ರಾಜ್ಯ

ವರ್ಷದ ನಂತರ ಬಾಗಿಲು ತೆರೆದ ಹಾಸನಾಂಬ ದೇಗುಲ: ವಿನೂತನ ವೈಮಾನಿಕ ವೀಕ್ಷಣೆಗೆ ಅವಕಾಶ

ಹಾಸನ: ಐತಿಹಾಸಿಕ ಹಾಗೂ ಪವಾಡ ಸ್ವರೂಪಿಣಿಯಾದ ಹಾಸನ ಜಿಲ್ಲೆಯ ಪ್ರಸಿದ್ಧ ದೇಗುಲ ಹಾಸನಾಂಬೆಯ ದರುಶನ ವರ್ಷದ ಬಳಿಕ ಇಂದು ನವೆಂಬರ್ 2ರಂದು ಭಕ್ತಾದಿಗಳಿಗೆ ಮುಕ್ತವಾಗಿದೆ.

ಇಂದು ಗುರುವಾರ ಮಧ್ಯಾಹ್ನ 12 ಗಂಟೆ 23 ನಿಮಿಷಕ್ಕೆ ದೇವಾಲಯದ ಬಾಗಿಲನ್ನು ತೆರೆಯಲಾಗಿದ್ದು, ಸಾರ್ವಜನಿಕರಿಗೆ ನಾಳೆ ನ.3ರಿಂದ ನ.14ರವರೆಗೆ ದಿನದ 24 ಗಂಟೆಯೂ ದರ್ಶನಕ್ಕೆ ಅವಕಾಶ ಇರುತ್ತದೆ. ಇಂದು ಹಾಸನಾಂಬೆಯ ಗರ್ಭಗುಡಿ ಸ್ವಚ್ಛತೆ, ಪೂಜೆ, ನೈವೇದ್ಯ ಪ್ರಕ್ರಿಯೆಗಳಷ್ಟೇ ನಡೆಯಲಿದೆ. ನಾಳೆ ಶುಕ್ರವಾರ ಬೆಳಿಗ್ಗೆ 6 ಗಂಟೆಯಿಂದ ಹಾಸನಾಂಬಾ ದೇವಿಯ ದರ್ಶನ ಪಡೆಯಲು ಅವಕಾಶವಿದೆ.

ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನದ ಅಧಿದೇವತೆ ಹಾಸನಾಂಬೆ ಉತ್ಸವಕ್ಕೆ ದಿನಗಣನೆ ಆರಂಭವಾಗಿದೆ. ನವೆಂಬರ್ 2 ರಿಂದ 15 ವರೆಗೆ ಹಾಸನಾಂಬ ಉತ್ಸವ ಜರುಗಲಿದೆ. ಹಾಸನಾಂಬೆಯ ದರ್ಶನೋತ್ಸವಕ್ಕೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ಜಿಲ್ಲಾಡಳಿತದಿಂದ ವಿಶೇಷ ಪ್ಯಾಕೇಜ್‌ಗಳನ್ನು ಆಯೋಜನೆ ಮಾಡಲಾಗಿದೆ.

ಇದೇ ಮೊದಲ ಬಾರಿಗೆ ದೇವಿಯ ದರ್ಶನದ ಜೊತೆ ಜೊತೆಯಲ್ಲೇ ಹಲವು ರೀತಿಯ ಹೊಸ ಪ್ರಯೋಗ, ನವ ವಿಧಾನ ಅಳವಡಿಸಲಾಗುತ್ತಿದೆ. ವಿವಿಧೆಡೆಗಳಿಂದ ಬರುವ ಭಕ್ತರು, ಪ್ರವಾಸಿಗರಿಗೆ ಹಾಸನಾಂಬೆ ದರ್ಶನ ದರ್ಶನ ಮಾಡಿಸುವುದರ ಜೊತೆಗೆ ಅವರಿಗೆ ಹಾಸನ ಜಿಲ್ಲೆಯ ಐತಿಹಾಸಿಕ ಮಹತ್ವ, ಪ್ರಾಕೃತಿಕ ಸೊಬಗು, ಶಿಲ್ಪಕಲೆ ಹಾಗೂ ಸಾಂಸ್ಕೃತಿಕ ವೈಭವ ಪರಿಚಯಿಸುವುದರ ಜೊತೆಗೆ ಮನರಂಜನೆ, ಮನೋಲ್ಲಾಸ ಉಣ ಬಡಿಸುವ ಯೋಜನೆಯನ್ನೂ ಹಾಕಿಕೊಳ್ಳಲಾಗಿದೆ. ಇದು ಯಶಸ್ಸಿಯಾದರೆ ಒಟ್ಟಾರೆ ಭಕ್ತರು ಹಾಗೂ ಜನಮಾನಸದಲ್ಲಿ ಉಳಿಯುವ ಉತ್ಸವ ಇದಾಗಲಿದೆ.

ನಾಳೆಯಿಂದ 12 ದಿನ 24 ಗಂಟೆಯೂ ದರ್ಶನ: ದೇವಾಲಯದ ಪ್ರಧಾನ ಅರ್ಚಕ ನಾಗರಾಜ ಅವರ ನೇತೃತ್ವದಲ್ಲಿ ಆದಿಚುಂಚನಗಿರಿ ಮಠಾಧೀಶ ನಿರ್ಮಲಾನಂದ ಸ್ವಾಮಿಗಳ ಸಮ್ಮುಖದಲ್ಲಿ ಇಂದು ದೇವಸ್ಥಾನದ ಬಾಗಿಲನ್ನು ತೆರೆಯಲಾಗಿದೆ.

ವೈಮಾನಿಕ ವೀಕ್ಷಣೆ: ಈ ಸಲದ ಉತ್ಸವದ ಮತ್ತೊಂದು ವಿಶೇಷತೆ ಎಂದರೆ ಆಗಸದಿಂದ ಹಾಸನ ಎಂಬ ವಿನೂತನ ವೈಮಾನಿಕ ವೀಕ್ಷಣೆ ಮಾಡಿರುವುದು. ನ.3 ರಿಂದ 6 ರವರೆಗೆ ಒಬ್ಬರು 4,300 ರೂ. ಪಾವತಿಸಿದರೆ 6-7 ನಿಮಿಷ ಆಗಸದಲ್ಲಿ ಹಾರಾಡಿ ಹಾಸನ ನಗರ, ಸೀಗೆಗುಡ್ಡ, ಮಳೆ ಮಲ್ಲೇಶ್ವರ ದೇವಾಲಯ, ಗೆಂಡೆಕಟ್ಟೆ ವನ್ಯಧಾಮವನ್ನು ಮೇಲಿಂದ ಕಣ್ತುಂಬಿಕೊಳ್ಳಬಹುದಾಗಿದೆ. ಹೆಲಿಕಾಪ್ಟರ್ ಸರ್ಕಾರಿ ಕಾಲೇಜು ಆವರಣದಿಂದ ಹೊರಟು ಅಲ್ಲೇ ಬಂದು ಇಳಿಯಲಿದೆ. ಇಂದು ಒಂದಾದರೆ ಇಡೀ ನಗರದ ತುಂಬೆಲ್ಲಾ ಖಾಸಗಿ ಕಟ್ಟಡ ಸೇರಿದಂತೆ ಸರ್ಕಾರಿ ಕಟ್ಟಡ, ಪ್ರಮುಖ ರಸ್ತೆ ಹಾಗೂ ಜಿಲ್ಲಾದ್ಯಂತ ಎ ಮತ್ತು ಬಿ ಗ್ರೇಡ್ ದೇವಾಲಯಗಳಲ್ಲಿ ಅಲಂಕಾರ ಜೊತೆಗೆ ನಿತ್ಯ ಪೂಜೆ ಮಾಡಲು ಸೂಚಿಸಲಾಗಿದೆ.

andolanait

Recent Posts

ಉತ್ತರ ಪ್ರದೇಶದಲ್ಲಿ ಭಾರತೀಯ ವಾಯುಪಡೆಯ ವಿಮಾನ ಪತನ: ಇಬ್ಬರು ಪೈಲಟ್‌ಗಳು ಬಚಾವ್‌

ಉತ್ತರ ಪ್ರದೇಶ: ಇಲ್ಲಿನ ಪ್ರಯಾಗ್‌ರಾಜ್‌ನಲ್ಲಿ ತರಬೇತಿ ಹಾರಾಟ ನಡೆಸುತ್ತಿದ್ದಾಗ ಭಾರತೀಯ ವಾಯುಪಡೆಯ ಮೈಕ್ರೋಲೈಟ್‌ ವಿಮಾನವೊಂದು ಅಪಘಾತಕ್ಕೀಡಾಗಿದೆ. ವಿಮಾನದಲ್ಲಿದ್ದ ಇಬ್ಬರೂ ಪೈಲಟ್‌ಗಳನ್ನು…

34 mins ago

ನೈಸರ್ಗಿಕ ಕೃಷಿ ಪದ್ಧತಿ ಎಲ್ಲರ ಪಾಲಿಗೆ ಜೀವನೋಪಾಯವಾಗಲಿ: ಡಾ. ಶರಣ ಪ್ರಕಾಶ್‌ ಪಾಟೀಲ್

ಬೆಂಗಳೂರು: ಕರ್ನಾಟಕದಲ್ಲಿ ಜೀವನೋಪಾಯಕ್ಕೆ ಅದರಲ್ಲೂ ಮಹಿಳೆಯರ ಜೀವನೋಪಾಯಕ್ಕೆ ಹೆಚ್ಚು ಆದ್ಯತೆ ನೀಡಲಾಗುತ್ತಿದೆ. ಇದರ ಜೊತೆಗೆ ನೃಸರ್ಗಿಕ ಕೃಷಿ ಪದ್ಧತಿಯ ಬಗ್ಗೆ…

44 mins ago

ಚಾಮುಂಡಿಬೆಟ್ಟದ ಪಾರಂಪರಿಕತೆಗೆ ಧಕ್ಕೆಯಾಗದಂತೆ ಅಭಿವೃದ್ಧಿ: ಡಾ.ಹೆಚ್.ಸಿ.ಮಹದೇವಪ್ಪ

ಮೈಸೂರು: ಪ್ರಸಾದ್ ಯೋಜನೆಯಡಿ ಚಾಮುಂಡಿ ಬೆಟ್ಟದ ಪಾರಂಪರಿಕತೆಗೆ ಯಾವುದೇ ಧಕ್ಕೆ ಆಗದಂತೆ ಅಭಿವೃದ್ಧಿ ಮಾಡಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆಯ…

59 mins ago

ಅಶ್ಲೀಲ ಮೆಸೇಜ್‌ ಪ್ರಕರಣ: ವಿಚಾರಣೆಗೆ ಹಾಜರಾಗುವಂತೆ ದರ್ಶನ್‌ ಪತ್ನಿ ವಿಜಯಲಕ್ಷ್ಮೀಗೆ ಸಿಸಿಬಿ ನೋಟಿಸ್‌

ಬೆಂಗಳೂರು: ಸೋಷಿಯಲ್‌ ಮೀಡಿಯಾದಲ್ಲಿ ಅಶ್ಲೀಲ ಮೆಸೇಜ್‌, ಕಮೆಂಟ್‌ ಮಾಡಿ ನಿಂದಿಸಿದ ಆರೋಪಕ್ಕೆ ಸಂಬಂಧಿಸಿದಂತೆ ದರ್ಶನ್‌ ಪತ್ನಿ ವಿಜಯಲಕ್ಷ್ಮೀಗೆ ಸಿಸಿಬಿ ಪೊಲೀಸರು…

1 hour ago

ಹಾಸನ| ಕುಡಿದ ಮತ್ತಿನಲ್ಲಿ ಸ್ನೇಹಿತನ ಕೊಲೆ

ಹಾಸನ: ಕುಡಿದ ಮತ್ತಿನಲ್ಲಿ ಗೆಳೆಯರು ಸ್ನೇಹಿತನನ್ನೇ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಕಬ್ಬೂರು ಗ್ರಾಮದಲ್ಲಿ ನಡೆದಿದೆ. ಗಣೇಶ್‌…

2 hours ago

ಚಾಮುಂಡಿಬೆಟ್ಟ ಉಳಿಸಿ: ಅಭಿವೃದ್ಧಿ ಕಾಮಗಾರಿಗಳ ವಿರುದ್ಧ ಸಾರ್ವಜನಿಕರ ಆಕ್ರೋಶ

ಮೈಸೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟವನ್ನು ಉಳಿಸುವಂತೆ ಒತ್ತಾಯಿಸಿ ಸಾರ್ವಜನಿಕರು ಹಾಗೂ ಪರಿಸರವಾದಿಗಳು ಪ್ರತಿಭಟನೆ ನಡೆಸಿದರು. ಚಾಮುಂಡೇಶ್ವರಿ ದೇವಸ್ಥಾನದ…

3 hours ago