ಧಾರವಾಡ : ಹಾಲು ಕುಡಿದು ಸಾಯೋವರಿಗೆ ವಿಷ ಹಾಕಿ ಯಾರಾದ್ರೂ ಸಾಯಿಸ್ತಾರಾ? ಎಂದು ಮಾಜಿ ಸಚಿವ ಗೋವಿಂದ ಕಾರಜೋಳ ಪ್ರಶ್ನಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾವು ಸರ್ಕಾರ ಬಿಳಿಸೋಕೆ ಹೋಗಿಲ್ಲ. ಹಾಲು ಕುಡಿದು ಸಾಯೋವರಿಗೆ ವಿಷ ಹಾಕಿ ಯಾರಾದ್ರೂ ಸಾಯಿಸ್ತಾರಾ? ಕಾಂಗ್ರೆಸ್ನವರು ಹಾಲು ಕುಡಿದು ಸಾಯೋಕೆ ತಯಾರಾಗಿದ್ದಾರೆ. ಬಿಜೆಪಿಯವರು ನಾವು ಸರ್ಕಾರ ಬೀಳಿಸುವ ಪಾಪದ ಕೆಲಸ ಮಾಡೋದಿಲ್ಲ ಎಂದರು.
ಕಾಂಗ್ರೆಸ್ ಸರ್ಕಾರದಲ್ಲಿ ಲಿಂಗಾಯತರು 2 ದರ್ಜೆ ನಾಯಕರಾಗಿ ಕೆಲಸ ಮಾಡ್ತಾ ಇದ್ದಾರೆ. ಲಿಂಗಾಯತರು ಗೌಡ್ರ ಲೆಕ್ಕದಲ್ಲಿಯೂ ಇಲ್ಲ, ಕುಲಕರ್ಣಿ ಪುಸ್ತಕದಲ್ಲಿಯೂ ಇಲ್ಲ. ರಾಜ್ಯ ಕಾಂಗ್ರೆಸ್ ಸರ್ಕಾರ ವರ್ಗಾವಣೆ ದಂಧೆಯಲ್ಲಿ ಮುಳುಗಿದೆ. ದಲಿತರು, ಹಿಂದುಳಿದವರು, ಗೌಡರ 3 ಗುಂಪುಗಳು ಕಾಂಗ್ರೆಸ್ ಸರ್ಕಾರದಲ್ಲಿವೆ. ಸಿದ್ದರಾಮಯ್ಯ ಕೇವಲ ಮಹಿಳೆಯರಿಗೆ ಉಚಿತ ಬಸ್ ಪಾಸ್ ಕೊಟ್ಟು, ಪುರುಷರಿಗೆ ಫ್ರೀ ಬಸ್ ಕೊಡದೇ ಪಾಪದ ಕೆಲಸ ಮಾಡ್ತಾ ಇದ್ದಾರೆ. ರಾಜ್ಯ ಸರ್ಕಾರ 5 ತಿಂಗಳಲ್ಲಿ ಸಂಪೂರ್ಣ ಆಡಳಿತ ನಡೆಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ.
ಗ್ಯಾರಂಟಿ ಯೋಜನೆಗಳನ್ನು ಕೊಟ್ಟು ಸಿಎಂ ಸಿದ್ದರಾಮಯ್ಯ ಅವರು ಭಂಡತನಕ್ಕೆ ಬಿದ್ದಿದ್ದಾರೆ. ಸುಳ್ಳು ಗ್ಯಾರಂಟಿಗಳನ್ನು ನೋಡಿ ಸರ್ಕಾರಕ್ಕೆ ,ಜನರು ಕಲ್ಲು ಹೊಡೆಯುವ ಕಾಲ ಬರುತ್ತೆ.ಸಿಎಂ ಸಿದ್ದರಾಮಯ್ಯ ಮಾತನ್ನು ಯಾರೂ ಕೇಳುತ್ತಿಲ್ಲ. ಮಂತ್ರಿಗಳಿಗೆ ಊಟ-ತಿಂಡಿ ಕೊಟ್ಟು ಗದ್ದ-ತುಟಿ ಸವರುವ ಪರಿಸ್ಥಿತಿ ಸಿಎಂ ಸಿದ್ದರಾಮಯ್ಯರಿಗೆ ಬಂದಿದೆ ಎಂದು ವ್ಯಂಗ್ಯವಾಡಿದರು.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…