ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳ ಬಗ್ಗೆ ದೂರು ಆಲಿಸಲು ಎಸ್ಐಟಿ ಅಧಿಕಾರಿಗಳು ಲೈಂಗಿಕ ದೌರ್ಜನ್ಯ ಸಂತ್ರಸ್ಥೆಯರಿಗೆಂದೇ ಸಹಾಯವಾಣಿ(6360938947) ಆರಂಭಿಸಿದೆ. ಪ್ರತಿನಿತ್ಯವು ಸಹಾಯವಾಣಿಗೆ ಕರೆ ಮಾಡುತ್ತಿರುವ ಸಂತ್ರಸ್ತೆಯರು ಮತ್ತು ಅವರ ಸಂಬಂಧಿಕರು ದಯವಿಟ್ಟು ವಿಡಿಯೋಗಳನ್ನು ಅಳಿಸಿ ನಮ್ಮ ಮರ್ಯಾದೆ ಕಾಪಾಡಿ ಎಂದು ಎಸ್ಐಟಿ ಅಧಿಕಾರಿಗಳನ್ನು ಮನವಿ ಮಾಡುತ್ತಿದ್ದಾರೆ.
ಕರೆ ಸ್ವೀಕರಿಸಲೆಂದೇ ಪ್ರತ್ಯೇಕ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ. ನಿತ್ಯವು 10 ರಿಂದ 20 ದೂರವಾಣಿ ಕರೆಗಳು ಬರುತ್ತಿದ್ದು, ಎಸ್ಐಟಿ ತಂಡ ಪ್ರತಿಯೊಬ್ಬರ ಮಾತುಗಳನ್ನು ಆಲಿಸಿ ಗಂಭೀರವಾಗಿ ಪರಿಗಣಿಸುತ್ತಿದೆ. ಸಂತ್ರಸ್ತೆಯರ ಒಪ್ಪಿಗೆ ಪಡೆದು ಹೇಳಿಕೆ ದಾಖಲಿಸಿಕೊಳ್ಳುತ್ತಿದ್ದು, ಹೇಳಿಕೆ ನೀಡದ ಸಂತ್ರಸ್ತೆಯರಿಗೆ ಸಿಬ್ಬಂದಿ ಧೈರ್ಯ ತುಂಬುತ್ತಿದ್ದಾರೆ. ಯಾವುದೇ ಸಮಯದಲ್ಲಾದರೂ ಕರೆ ಮಾಡಿ ಹೇಳಿಕೆ ನೀಡುವಂತೆ ಕೋರುತ್ತಿದ್ದಾರೆ.
ಸಾಮಾಜಿಕ ಜಾಲತಾಣ ಮತ್ತು ಇತರೆಡೆ ವಿಡಿಯೋಗಳು ಹರಿದಾಡುತ್ತಿವೆ. ವಿಡಿಯೋ ನೋಡಿದ ಪರಿಚಯಸ್ಥರು, ಸಂಬಂಧಿಕರು ನಮ್ಮ ಬಗ್ಗೆ ಕೆಟ್ಟದಾಗಿ ಮಾತನಾಡುತ್ತಿದ್ದಾರೆ. ಇದರಿಂದ ನಮಗೆ ತೀವ್ರ ಬೇಸರವಾಗಿ, ಮಾನಸಿಕವಾಗಿ ಕುಗ್ಗಿದ್ದೇವೆ. ದಯಮಾಡಿ ಎಲ್ಲ ಕಡೆ ಹರಿದಾಡುತ್ತಿರುವ ವಿಡಿಯೋಗಳನ್ನು ಅಳಿಸಿ ಎಂದು ಕೆಲ ಸಂತ್ರಸ್ತೆಯರು ಮನವಿ ಮಾಡಿಕೊಳ್ಳುತ್ತಿದ್ದಾರೆ.
ಮನೆಯಿಂದ ಹೊರ ಹೋಗಲು ಆಗುತ್ತಿಲ್ಲ. ರಸ್ತೆ ಹಾಗೂ ಮಾರುಕಟ್ಟೆಗಳಲ್ಲಿ ಅವಮಾನವಾಗುತ್ತಿದೆ. ಹಲವರ ಮೊಬೈಲ್ ಹಾಗೂ ಕಂಪ್ಯೂಟರ್ಗಳಲ್ಲಿ ವಿಡಿಯೋಗಳಿವೆ ಅಂಥವರನ್ನು ಗುರುತಿಸಿ ಕ್ರಮ ಕೈಗೊಳ್ಳಿ ಎಂದು ಸಂತ್ರಸ್ತೆಯೊಬ್ಬರ ಕುಟುಂಬಸ್ಥರು ಕೋರಿದ್ದಾರೆ.
ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್.ಶ್ರೀವತ್ಸ…
ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…
ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…
ಬೆಂಗಳೂರು: ಮುಡಾ ಕೇಸ್ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…
ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್ಐಟಿ…
ಮೈಸೂರು: ಮುಡಾದಲ್ಲಿ ಹಗರಣ ನಡೆದಿದೆ ಎಂದು ಆರ್ಐಟಿ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇ.ಡಿ.ಗೆ ದೂರು ನೀಡಿದ್ದರು. ಈ ದೂರಿನ ಆಧಾರದ…