ಹಾಸನ: ಕೆರೆಯಲ್ಲಿ ಈಜಲು ಹೋದ ನಾಲ್ವರು ಮಕ್ಕಳು ನೀರಲ್ಲಿ ಮುಳಗಿ ಮೃತಪಟ್ಟಿರುವ ಘಟನೆ ಆಲೂರು ತಾಲೂಕಿನ ತಿಮ್ಮನಹಳ್ಳಿ ಗ್ರಾಮದಲ್ಲಿ ಗುರುವಾರ(ಮೇ.16) ನಡೆದಿದೆ.
ಮೃತರನ್ನು ಹಾಸನದ ಮುತ್ತಿಗೆ ಗ್ರಾಮದ ಜೀವನ್(13) ಸಾತ್ವಿಕ್(11) ವಿಶ್ವಸ್ (12) ಪೃಥ್ವಿ(12) ಎಂದು ಗುರುತಿಸಲಾಗಿದೆ. ಮತ್ತೊಬ್ಬ ಸ್ನೇಹಿತ ಚಿರಾಗ್ ದಡ ತಲುಪಿ ಸಾವಿನಿಂದ ಪಾರಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿಸಲಾಗಿದೆ.
ಮಕ್ಕಳು ಈಜಾಡಲು ತಿಮ್ಮನಹಳ್ಳಿಯ ಕೆರೆಗೆ ಹೋಗಿದ್ದಾಗ ಈ ಘಟನೆ ನಡೆದಿದೆ. ಮೊದಲು ಜೀವನ್ ನೀರಿನಲ್ಲಿ ಮುಳುಗಿದ್ದಾನೆ. ನಂತರ ಅವನನ್ನು ರಕ್ಷಿಸುವಾಗ ಉಳಿದವರು ಮುಳುಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಅಗ್ನಿಶಾಮಕ ಮತ್ತು ತುರ್ತು ಚಿಕಿತ್ಸಾ ವಿಭಾಗದ ಅಧಿಕಾರಿಗಳು ಮತ್ತು ಈಜುಗಾರರ ಸಹಾಯದಿಂದ ಪೊಲೀಸರು ಮೃತದೇಹವನ್ನು ಹೊರತೆಗೆದಿದ್ದಾರೆ. ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಲೂರಿನ ಆಸ್ಪತ್ರೆಯ ಶವಗಾರಕ್ಕೆ ರವಾನಿಸಲಾಗಿದೆ.
ಘಟನ ಸ್ಥಳಕ್ಕೆ ಸಕಲೇಶಪುರ ಶಾಸಕ ಸಿಮೆಂಟ್ ಮಂಜು ಭೇಟಿ ನೀಡಿ ಪೋಷಕರಿಗೆ ಸಾಂತ್ವನ ಹೇಳಿದರು.
ಡಾ.ಎಂ.ಡಿ.ಉಮೇಶ್, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಮೈಸೂರು ವಿ.ವಿ ಬೆಳಗಾವಿ ಜಿಲ್ಲೆಯ ಹುದಲಿ ಗ್ರಾಮದಲ್ಲಿ ಬಾಲ ಕೃಷ್ಣ ಮತ್ತು ರಾಧಾಬಾಯಿ…
ಡಾಕ್ಟರ್ ಮೆಹತಾ ಮತ್ತು ನಾನು ಅವರ ಮಿತ್ರನ ಮನೆಗೆ ಹೋದೆವು. ಅವರು ನನ್ನ ವಿಷಯದಲ್ಲಿ ತುಂಬಾ ಕರುಣೆ ಮತ್ತು ಆದರವುಳ್ಳವರಾಗಿದ್ದರು.…
ನಂಜನಗೂಡು : ಹಾಡಾ ಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದ ಘಟನೆ ಪಟ್ಟಣದ ಮಿನಿ ವಿಧಾನಸೌಧದ ಬಳಿ…
ಮೈಸೂರು : ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು…
ಬೆಂಗಳೂರು: ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ…