ರಾಜ್ಯ

ವರ್ಷದ ನಂತರ ಬಾಗಿಲು ತೆರೆದ ಹಾಸನಾಂಬ ದೇಗುಲ: ವಿನೂತನ ವೈಮಾನಿಕ ವೀಕ್ಷಣೆಗೆ ಅವಕಾಶ

ಹಾಸನ: ಐತಿಹಾಸಿಕ ಹಾಗೂ ಪವಾಡ ಸ್ವರೂಪಿಣಿಯಾದ ಹಾಸನ ಜಿಲ್ಲೆಯ ಪ್ರಸಿದ್ಧ ದೇಗುಲ ಹಾಸನಾಂಬೆಯ ದರುಶನ ವರ್ಷದ ಬಳಿಕ ಇಂದು ನವೆಂಬರ್ 2ರಂದು ಭಕ್ತಾದಿಗಳಿಗೆ ಮುಕ್ತವಾಗಿದೆ.

ಇಂದು ಗುರುವಾರ ಮಧ್ಯಾಹ್ನ 12 ಗಂಟೆ 23 ನಿಮಿಷಕ್ಕೆ ದೇವಾಲಯದ ಬಾಗಿಲನ್ನು ತೆರೆಯಲಾಗಿದ್ದು, ಸಾರ್ವಜನಿಕರಿಗೆ ನಾಳೆ ನ.3ರಿಂದ ನ.14ರವರೆಗೆ ದಿನದ 24 ಗಂಟೆಯೂ ದರ್ಶನಕ್ಕೆ ಅವಕಾಶ ಇರುತ್ತದೆ. ಇಂದು ಹಾಸನಾಂಬೆಯ ಗರ್ಭಗುಡಿ ಸ್ವಚ್ಛತೆ, ಪೂಜೆ, ನೈವೇದ್ಯ ಪ್ರಕ್ರಿಯೆಗಳಷ್ಟೇ ನಡೆಯಲಿದೆ. ನಾಳೆ ಶುಕ್ರವಾರ ಬೆಳಿಗ್ಗೆ 6 ಗಂಟೆಯಿಂದ ಹಾಸನಾಂಬಾ ದೇವಿಯ ದರ್ಶನ ಪಡೆಯಲು ಅವಕಾಶವಿದೆ.

ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನದ ಅಧಿದೇವತೆ ಹಾಸನಾಂಬೆ ಉತ್ಸವಕ್ಕೆ ದಿನಗಣನೆ ಆರಂಭವಾಗಿದೆ. ನವೆಂಬರ್ 2 ರಿಂದ 15 ವರೆಗೆ ಹಾಸನಾಂಬ ಉತ್ಸವ ಜರುಗಲಿದೆ. ಹಾಸನಾಂಬೆಯ ದರ್ಶನೋತ್ಸವಕ್ಕೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ಜಿಲ್ಲಾಡಳಿತದಿಂದ ವಿಶೇಷ ಪ್ಯಾಕೇಜ್‌ಗಳನ್ನು ಆಯೋಜನೆ ಮಾಡಲಾಗಿದೆ.

ಇದೇ ಮೊದಲ ಬಾರಿಗೆ ದೇವಿಯ ದರ್ಶನದ ಜೊತೆ ಜೊತೆಯಲ್ಲೇ ಹಲವು ರೀತಿಯ ಹೊಸ ಪ್ರಯೋಗ, ನವ ವಿಧಾನ ಅಳವಡಿಸಲಾಗುತ್ತಿದೆ. ವಿವಿಧೆಡೆಗಳಿಂದ ಬರುವ ಭಕ್ತರು, ಪ್ರವಾಸಿಗರಿಗೆ ಹಾಸನಾಂಬೆ ದರ್ಶನ ದರ್ಶನ ಮಾಡಿಸುವುದರ ಜೊತೆಗೆ ಅವರಿಗೆ ಹಾಸನ ಜಿಲ್ಲೆಯ ಐತಿಹಾಸಿಕ ಮಹತ್ವ, ಪ್ರಾಕೃತಿಕ ಸೊಬಗು, ಶಿಲ್ಪಕಲೆ ಹಾಗೂ ಸಾಂಸ್ಕೃತಿಕ ವೈಭವ ಪರಿಚಯಿಸುವುದರ ಜೊತೆಗೆ ಮನರಂಜನೆ, ಮನೋಲ್ಲಾಸ ಉಣ ಬಡಿಸುವ ಯೋಜನೆಯನ್ನೂ ಹಾಕಿಕೊಳ್ಳಲಾಗಿದೆ. ಇದು ಯಶಸ್ಸಿಯಾದರೆ ಒಟ್ಟಾರೆ ಭಕ್ತರು ಹಾಗೂ ಜನಮಾನಸದಲ್ಲಿ ಉಳಿಯುವ ಉತ್ಸವ ಇದಾಗಲಿದೆ.

ನಾಳೆಯಿಂದ 12 ದಿನ 24 ಗಂಟೆಯೂ ದರ್ಶನ: ದೇವಾಲಯದ ಪ್ರಧಾನ ಅರ್ಚಕ ನಾಗರಾಜ ಅವರ ನೇತೃತ್ವದಲ್ಲಿ ಆದಿಚುಂಚನಗಿರಿ ಮಠಾಧೀಶ ನಿರ್ಮಲಾನಂದ ಸ್ವಾಮಿಗಳ ಸಮ್ಮುಖದಲ್ಲಿ ಇಂದು ದೇವಸ್ಥಾನದ ಬಾಗಿಲನ್ನು ತೆರೆಯಲಾಗಿದೆ.

ವೈಮಾನಿಕ ವೀಕ್ಷಣೆ: ಈ ಸಲದ ಉತ್ಸವದ ಮತ್ತೊಂದು ವಿಶೇಷತೆ ಎಂದರೆ ಆಗಸದಿಂದ ಹಾಸನ ಎಂಬ ವಿನೂತನ ವೈಮಾನಿಕ ವೀಕ್ಷಣೆ ಮಾಡಿರುವುದು. ನ.3 ರಿಂದ 6 ರವರೆಗೆ ಒಬ್ಬರು 4,300 ರೂ. ಪಾವತಿಸಿದರೆ 6-7 ನಿಮಿಷ ಆಗಸದಲ್ಲಿ ಹಾರಾಡಿ ಹಾಸನ ನಗರ, ಸೀಗೆಗುಡ್ಡ, ಮಳೆ ಮಲ್ಲೇಶ್ವರ ದೇವಾಲಯ, ಗೆಂಡೆಕಟ್ಟೆ ವನ್ಯಧಾಮವನ್ನು ಮೇಲಿಂದ ಕಣ್ತುಂಬಿಕೊಳ್ಳಬಹುದಾಗಿದೆ. ಹೆಲಿಕಾಪ್ಟರ್ ಸರ್ಕಾರಿ ಕಾಲೇಜು ಆವರಣದಿಂದ ಹೊರಟು ಅಲ್ಲೇ ಬಂದು ಇಳಿಯಲಿದೆ. ಇಂದು ಒಂದಾದರೆ ಇಡೀ ನಗರದ ತುಂಬೆಲ್ಲಾ ಖಾಸಗಿ ಕಟ್ಟಡ ಸೇರಿದಂತೆ ಸರ್ಕಾರಿ ಕಟ್ಟಡ, ಪ್ರಮುಖ ರಸ್ತೆ ಹಾಗೂ ಜಿಲ್ಲಾದ್ಯಂತ ಎ ಮತ್ತು ಬಿ ಗ್ರೇಡ್ ದೇವಾಲಯಗಳಲ್ಲಿ ಅಲಂಕಾರ ಜೊತೆಗೆ ನಿತ್ಯ ಪೂಜೆ ಮಾಡಲು ಸೂಚಿಸಲಾಗಿದೆ.

andolanait

Recent Posts

ಓದುಗರ ಪತ್ರ: ಆರೋಗ್ಯ ಸಚಿವರ ಕಳಕಳಿ ಶ್ಲಾಘನೀಯ

ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…

1 day ago

ಓದುಗರ ಪತ್ರ: ರಾಜಕೀಯ ಗದ್ದಲದ ಮುಂದೆ ಜನರ ಸಮಸ್ಯೆ ಗೌಣವಾಗಬಾರದು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…

1 day ago

ಓದುಗರ ಪತ್ರ: ಸಾಹಿತ್ಯ ಸಮಾರಂಭದಲ್ಲಿ ವಿಷಯಾಂತರ ಏಕೆ?

ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…

1 day ago

ಹಾಳಾಗಿರುವ ಜನರೇಟರ್; ಡಯಾಲಿಸಿಸ್ ರೋಗಿಗಳ ಪರದಾಟ

ವೈದ್ಯರು ಮೊಬೈಲ್ ಟಾರ್ಚ್ ‌ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…

1 day ago

1 ಕೆಜಿ 520 ಗ್ರಾಂ ತೂಕದ ಬಟರ್ ಫ್ರೂಟ್ ಬೆಳೆದ ಸಾವಯವ ಕೃಷಿಕ

ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…

1 day ago