ಹಾಸನ: ಕೆರೆಯಲ್ಲಿ ಈಜಲು ಹೋದ ನಾಲ್ವರು ಮಕ್ಕಳು ನೀರಲ್ಲಿ ಮುಳಗಿ ಮೃತಪಟ್ಟಿರುವ ಘಟನೆ ಆಲೂರು ತಾಲೂಕಿನ ತಿಮ್ಮನಹಳ್ಳಿ ಗ್ರಾಮದಲ್ಲಿ ಗುರುವಾರ(ಮೇ.16) ನಡೆದಿದೆ.
ಮೃತರನ್ನು ಹಾಸನದ ಮುತ್ತಿಗೆ ಗ್ರಾಮದ ಜೀವನ್(13) ಸಾತ್ವಿಕ್(11) ವಿಶ್ವಸ್ (12) ಪೃಥ್ವಿ(12) ಎಂದು ಗುರುತಿಸಲಾಗಿದೆ. ಮತ್ತೊಬ್ಬ ಸ್ನೇಹಿತ ಚಿರಾಗ್ ದಡ ತಲುಪಿ ಸಾವಿನಿಂದ ಪಾರಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿಸಲಾಗಿದೆ.
ಮಕ್ಕಳು ಈಜಾಡಲು ತಿಮ್ಮನಹಳ್ಳಿಯ ಕೆರೆಗೆ ಹೋಗಿದ್ದಾಗ ಈ ಘಟನೆ ನಡೆದಿದೆ. ಮೊದಲು ಜೀವನ್ ನೀರಿನಲ್ಲಿ ಮುಳುಗಿದ್ದಾನೆ. ನಂತರ ಅವನನ್ನು ರಕ್ಷಿಸುವಾಗ ಉಳಿದವರು ಮುಳುಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಅಗ್ನಿಶಾಮಕ ಮತ್ತು ತುರ್ತು ಚಿಕಿತ್ಸಾ ವಿಭಾಗದ ಅಧಿಕಾರಿಗಳು ಮತ್ತು ಈಜುಗಾರರ ಸಹಾಯದಿಂದ ಪೊಲೀಸರು ಮೃತದೇಹವನ್ನು ಹೊರತೆಗೆದಿದ್ದಾರೆ. ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಲೂರಿನ ಆಸ್ಪತ್ರೆಯ ಶವಗಾರಕ್ಕೆ ರವಾನಿಸಲಾಗಿದೆ.
ಘಟನ ಸ್ಥಳಕ್ಕೆ ಸಕಲೇಶಪುರ ಶಾಸಕ ಸಿಮೆಂಟ್ ಮಂಜು ಭೇಟಿ ನೀಡಿ ಪೋಷಕರಿಗೆ ಸಾಂತ್ವನ ಹೇಳಿದರು.
ಮೈಸೂರು: ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್ಆರ್ಟಿಸಿ ಬಸ್ಸೊಂದು ಏಕಾಏಕಿ ಮುಂದೆ ಚಲಿಸುತ್ತಿದ್ದ ಮತ್ತೊಂದು ಕೆಎಸ್ಆರ್ಟಿಸಿ ಬಸ್ಗೆ ಡಿಕ್ಕಿ ಹೊಡೆದಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ದ ಯಾತ್ರಾ ಸ್ಥಳವಾದ ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದ…
ನಂಜನಗೂಡು: ಇಂದು ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ಸನ್ನಿಧಿಗೆ ಭಕ್ತಸಾಗರವೇ ಹರಿದುಬಂದಿದೆ. ಇಂದು ಬೆಳಿಗ್ಗೆಯಿಂದಲೂ ಸಾವಿರಾರು…
ಸುಂಟಿಕೊಪ್ಪ: ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಅಭಿವೃದ್ಧಿ ನಿಗಮ ನಿಯಮಿತದಿಂದ ಸುಂಟಿಕೊಪ್ಪದಲ್ಲಿ 3.64 ಕೋಟಿ ರೂ ವೆಚ್ಚದಲ್ಲಿ…
ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ದೇವಾಲಯದಲ್ಲಿ ಇನ್ನು ಮುಂದೆ ದಿನದ 24 ಗಂಟೆಯೂ ಪ್ರಸಾದ ವಿತರಣೆ ಮಾಡಲಾಗುತ್ತದೆ. ಮಧ್ಯಾಹ್ನದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ…