Series of Heart Attack Deaths Continue in Hassan: One More Succumbs
ಬೆಂಗಳೂರು : ಹಾಸನ ಜಿಲ್ಲೆಯಲ್ಲಾಗುತ್ತಿರುವ ಅಸಹಜ ಸಾವುಗಳ ಬಗ್ಗೆ ನಿಖರ ಕಾರಣ ತಿಳಿಯಲು ಗಂಭೀರ ಪ್ರಯತ್ನಗಳನ್ನು ಆರಂಭಿಸಿರುವ ಸರ್ಕಾರ ಸಂಸ್ಕಾರಗೊಂಡ ಶವಗಳ ಮರುಪರೀಕ್ಷೆಯ ಸಾಧ್ಯತೆಗಳ ಬಗ್ಗೆ ಕೂಡ ಪರಿಶೀಲನೆ ನಡೆಸುತ್ತಿದೆ.
ಸರಣಿ ಹೃದಯಾಘಾತದ ಕಾರಣಗಳನ್ನು ಪತ್ತೆ ಹಚ್ಚಲು ಹಾಸನ ಜಿಲ್ಲಾಡಳಿತ ಕೈಗೊಂಡಿರುವ ಸ್ಥಳೀಯ ಅಧ್ಯಯನದ ವರದಿ ಭಾನುವಾರ ಜಿಲ್ಲಾಧಿಕಾರಿಗಳ ಕೈ ಸೇರಲಿದೆ. ಹಾಸನ ಜಿಲ್ಲೆಯೊಂದರಲ್ಲೆ 40 ದಿನಗಳ ಅಂತರದಲ್ಲಿ ಸುಮಾರು 30ಕ್ಕೂ ಹೆಚ್ಚು ಮಂದಿ ಅಸಹಜವಾದ ಹೃದಯಾಘಾತದಿಂದ ಮೃತಪಟ್ಟಿರುವುದು ರಾಜ್ಯವನ್ನು ಬೆಚ್ಚಿಬೀಳುವಂತೆ ಮಾಡಿದೆ. ಇದರ ಬಗ್ಗೆ ಜನಸಾಮಾನ್ಯರಲ್ಲಿನ ದುಗುಡಗಳು ತೀವ್ರಗೊಂಡಿವೆ.
ಈ ಹಿನ್ನೆಲೆಯಲ್ಲಿ ರಾಜ್ಯಸರ್ಕಾರ ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ.ಕೆ.ಎಸ್.ರವೀಂದ್ರನಾಥ್ ಅವರ ಅಧ್ಯಕ್ಷತೆಯಲ್ಲಿ ತಜ್ಞರನ್ನೊಳಗೊಂಡ ಉನ್ನತ ಸಮಿತಿಯನ್ನು ರಚಿಸಿದೆ. ಸಮಿತಿ ಸೋಮವಾರ ಹಾಸನ ಜಿಲ್ಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ. ಅದಕ್ಕೆ ಪೂರ್ವಭಾವಿಯಾಗಿ ಹಾಸನ ಜಿಲ್ಲಾಧಿಕಾರಿಯವರು ಜಿಲ್ಲಾ ಆರೋಗ್ಯ ಮತ್ತು ಕುಟಂಬ ಕಲ್ಯಾಣಾಧಿಕಾರಿ ಅಧ್ಯಕ್ಷತೆಯಲ್ಲಿ ಸಮಿತಿಯೊಂದನ್ನು ರಚಿಸಿದ್ದಾರೆ. ಈ ಸಮಿತಿಯಲ್ಲಿ ಹಾಸನ ವೈದ್ಯಕೀಯ ಕಾಲೇಜಿನ ನಿರ್ದೇಶಕರು, ಹೃದ್ರೋಗ ವಿಭಾಗದ ಮುಖ್ಯಸ್ಥರು, ಹೃದ್ರೋಗ ತಜ್ಞರು ಹಾಗೂ ಇತರರ ತಂಡವೊಂದನ್ನು ರಚಿಸಿದ್ದಾರೆ.
ಈ ತಂಡ ಮನೆಮನೆಗೆ ಭೇಟಿ ನೀಡಿ ಮೃತಪಟ್ಟವರ ಬಗ್ಗೆ ಮಾಹಿತಿಯನ್ನು ಕಲೆ ಹಾಕುತ್ತಿದೆ. ಅಸಹಜ ಸಾವಿಗೀಡಾದವರಿಗೆ ಧೂಮಪಾನ, ಮಧ್ಯಪಾನದಂತಹ ಅಭ್ಯಾಸಗಳಿದ್ದವೇ?, ಈ ಹಿಂದೆ ಎಂದಾದರೂ ಅವರಿಗೆ ಹೃದಯಾಘಾತವಾಗಿತ್ತೇ?, ಕುಟುಂಬದ ಹಿನ್ನೆಲೆಯಲ್ಲಿ ಹೃದಯಾಘಾತಗಳಾದ ಹಿನ್ನೆಲೆಗಳಿವೆಯೇ? ಎಂಬೆಲ್ಲಾ ವಿಚಾರಗಳನ್ನು ಸಂಗ್ರಹಿಸಿದ್ದಾರೆ.
ನಿಗದಿತ ಪ್ರಶ್ನಾವಳಿ ನಮೂನೆಯಲ್ಲಿ ಮಾಹಿತಿ ಸಂಗ್ರಹಿಸಲಾಗಿದ್ದು, ಅದನ್ನು ಜಿಲ್ಲಾಧಿಕಾರಿಯವರಿಗೆ ಸಲ್ಲಿಸುವ ಸಾಧ್ಯತೆಯಿದೆ. ಆ ವರದಿ ರಾಜ್ಯಮಟ್ಟದ ತಜ್ಞರ ಸಮಿತಿಗೆ ರವಾನೆಯಾಗಲಿದೆ. ಪ್ರಾಥಮಿಕ ಅಧ್ಯಯನದ ವರದಿಯ ಬಳಿಕ ವರದಿಯನ್ನು ಪರಿಶೀಲಿಸಿ ತಜ್ಞರ ಸಮಿತಿ ಜಿಲ್ಲೆಗೆ ಭೇಟಿ ನೀಡಿದ ವೇಳೆ ಮತ್ತಷ್ಟು ಪರಿಶೀಲನೆ ನಡೆಸಲಿವೆ. ಈ ಮೂಲಕ ಹೃದಯಾಘಾತಕ್ಕೆ ಕಾರಣಗಳೇನು ಎಂದು ಪತ್ತೆಹಚ್ಚುವ ಪ್ರಯತ್ನ ನಡೆದಿದೆ.
ಕೆಲವು ಪ್ರಕರಣಗಳಲ್ಲಿ ಮನೆ ಅಥವಾ ಕಚೇರಿಗಳಲ್ಲೇ ಸಾವುಗಳಾಗಿದ್ದು, ಶವಪರೀಕ್ಷೆಯನ್ನೂ ಕೂಡ ನಡೆಸಿಲ್ಲ ಎನ್ನಲಾಗುತ್ತಿದೆ. ಹೃದಯಾಘಾತ ಹಾಗೂ ಅಸಹಜ ಸಾವಿಗೆ ನಿಖರ ಕಾರಣ ತಿಳಿಯಬೇಕಾದರೆ ಶವಪರೀಕ್ಷೆ ಅನಿವಾರ್ಯ ಎಂಬ ಅಭಿಪ್ರಾಯಗಳಿವೆ. ಕುಟುಂಬದ ಸಹಮತಿ ಪಡೆದು ಸಂಸ್ಕಾರಗೊಂಡಿರುವ ಶವಗಳನ್ನು ಹೊರತೆಗೆದು ಶವಪರೀಕ್ಷೆ ನಡೆಸುವ ಸಾಧ್ಯತೆಗಳ ಬಗ್ಗೆ ಕೂಡ ಪರಿಶೀಲನೆ ನಡೆಯುತ್ತಿದೆ.
ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಹಾಗೂ ಯಂಗ್ ಇಂಡಿಯಾ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಇಡಿ ಸಮನ್ಸ್ ನೀಡಿದೆ. ಆ ಮೂಲಕ ನಮಗೆ…
ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾಲ್ಲೂಕಿನ ಸಖರಾಯಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಜೆ.ಜಾರ್ಜ್ ಪ್ರತಿಕ್ರಿಯೆ ನೀಡಿದ್ದಾರೆ. ಕೊಲೆಯಾದ…
ಚಿಕ್ಕಮಗಳೂರು: ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದು ಕಾಂಗ್ರೆಸ್ ಕಾರ್ಯಕರ್ತ ಮೃತಪಟ್ಟ ಘಟನೆ ಕಡೂರು ತಾಲ್ಲೂಕಿನ ಸಖರಾಪಟ್ಟಣದ ಸಮೀಪದ ಕಲ್ಮುರುಡೇಶ್ವರ…
ಬೆಂಗಳೂರು: ಬಿಜೆಪಿ ಜೊತೆ ಸೇರಿಕೊಂಡ ಮೇಲೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕೂಡ ಮನುವಾದಿ ಆಗಿಬಿಟ್ಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು.…
ಬೆಂಗಳೂರು: ಅಂಬೇಡ್ಕರ್ ಅವರೊಬ್ಬ ಮಹಾನ್ ವ್ಯಕ್ತಿ ಹಾಗೂ ದೇಶ ಕಂಡ ಒಬ್ಬ ಅಪರೂಪದ ನಾಯಕ. ದಲಿತರಿಗೆ ಮಾತ್ರವಲ್ಲದೆ ಎಲ್ಲಾ ಶೋಷಿತರಿಗೆ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿ ದರ್ಶನ್ಗೆ ಬೆನ್ನುನೋವು ಮಾಯವಾಯ್ತಾ ಎಂಬ ಕುತೂಹಲ ಮನೆ ಮಾಡಿದೆ. ದರ್ಶನ್…