ರಾಜ್ಯ

ಲೈಂಗಿಕ ದೌರ್ಜನ್ಯ ಪ್ರಕರಣ: ಸಂಸದ ಪ್ರಜ್ವಲ್‌ ವಿರುದ್ಧ ಅರೆಸ್ಟ್‌ ವಾರೆಂಟ್

ಬೆಂಗಳೂರು: ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬಂಧನದ ವಾರೆಂಟ್ ಜಾರಿಗೊಳಿಸಿದೆ. ಸದ್ಯ ಪ್ರಜ್ವಲ್‌ ವಿದೇಶದಲ್ಲಿದ್ದು, ಭಾರತಕ್ಕೆ ಮರಳಿದ ಕೂಡಲೇ ಬಂಧಿಸಲಾಗುವುದು. ಜತೆಗೆ ಪಾಸ್‌ಪೋರ್ಟ್ ರದ್ದತಿಗೂ ಕೂಡ ವಿಶೇಷ ತನಿಖಾ ದಳ ಪ್ರಯತ್ನ ನಡೆಸುತ್ತಿದೆ.

ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇರೆಗೆ ಹೊಳೆನರಸೀಪುರ ಠಾಣೆಯಲ್ಲಿ ಪ್ರಜ್ವಲ್‌ ಹಾಗೂ ಅವರ ತಂದೆ ರೇವಣ್ಣ ವಿರುದ್ಞ ದೂರು ದಾಖಲಾಗಿತ್ತು. ಈ ಕೃತ್ಯದ ಸಂತ್ರಸ್ತೆ ಹೇಳಿಕೆ ಆಧರಿಸಿ ಪ್ರಜ್ವಲ್ ರೇವಣ್ಣ ಅವರ ಮೇಲೆ 376 ರಡಿ (ಅತ್ಯಾಚಾರ) ಸೆಕ್ಷನ್ ಅನ್ನು ಸಹ ಎಸ್‌ಐಟಿ ಸೇರಿಸಿತ್ತು. ಇದಾದ ಬಳಿಕ ವಿಚಾರಣೆಗೆ ಹಾಜರಾಗುವಂತೆ ಎಸ್​ಐಟಿ ನೋಟಿಸ್​ ನೀಡಿದ್ದರೂ, ಪ್ರಜ್ವಲ್​ ರೇವಣ್ಣ ಇನ್ನೂವರೆಗು ವಿಚಾರಣೆಗೆ ಹಾಜರಾಗಿಲ್ಲ.

ಪ್ರಜ್ವಲ್ ರೇವಣ್ಣ ವಿರುದ್ಧ ಹೊರಡಿಸಿದ್ದ ನೋಟಿಸ್‌ಗಳ ಬಗ್ಗೆ ಕೋರ್ಟ್‌ ಮಾಹಿತಿ ಕೇಳಿತ್ತು. ಈ ವೇಳೆ ಲುಕ್‌ ಔಟ್ ನೋಟಿಸ್, ಬ್ಲೂ ಕಾರ್ನರ್ ನೋಟಿಸ್ ನೀಡಿರುವ ಬಗ್ಗೆ ಮಾಹಿತಿ ನೀಡಿದ್ದ ಎಸ್‌ಐಟಿ, ಬಂಧನಕ್ಕೆ ಚಾರ್ಜ್ ಶೀಟ್ ಅವಶ್ಯಕತೆ ಇಲ್ಲ ಎಂದು ಕೋರ್ಟ್‌ಗೆ ಮನವರಿಕೆ ಮಾಡಿತ್ತು. ಹೀಗಾಗಿ ಕೋರ್ಟ್‌ ಬಂಧನದ ವಾರಂಟ್‌ ಜಾರಿ ಮಾಡಿದೆ.

ಪ್ರಜ್ವಲ್ ತಲೆಮರೆಸಿಕೊಂಡು 22 ದಿನ:
ಇನ್ನು ಸಂಸದ ಪ್ರಜ್ವಲ್ ರೇವಣ್ಣ ನಾಪತ್ತೆಯಾಗಿ ಈವರೆಗೆ 22 ದಿನಗಳು ಕಳೆದಿವೆ. ಎಸ್‌ಐಟಿ ವತಿಯಿಂದ ಲೈಂಗಿಕ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಕೇಸ್‌ ಕುರಿತು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿಗೊಳಿಸಿದರೂ ಈವರೆಗೆ ಹಾಜರಾಗಿಲ್ಲ. ನಾನು ವಿದೇಶದಲ್ಲಿದ್ದೇನೆ, ವಿಚಾರಣೆಗೆ ಹಾಜರಾಗಲು ಒಂದು ವಾರಗಳ ಕಾಲಾವಕಾಶ ಕೊಡಿ ಎಂದು ಸಂಸದ ಪ್ರಜ್ವಲ್ ರೇವಣ್ಣ ಮನವಿ ಮಾಡಿದ್ದರು. ಇದಾದ ನಂತರ, ನಾಲ್ಕೈದು ಬಾರಿ ಭಾರತಕ್ಕೆ ಮರಳಲು ಟಿಕೆಟ್ ಬುಕ್ ಮಾಡಿದ್ದರೂ, ಪುನಃ ಅದನ್ನು ರದ್ದುಗೊಳಿಸಿದ್ದಾರೆ. ಜೊತೆಗೆ, ಪ್ರಜ್ವಲ್ ರೇವಣ್ಣನನ್ನು ವಶಕ್ಕೆ ಪಡೆಯಲು ಎಸ್‌ಐಟಿ ಬ್ಲೂ ಕಾರ್ನರ್ ನೋಟೀಸ್ ಹೊರಡಿಸಿತ್ತು.

ಪ್ರಜ್ವಲ್‌ ಖಾತೆಗೆ ದೊಡ್ಡ ಮೊತ್ತದ ಹಣ ವರ್ಗ:
ವಿದೇಶದಲ್ಲಿ ತಲೆಮರೆಸಿಕೊಂಡಿರುವ ಸಂಸದ ಪ್ರಜ್ವಲ್‌ ರೇವಣ್ಣ ಅವರ ಖಾತೆಗೆ ಬೆಂಗಳೂರಿಗೆ ಉದ್ಯಮಿಯೊಬ್ಬರು ದೊಡ್ಡ ಮೊತ್ತದ ಹಣ ವರ್ಗಾವಣೆ ಮಾಡಿತರುವುದಾಗಿ ಎಸ್‌ಐಟಿ ಮಾಹಿತಿ ಕಲೆ ಹಾಕಿದೆ. ಹೀಗಾಗಿ ಪ್ರಜ್ವಲ್‌ ಖಾತೆಯನ್ನು ಮುಟ್ಟುಗೊಲು ಹಾಕಲು ಎಸ್‌ಐಟಿ ಸಿದ್ಧತೆ ನಡೆಸಿದೆ ಎನ್ನಲಾಗಿದೆ. ಪ್ರಜ್ವಲ್‌ ಜೊತೆ ಬೆಂಗಳೂರು ಮೂಲದ ಓರ್ವ ಹಾಗೂ ದುಬೈ ಮೂಲದ ಓರ್ವ ಸ್ನೇಹಿತ ಇದ್ದಾರೆ ಎಂದು ತಿಳಿದು ಬಂದಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

50 mins ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

55 mins ago

ಅಸಮಾಧಾನದ ಬೇಗೆ: ಸಿಎಂ ಡಿಕೆಶಿಗೆ ಹೈಕಮಾಂಡ್ ‘ಎಸಿ’

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ಕಾಂಗ್ರೆಸ್‌ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…

1 hour ago

ನಾಲ್ಕು ಶೂಟೌಟ್ ಪ್ರಕರಣ; ಏಳು ಸಾವು

ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…

1 hour ago

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

10 hours ago