ರಾಜ್ಯ

ಹಾಸನ | ಹೃದಯಾಘಾತ ಪ್ರಕರಣ : ಶವಗಳ ಮರುಪರೀಕ್ಷೆಗೆ ಸರ್ಕಾರದ ಚಿಂತನೆ

ಬೆಂಗಳೂರು : ಹಾಸನ ಜಿಲ್ಲೆಯಲ್ಲಾಗುತ್ತಿರುವ ಅಸಹಜ ಸಾವುಗಳ ಬಗ್ಗೆ ನಿಖರ ಕಾರಣ ತಿಳಿಯಲು ಗಂಭೀರ ಪ್ರಯತ್ನಗಳನ್ನು ಆರಂಭಿಸಿರುವ ಸರ್ಕಾರ ಸಂಸ್ಕಾರಗೊಂಡ ಶವಗಳ ಮರುಪರೀಕ್ಷೆಯ ಸಾಧ್ಯತೆಗಳ ಬಗ್ಗೆ ಕೂಡ ಪರಿಶೀಲನೆ ನಡೆಸುತ್ತಿದೆ.

ಸರಣಿ ಹೃದಯಾಘಾತದ ಕಾರಣಗಳನ್ನು ಪತ್ತೆ ಹಚ್ಚಲು ಹಾಸನ ಜಿಲ್ಲಾಡಳಿತ ಕೈಗೊಂಡಿರುವ ಸ್ಥಳೀಯ ಅಧ್ಯಯನದ ವರದಿ ಭಾನುವಾರ ಜಿಲ್ಲಾಧಿಕಾರಿಗಳ ಕೈ ಸೇರಲಿದೆ. ಹಾಸನ ಜಿಲ್ಲೆಯೊಂದರಲ್ಲೆ 40 ದಿನಗಳ ಅಂತರದಲ್ಲಿ ಸುಮಾರು 30ಕ್ಕೂ ಹೆಚ್ಚು ಮಂದಿ ಅಸಹಜವಾದ ಹೃದಯಾಘಾತದಿಂದ ಮೃತಪಟ್ಟಿರುವುದು ರಾಜ್ಯವನ್ನು ಬೆಚ್ಚಿಬೀಳುವಂತೆ ಮಾಡಿದೆ. ಇದರ ಬಗ್ಗೆ ಜನಸಾಮಾನ್ಯರಲ್ಲಿನ ದುಗುಡಗಳು ತೀವ್ರಗೊಂಡಿವೆ.

ಈ ಹಿನ್ನೆಲೆಯಲ್ಲಿ ರಾಜ್ಯಸರ್ಕಾರ ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ.ಕೆ.ಎಸ್.ರವೀಂದ್ರನಾಥ್ ಅವರ ಅಧ್ಯಕ್ಷತೆಯಲ್ಲಿ ತಜ್ಞರನ್ನೊಳಗೊಂಡ ಉನ್ನತ ಸಮಿತಿಯನ್ನು ರಚಿಸಿದೆ. ಸಮಿತಿ ಸೋಮವಾರ ಹಾಸನ ಜಿಲ್ಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ. ಅದಕ್ಕೆ ಪೂರ್ವಭಾವಿಯಾಗಿ ಹಾಸನ ಜಿಲ್ಲಾಧಿಕಾರಿಯವರು ಜಿಲ್ಲಾ ಆರೋಗ್ಯ ಮತ್ತು ಕುಟಂಬ ಕಲ್ಯಾಣಾಧಿಕಾರಿ ಅಧ್ಯಕ್ಷತೆಯಲ್ಲಿ ಸಮಿತಿಯೊಂದನ್ನು ರಚಿಸಿದ್ದಾರೆ. ಈ ಸಮಿತಿಯಲ್ಲಿ ಹಾಸನ ವೈದ್ಯಕೀಯ ಕಾಲೇಜಿನ ನಿರ್ದೇಶಕರು, ಹೃದ್ರೋಗ ವಿಭಾಗದ ಮುಖ್ಯಸ್ಥರು, ಹೃದ್ರೋಗ ತಜ್ಞರು ಹಾಗೂ ಇತರರ ತಂಡವೊಂದನ್ನು ರಚಿಸಿದ್ದಾರೆ.

ಈ ತಂಡ ಮನೆಮನೆಗೆ ಭೇಟಿ ನೀಡಿ ಮೃತಪಟ್ಟವರ ಬಗ್ಗೆ ಮಾಹಿತಿಯನ್ನು ಕಲೆ ಹಾಕುತ್ತಿದೆ. ಅಸಹಜ ಸಾವಿಗೀಡಾದವರಿಗೆ ಧೂಮಪಾನ, ಮಧ್ಯಪಾನದಂತಹ ಅಭ್ಯಾಸಗಳಿದ್ದವೇ?, ಈ ಹಿಂದೆ ಎಂದಾದರೂ ಅವರಿಗೆ ಹೃದಯಾಘಾತವಾಗಿತ್ತೇ?, ಕುಟುಂಬದ ಹಿನ್ನೆಲೆಯಲ್ಲಿ ಹೃದಯಾಘಾತಗಳಾದ ಹಿನ್ನೆಲೆಗಳಿವೆಯೇ? ಎಂಬೆಲ್ಲಾ ವಿಚಾರಗಳನ್ನು ಸಂಗ್ರಹಿಸಿದ್ದಾರೆ.

ನಿಗದಿತ ಪ್ರಶ್ನಾವಳಿ ನಮೂನೆಯಲ್ಲಿ ಮಾಹಿತಿ ಸಂಗ್ರಹಿಸಲಾಗಿದ್ದು, ಅದನ್ನು ಜಿಲ್ಲಾಧಿಕಾರಿಯವರಿಗೆ ಸಲ್ಲಿಸುವ ಸಾಧ್ಯತೆಯಿದೆ. ಆ ವರದಿ ರಾಜ್ಯಮಟ್ಟದ ತಜ್ಞರ ಸಮಿತಿಗೆ ರವಾನೆಯಾಗಲಿದೆ. ಪ್ರಾಥಮಿಕ ಅಧ್ಯಯನದ ವರದಿಯ ಬಳಿಕ ವರದಿಯನ್ನು ಪರಿಶೀಲಿಸಿ ತಜ್ಞರ ಸಮಿತಿ ಜಿಲ್ಲೆಗೆ ಭೇಟಿ ನೀಡಿದ ವೇಳೆ ಮತ್ತಷ್ಟು ಪರಿಶೀಲನೆ ನಡೆಸಲಿವೆ. ಈ ಮೂಲಕ ಹೃದಯಾಘಾತಕ್ಕೆ ಕಾರಣಗಳೇನು ಎಂದು ಪತ್ತೆಹಚ್ಚುವ ಪ್ರಯತ್ನ ನಡೆದಿದೆ.

ಕೆಲವು ಪ್ರಕರಣಗಳಲ್ಲಿ ಮನೆ ಅಥವಾ ಕಚೇರಿಗಳಲ್ಲೇ ಸಾವುಗಳಾಗಿದ್ದು, ಶವಪರೀಕ್ಷೆಯನ್ನೂ ಕೂಡ ನಡೆಸಿಲ್ಲ ಎನ್ನಲಾಗುತ್ತಿದೆ. ಹೃದಯಾಘಾತ ಹಾಗೂ ಅಸಹಜ ಸಾವಿಗೆ ನಿಖರ ಕಾರಣ ತಿಳಿಯಬೇಕಾದರೆ ಶವಪರೀಕ್ಷೆ ಅನಿವಾರ್ಯ ಎಂಬ ಅಭಿಪ್ರಾಯಗಳಿವೆ. ಕುಟುಂಬದ ಸಹಮತಿ ಪಡೆದು ಸಂಸ್ಕಾರಗೊಂಡಿರುವ ಶವಗಳನ್ನು ಹೊರತೆಗೆದು ಶವಪರೀಕ್ಷೆ ನಡೆಸುವ ಸಾಧ್ಯತೆಗಳ ಬಗ್ಗೆ ಕೂಡ ಪರಿಶೀಲನೆ ನಡೆಯುತ್ತಿದೆ.

ಆಂದೋಲನ ಡೆಸ್ಕ್

Recent Posts

ಹೊರ್ಮುಜ್‌ ಬಿಕ್ಕಟ್ಟು | ಇರಾನ್‌ನ ಬಂದರುಗಳಿಗೆ ಅಮೆರಿಕದ ದಿಗ್ಬಂಧನ ಪ್ರಾರಂಭ

ಟೆಹ್ರಾನ್‌ : ಇರಾನಿನ ಬಂದರುಗಳು ಸಾಗುವ ಸಮುದ್ರ ಸಂಚಾರದ ಮೇಲೆ ಅಮೆರಿಕ ಮಿಲಿಟರಿ ದಿಗ್ಬಂಧನವನ್ನು ನಿಗದಿತ ಗಡುವಿನಂತೆ ಆರಂಭಿಸಿದೆ. ಈ…

2 hours ago

ರೋಹಿಣಿ ಸಿಂಧೂರಿ ವಿರುದ್ಧ ತನಿಖೆ : ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ತಡೆ

ನವದೆಹಲಿ : ಮೈಸೂರಿನಲ್ಲಿ ಜಿಲ್ಲಾಧಿಕಾರಿಯಾಗಿದ್ದಾಗ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ ಆರೋಪ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಮಧ್ಯಂತರ…

3 hours ago

ಅನಗತ್ಯ ಹೇಳಿಕೆ ನೀಡಿದರೆ ಶಿಸ್ತುಕ್ರಮ ; ಕೈ ಶಾಸಕರಿಗೆ ಡಿ.ಕೆ.ಶಿ ಎಚ್ಚರಿಕೆ

ಬೆಂಗಳೂರು : ಪಕ್ಷದ ಶಾಸಕರು ಹೈಕಮಾಂಡ್ ವರಿಷ್ಠರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿಲ್ಲ. ಅನವಶ್ಯಕವಾಗಿ ಏನೇನೋ ಹೇಳಿಕೆ ನೀಡಿದರೆ ಶಿಸ್ತು ಕ್ರಮ…

3 hours ago

ಹೆದ್ದಾರಿ ತಡೆದು ಪ್ರತಿಭಟನೆ : ಬಂಡೀಪುರ ರಾತ್ರಿ ಸಂಚಾರ ತೆರವು ಮಾಡದಂತೆ ಆಗ್ರಹ

ಚಾಮರಾಜನಗರ : ವಯನಾಡು ಸಂಸದೆ ಪ್ರಿಯಾಂಕ ವಾದ್ರಾ ಅವರು ಬಂಡೀಪುರ ರಾತ್ರಿ ಸಂಚಾರ ನಿಷೇಧ ಮುಕ್ತ ಮಾಡುವುದಾಗಿ ಹೇಳಿರುವುದು ಮತ್ತು…

4 hours ago

ಕೊಡಗು | ತೆರೆದ ಬಾವಿಗೆ ಬಿದ್ದ ಕಾಡಾನೆ ಮರಿ , ರಕ್ಷಣೆ

ಮಡಿಕೇರಿ : ಕಾಡಾನೆ ಮರಿಯೊಂದು ಬಾವಿಗೆ ಬಿದ್ದು ನರಳಾಡಿದ ಘಟನೆ ಕೊಡಗು-ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದ ಪೆರಾಜೆ ಸಮೀಪದ ಕಲ್ಚೆರ್ಪೆಯಲ್ಲಿ…

4 hours ago

ಹೊರ್ಮುಜ್‌ ಬಿಕ್ಕಟ್ಟು | ಅಮೆರಿಕ ದಿಗ್ಬಂಧನ ಬೆನ್ನಲ್ಲೇ ಇರಾನ್‌ ವಾರ್ನಿಂಗ್‌

ಟೆಹ್ರಾನ್ : ಕದನ ವಿರಾಮ ಒಪ್ಪಂದಕ್ಕೆ ಬರಲು ವಿಫಲವಾದ ನಂತರ, ಹಾರ್ಮುಜ್ ಜಲಸಂಧಿ ಮೂಲಕ ಸಾಗುವ ಹಡಗುಗಳಿಗೆ ದಿಗ್ಬಂಧನ ವಿಧಿಸುವುದಾಗಿ…

4 hours ago