ ಕೆಲಸ ಮಾಡೋದಿಲ್ಲ ಎಂದರು.
ಕಾಂಗ್ರೆಸ್ ಸರ್ಕಾರದಲ್ಲಿ ಲಿಂಗಾಯತರು 2 ದರ್ಜೆ ನಾಯಕರಾಗಿ ಕೆಲಸ ಮಾಡ್ತಾ ಇದ್ದಾರೆ. ಲಿಂಗಾಯತರು ಗೌಡ್ರ ಲೆಕ್ಕದಲ್ಲಿಯೂ ಇಲ್ಲ, ಕುಲಕರ್ಣಿ ಪುಸ್ತಕದಲ್ಲಿಯೂ ಇಲ್ಲ. ರಾಜ್ಯ ಕಾಂಗ್ರೆಸ್ ಸರ್ಕಾರ ವರ್ಗಾವಣೆ ದಂಧೆಯಲ್ಲಿ ಮುಳುಗಿದೆ. ದಲಿತರು, ಹಿಂದುಳಿದವರು, ಗೌಡರ 3 ಗುಂಪುಗಳು ಕಾಂಗ್ರೆಸ್ ಸರ್ಕಾರದಲ್ಲಿವೆ. ಸಿದ್ದರಾಮಯ್ಯ ಕೇವಲ ಮಹಿಳೆಯರಿಗೆ ಉಚಿತ ಬಸ್ ಪಾಸ್ ಕೊಟ್ಟು, ಪುರುಷರಿಗೆ ಫ್ರೀ ಬಸ್ ಕೊಡದೇ ಪಾಪದ ಕೆಲಸ ಮಾಡ್ತಾ ಇದ್ದಾರೆ. ರಾಜ್ಯ ಸರ್ಕಾರ 5 ತಿಂಗಳಲ್ಲಿ ಸಂಪೂರ್ಣ ಆಡಳಿತ ನಡೆಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ.
ಗ್ಯಾರಂಟಿ ಯೋಜನೆಗಳನ್ನು ಕೊಟ್ಟು ಸಿಎಂ ಸಿದ್ದರಾಮಯ್ಯ ಅವರು ಭಂಡತನಕ್ಕೆ ಬಿದ್ದಿದ್ದಾರೆ. ಸುಳ್ಳು ಗ್ಯಾರಂಟಿಗಳನ್ನು ನೋಡಿ ಸರ್ಕಾರಕ್ಕೆ ,ಜನರು ಕಲ್ಲು ಹೊಡೆಯುವ ಕಾಲ ಬರುತ್ತೆ.ಸಿಎಂ ಸಿದ್ದರಾಮಯ್ಯ ಮಾತನ್ನು ಯಾರೂ ಕೇಳುತ್ತಿಲ್ಲ. ಮಂತ್ರಿಗಳಿಗೆ ಊಟ-ತಿಂಡಿ ಕೊಟ್ಟು ಗದ್ದ-ತುಟಿ ಸವರುವ ಪರಿಸ್ಥಿತಿ ಸಿಎಂ ಸಿದ್ದರಾಮಯ್ಯರಿಗೆ ಬಂದಿದೆ ಎಂದು ವ್ಯಂಗ್ಯವಾಡಿದರು.
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ರಾಜ್ಯದಲ್ಲಿ ಏಳು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಎ1 ಆರೋಪಿ ಪವಿತ್ರಾಗೌಡಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.…
ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಮಸಣಾಪುರ ಚಾಟಿಪುರ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರದ ಫಲಕಕ್ಕೆ ಕಿಡಿಗೇಡಿಗಳು ಅಪಮಾನ…
ಭಾರತೀಯ ಅಂಚೆ ಹಾಗೂ ಕರ್ನಾಟಕ ಅಂಚೆ ಚೀಟಿ ಸಂಗ್ರಹಣಾ ಸಂಘವು ಆಧುನಿಕ ಮೈಸೂರು ನಿರ್ಮಾಣಕ್ಕೆ ಮಹತ್ವದ ಕೊಡುಗೆ ನೀಡಿರುವ ಮೈಸೂರು…
ಮೈಸೂರಿನ ದಟ್ಟಗಳ್ಳಿ ೩ ನೇ ಹಂತದ ಕನಕದಾಸನಗರವು, ಬಡಾವಣೆ ನಿರ್ಮಾಣವಾದ ಆರಂಭದಲ್ಲಿ ರಾಮಕೃಷ್ಣ ನಗರ ಉಪ ಅಂಚೆ ಕಚೇರಿಗೆ ಸೇರಿತ್ತು.…
ಪುನೀತ್ ಮಡಿಕೇರಿ ಹೆಚ್ಚುವರಿ ಸಿಬ್ಬಂದಿಗಳ ನಿಯೋಜನೆ; ಅಗತ್ಯವಿರುವಷ್ಟು ವಿದ್ಯುತ್ ಕಂಬಗಳು, ಪರಿವರ್ತಕಗಳು, ವಾಹಕಗಳ ದಾಸ್ತಾನು ಮಡಿಕೇರಿ: ಗುಡ್ಡಗಾಡು ಪ್ರದೇಶವಾಗಿರುವ ಕೊಡಗು…