Series of Heart Attack Deaths Continue in Hassan: One More Succumbs
ಬೆಂಗಳೂರು : ಹಾಸನ ಜಿಲ್ಲೆಯಲ್ಲಾಗುತ್ತಿರುವ ಅಸಹಜ ಸಾವುಗಳ ಬಗ್ಗೆ ನಿಖರ ಕಾರಣ ತಿಳಿಯಲು ಗಂಭೀರ ಪ್ರಯತ್ನಗಳನ್ನು ಆರಂಭಿಸಿರುವ ಸರ್ಕಾರ ಸಂಸ್ಕಾರಗೊಂಡ ಶವಗಳ ಮರುಪರೀಕ್ಷೆಯ ಸಾಧ್ಯತೆಗಳ ಬಗ್ಗೆ ಕೂಡ ಪರಿಶೀಲನೆ ನಡೆಸುತ್ತಿದೆ.
ಸರಣಿ ಹೃದಯಾಘಾತದ ಕಾರಣಗಳನ್ನು ಪತ್ತೆ ಹಚ್ಚಲು ಹಾಸನ ಜಿಲ್ಲಾಡಳಿತ ಕೈಗೊಂಡಿರುವ ಸ್ಥಳೀಯ ಅಧ್ಯಯನದ ವರದಿ ಭಾನುವಾರ ಜಿಲ್ಲಾಧಿಕಾರಿಗಳ ಕೈ ಸೇರಲಿದೆ. ಹಾಸನ ಜಿಲ್ಲೆಯೊಂದರಲ್ಲೆ 40 ದಿನಗಳ ಅಂತರದಲ್ಲಿ ಸುಮಾರು 30ಕ್ಕೂ ಹೆಚ್ಚು ಮಂದಿ ಅಸಹಜವಾದ ಹೃದಯಾಘಾತದಿಂದ ಮೃತಪಟ್ಟಿರುವುದು ರಾಜ್ಯವನ್ನು ಬೆಚ್ಚಿಬೀಳುವಂತೆ ಮಾಡಿದೆ. ಇದರ ಬಗ್ಗೆ ಜನಸಾಮಾನ್ಯರಲ್ಲಿನ ದುಗುಡಗಳು ತೀವ್ರಗೊಂಡಿವೆ.
ಈ ಹಿನ್ನೆಲೆಯಲ್ಲಿ ರಾಜ್ಯಸರ್ಕಾರ ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ.ಕೆ.ಎಸ್.ರವೀಂದ್ರನಾಥ್ ಅವರ ಅಧ್ಯಕ್ಷತೆಯಲ್ಲಿ ತಜ್ಞರನ್ನೊಳಗೊಂಡ ಉನ್ನತ ಸಮಿತಿಯನ್ನು ರಚಿಸಿದೆ. ಸಮಿತಿ ಸೋಮವಾರ ಹಾಸನ ಜಿಲ್ಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ. ಅದಕ್ಕೆ ಪೂರ್ವಭಾವಿಯಾಗಿ ಹಾಸನ ಜಿಲ್ಲಾಧಿಕಾರಿಯವರು ಜಿಲ್ಲಾ ಆರೋಗ್ಯ ಮತ್ತು ಕುಟಂಬ ಕಲ್ಯಾಣಾಧಿಕಾರಿ ಅಧ್ಯಕ್ಷತೆಯಲ್ಲಿ ಸಮಿತಿಯೊಂದನ್ನು ರಚಿಸಿದ್ದಾರೆ. ಈ ಸಮಿತಿಯಲ್ಲಿ ಹಾಸನ ವೈದ್ಯಕೀಯ ಕಾಲೇಜಿನ ನಿರ್ದೇಶಕರು, ಹೃದ್ರೋಗ ವಿಭಾಗದ ಮುಖ್ಯಸ್ಥರು, ಹೃದ್ರೋಗ ತಜ್ಞರು ಹಾಗೂ ಇತರರ ತಂಡವೊಂದನ್ನು ರಚಿಸಿದ್ದಾರೆ.
ಈ ತಂಡ ಮನೆಮನೆಗೆ ಭೇಟಿ ನೀಡಿ ಮೃತಪಟ್ಟವರ ಬಗ್ಗೆ ಮಾಹಿತಿಯನ್ನು ಕಲೆ ಹಾಕುತ್ತಿದೆ. ಅಸಹಜ ಸಾವಿಗೀಡಾದವರಿಗೆ ಧೂಮಪಾನ, ಮಧ್ಯಪಾನದಂತಹ ಅಭ್ಯಾಸಗಳಿದ್ದವೇ?, ಈ ಹಿಂದೆ ಎಂದಾದರೂ ಅವರಿಗೆ ಹೃದಯಾಘಾತವಾಗಿತ್ತೇ?, ಕುಟುಂಬದ ಹಿನ್ನೆಲೆಯಲ್ಲಿ ಹೃದಯಾಘಾತಗಳಾದ ಹಿನ್ನೆಲೆಗಳಿವೆಯೇ? ಎಂಬೆಲ್ಲಾ ವಿಚಾರಗಳನ್ನು ಸಂಗ್ರಹಿಸಿದ್ದಾರೆ.
ನಿಗದಿತ ಪ್ರಶ್ನಾವಳಿ ನಮೂನೆಯಲ್ಲಿ ಮಾಹಿತಿ ಸಂಗ್ರಹಿಸಲಾಗಿದ್ದು, ಅದನ್ನು ಜಿಲ್ಲಾಧಿಕಾರಿಯವರಿಗೆ ಸಲ್ಲಿಸುವ ಸಾಧ್ಯತೆಯಿದೆ. ಆ ವರದಿ ರಾಜ್ಯಮಟ್ಟದ ತಜ್ಞರ ಸಮಿತಿಗೆ ರವಾನೆಯಾಗಲಿದೆ. ಪ್ರಾಥಮಿಕ ಅಧ್ಯಯನದ ವರದಿಯ ಬಳಿಕ ವರದಿಯನ್ನು ಪರಿಶೀಲಿಸಿ ತಜ್ಞರ ಸಮಿತಿ ಜಿಲ್ಲೆಗೆ ಭೇಟಿ ನೀಡಿದ ವೇಳೆ ಮತ್ತಷ್ಟು ಪರಿಶೀಲನೆ ನಡೆಸಲಿವೆ. ಈ ಮೂಲಕ ಹೃದಯಾಘಾತಕ್ಕೆ ಕಾರಣಗಳೇನು ಎಂದು ಪತ್ತೆಹಚ್ಚುವ ಪ್ರಯತ್ನ ನಡೆದಿದೆ.
ಕೆಲವು ಪ್ರಕರಣಗಳಲ್ಲಿ ಮನೆ ಅಥವಾ ಕಚೇರಿಗಳಲ್ಲೇ ಸಾವುಗಳಾಗಿದ್ದು, ಶವಪರೀಕ್ಷೆಯನ್ನೂ ಕೂಡ ನಡೆಸಿಲ್ಲ ಎನ್ನಲಾಗುತ್ತಿದೆ. ಹೃದಯಾಘಾತ ಹಾಗೂ ಅಸಹಜ ಸಾವಿಗೆ ನಿಖರ ಕಾರಣ ತಿಳಿಯಬೇಕಾದರೆ ಶವಪರೀಕ್ಷೆ ಅನಿವಾರ್ಯ ಎಂಬ ಅಭಿಪ್ರಾಯಗಳಿವೆ. ಕುಟುಂಬದ ಸಹಮತಿ ಪಡೆದು ಸಂಸ್ಕಾರಗೊಂಡಿರುವ ಶವಗಳನ್ನು ಹೊರತೆಗೆದು ಶವಪರೀಕ್ಷೆ ನಡೆಸುವ ಸಾಧ್ಯತೆಗಳ ಬಗ್ಗೆ ಕೂಡ ಪರಿಶೀಲನೆ ನಡೆಯುತ್ತಿದೆ.
ಮೈಸೂರು : ಸರ್ಕಾರ ಸರ್ಕಾರಿ ಶಾಲೆಗಳ ಮುಚ್ಚುವ ಬದಲು, ಉನ್ನತಿಕರಣಗೊಳಿಸಿ ವೈಚಾರಿಕ ಶಿಕ್ಷಣ ನೀಡುವಂತಗಲಿ ಎಂದು ಚಿಂತಕ ಪ್ರೊ. ಕೆ…
ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಮಂಗನ ಕಾಯಿಲೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಶಿವಮೊಗ್ಗದಲ್ಲಿ ಮಂಗನ ಕಾಯಿಲೆಗೆ ಮತ್ತೋರ್ವ ಬಲಿಯಾಗಿದ್ದಾನೆ. ಈ ಬಗ್ಗೆ…
ರಾಮನಗರ: ರಾಜ್ಯಕ್ಕೆ ಇಷ್ಟರ ಮಟ್ಟಿಗೆ ಅನ್ಯಾಯ ಮಾಡುತ್ತಾರೆ ಎಂದು ಯಾರು ಕೂಡ ನಿರೀಕ್ಷೆ ಮಾಡಿರಲಿಲ್ಲ ಎಂದು ಕೇಂದ್ರ ಬಜೆಟ್ ಬಗ್ಗೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿರುವ…
ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ ಬಗ್ಗೆ ರಾಜ್ಯ ಬಿಜೆಪಿ ನಾಯಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ…
ಮಂಡ್ಯ: ನಿಂತಿದ್ದ ಟಿಪ್ಪರ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು ಮೂವರು ಗಾಯಗೊಂಡ ಘಟನೆ ಮಂಡ್ಯ ಜಿಲ್ಲೆ…