ರಾಜ್ಯ

ವರ್ಷದ ನಂತರ ಬಾಗಿಲು ತೆರೆದ ಹಾಸನಾಂಬ ದೇಗುಲ: ವಿನೂತನ ವೈಮಾನಿಕ ವೀಕ್ಷಣೆಗೆ ಅವಕಾಶ

ಹಾಸನ: ಐತಿಹಾಸಿಕ ಹಾಗೂ ಪವಾಡ ಸ್ವರೂಪಿಣಿಯಾದ ಹಾಸನ ಜಿಲ್ಲೆಯ ಪ್ರಸಿದ್ಧ ದೇಗುಲ ಹಾಸನಾಂಬೆಯ ದರುಶನ ವರ್ಷದ ಬಳಿಕ ಇಂದು ನವೆಂಬರ್ 2ರಂದು ಭಕ್ತಾದಿಗಳಿಗೆ ಮುಕ್ತವಾಗಿದೆ.

ಇಂದು ಗುರುವಾರ ಮಧ್ಯಾಹ್ನ 12 ಗಂಟೆ 23 ನಿಮಿಷಕ್ಕೆ ದೇವಾಲಯದ ಬಾಗಿಲನ್ನು ತೆರೆಯಲಾಗಿದ್ದು, ಸಾರ್ವಜನಿಕರಿಗೆ ನಾಳೆ ನ.3ರಿಂದ ನ.14ರವರೆಗೆ ದಿನದ 24 ಗಂಟೆಯೂ ದರ್ಶನಕ್ಕೆ ಅವಕಾಶ ಇರುತ್ತದೆ. ಇಂದು ಹಾಸನಾಂಬೆಯ ಗರ್ಭಗುಡಿ ಸ್ವಚ್ಛತೆ, ಪೂಜೆ, ನೈವೇದ್ಯ ಪ್ರಕ್ರಿಯೆಗಳಷ್ಟೇ ನಡೆಯಲಿದೆ. ನಾಳೆ ಶುಕ್ರವಾರ ಬೆಳಿಗ್ಗೆ 6 ಗಂಟೆಯಿಂದ ಹಾಸನಾಂಬಾ ದೇವಿಯ ದರ್ಶನ ಪಡೆಯಲು ಅವಕಾಶವಿದೆ.

ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನದ ಅಧಿದೇವತೆ ಹಾಸನಾಂಬೆ ಉತ್ಸವಕ್ಕೆ ದಿನಗಣನೆ ಆರಂಭವಾಗಿದೆ. ನವೆಂಬರ್ 2 ರಿಂದ 15 ವರೆಗೆ ಹಾಸನಾಂಬ ಉತ್ಸವ ಜರುಗಲಿದೆ. ಹಾಸನಾಂಬೆಯ ದರ್ಶನೋತ್ಸವಕ್ಕೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ಜಿಲ್ಲಾಡಳಿತದಿಂದ ವಿಶೇಷ ಪ್ಯಾಕೇಜ್‌ಗಳನ್ನು ಆಯೋಜನೆ ಮಾಡಲಾಗಿದೆ.

ಇದೇ ಮೊದಲ ಬಾರಿಗೆ ದೇವಿಯ ದರ್ಶನದ ಜೊತೆ ಜೊತೆಯಲ್ಲೇ ಹಲವು ರೀತಿಯ ಹೊಸ ಪ್ರಯೋಗ, ನವ ವಿಧಾನ ಅಳವಡಿಸಲಾಗುತ್ತಿದೆ. ವಿವಿಧೆಡೆಗಳಿಂದ ಬರುವ ಭಕ್ತರು, ಪ್ರವಾಸಿಗರಿಗೆ ಹಾಸನಾಂಬೆ ದರ್ಶನ ದರ್ಶನ ಮಾಡಿಸುವುದರ ಜೊತೆಗೆ ಅವರಿಗೆ ಹಾಸನ ಜಿಲ್ಲೆಯ ಐತಿಹಾಸಿಕ ಮಹತ್ವ, ಪ್ರಾಕೃತಿಕ ಸೊಬಗು, ಶಿಲ್ಪಕಲೆ ಹಾಗೂ ಸಾಂಸ್ಕೃತಿಕ ವೈಭವ ಪರಿಚಯಿಸುವುದರ ಜೊತೆಗೆ ಮನರಂಜನೆ, ಮನೋಲ್ಲಾಸ ಉಣ ಬಡಿಸುವ ಯೋಜನೆಯನ್ನೂ ಹಾಕಿಕೊಳ್ಳಲಾಗಿದೆ. ಇದು ಯಶಸ್ಸಿಯಾದರೆ ಒಟ್ಟಾರೆ ಭಕ್ತರು ಹಾಗೂ ಜನಮಾನಸದಲ್ಲಿ ಉಳಿಯುವ ಉತ್ಸವ ಇದಾಗಲಿದೆ.

ನಾಳೆಯಿಂದ 12 ದಿನ 24 ಗಂಟೆಯೂ ದರ್ಶನ: ದೇವಾಲಯದ ಪ್ರಧಾನ ಅರ್ಚಕ ನಾಗರಾಜ ಅವರ ನೇತೃತ್ವದಲ್ಲಿ ಆದಿಚುಂಚನಗಿರಿ ಮಠಾಧೀಶ ನಿರ್ಮಲಾನಂದ ಸ್ವಾಮಿಗಳ ಸಮ್ಮುಖದಲ್ಲಿ ಇಂದು ದೇವಸ್ಥಾನದ ಬಾಗಿಲನ್ನು ತೆರೆಯಲಾಗಿದೆ.

ವೈಮಾನಿಕ ವೀಕ್ಷಣೆ: ಈ ಸಲದ ಉತ್ಸವದ ಮತ್ತೊಂದು ವಿಶೇಷತೆ ಎಂದರೆ ಆಗಸದಿಂದ ಹಾಸನ ಎಂಬ ವಿನೂತನ ವೈಮಾನಿಕ ವೀಕ್ಷಣೆ ಮಾಡಿರುವುದು. ನ.3 ರಿಂದ 6 ರವರೆಗೆ ಒಬ್ಬರು 4,300 ರೂ. ಪಾವತಿಸಿದರೆ 6-7 ನಿಮಿಷ ಆಗಸದಲ್ಲಿ ಹಾರಾಡಿ ಹಾಸನ ನಗರ, ಸೀಗೆಗುಡ್ಡ, ಮಳೆ ಮಲ್ಲೇಶ್ವರ ದೇವಾಲಯ, ಗೆಂಡೆಕಟ್ಟೆ ವನ್ಯಧಾಮವನ್ನು ಮೇಲಿಂದ ಕಣ್ತುಂಬಿಕೊಳ್ಳಬಹುದಾಗಿದೆ. ಹೆಲಿಕಾಪ್ಟರ್ ಸರ್ಕಾರಿ ಕಾಲೇಜು ಆವರಣದಿಂದ ಹೊರಟು ಅಲ್ಲೇ ಬಂದು ಇಳಿಯಲಿದೆ. ಇಂದು ಒಂದಾದರೆ ಇಡೀ ನಗರದ ತುಂಬೆಲ್ಲಾ ಖಾಸಗಿ ಕಟ್ಟಡ ಸೇರಿದಂತೆ ಸರ್ಕಾರಿ ಕಟ್ಟಡ, ಪ್ರಮುಖ ರಸ್ತೆ ಹಾಗೂ ಜಿಲ್ಲಾದ್ಯಂತ ಎ ಮತ್ತು ಬಿ ಗ್ರೇಡ್ ದೇವಾಲಯಗಳಲ್ಲಿ ಅಲಂಕಾರ ಜೊತೆಗೆ ನಿತ್ಯ ಪೂಜೆ ಮಾಡಲು ಸೂಚಿಸಲಾಗಿದೆ.

andolanait

Recent Posts

ಅಗ್ನಿ ದುರಂತ | ಕೊನೆಗೂ ಅಬಕಾರಿ ಡಿಸಿ ತಲೆದಂಡ

ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್‌ಬಾರ್) ನಲ್ಲಿ ಸಂಭವಿಸಿದ  ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…

15 hours ago

ಮಕ್ಕಳ ಮನದಂಗಳದಲ್ಲಿ ಗಾಂಧೀ ಚಿಂತನೆಯ ಬೇರುಗಳು

ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…

18 hours ago

ಗಾಂಧೀ ಅಭಿಯಾನ ಅರಿವಿನ ಯಾನ | ಗಾಂಧೀಜಿ ಅಹಿಂಸಾ ಮಾರ್ಗಕ್ಕೆ ಮೈಲಾರ ಮಹಾದೇವ

ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…

18 hours ago

ಗಾಂಧಿ ಅಭಿಯಾನ ಅರಿವಿನ ಯಾನ | ವಿಲಾಯತಿಗೆ ತೆರಳಲು ಅಮ್ಮ ಒಪ್ಪಿದರು

೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…

18 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 27 ಶನಿವಾರ

21 hours ago

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

2 days ago