ರಾಜ್ಯ

ಹಾಸನ | ಹೃದಯಾಘಾತ ಪ್ರಕರಣ : ಶವಗಳ ಮರುಪರೀಕ್ಷೆಗೆ ಸರ್ಕಾರದ ಚಿಂತನೆ

ಬೆಂಗಳೂರು : ಹಾಸನ ಜಿಲ್ಲೆಯಲ್ಲಾಗುತ್ತಿರುವ ಅಸಹಜ ಸಾವುಗಳ ಬಗ್ಗೆ ನಿಖರ ಕಾರಣ ತಿಳಿಯಲು ಗಂಭೀರ ಪ್ರಯತ್ನಗಳನ್ನು ಆರಂಭಿಸಿರುವ ಸರ್ಕಾರ ಸಂಸ್ಕಾರಗೊಂಡ ಶವಗಳ ಮರುಪರೀಕ್ಷೆಯ ಸಾಧ್ಯತೆಗಳ ಬಗ್ಗೆ ಕೂಡ ಪರಿಶೀಲನೆ ನಡೆಸುತ್ತಿದೆ.

ಸರಣಿ ಹೃದಯಾಘಾತದ ಕಾರಣಗಳನ್ನು ಪತ್ತೆ ಹಚ್ಚಲು ಹಾಸನ ಜಿಲ್ಲಾಡಳಿತ ಕೈಗೊಂಡಿರುವ ಸ್ಥಳೀಯ ಅಧ್ಯಯನದ ವರದಿ ಭಾನುವಾರ ಜಿಲ್ಲಾಧಿಕಾರಿಗಳ ಕೈ ಸೇರಲಿದೆ. ಹಾಸನ ಜಿಲ್ಲೆಯೊಂದರಲ್ಲೆ 40 ದಿನಗಳ ಅಂತರದಲ್ಲಿ ಸುಮಾರು 30ಕ್ಕೂ ಹೆಚ್ಚು ಮಂದಿ ಅಸಹಜವಾದ ಹೃದಯಾಘಾತದಿಂದ ಮೃತಪಟ್ಟಿರುವುದು ರಾಜ್ಯವನ್ನು ಬೆಚ್ಚಿಬೀಳುವಂತೆ ಮಾಡಿದೆ. ಇದರ ಬಗ್ಗೆ ಜನಸಾಮಾನ್ಯರಲ್ಲಿನ ದುಗುಡಗಳು ತೀವ್ರಗೊಂಡಿವೆ.

ಈ ಹಿನ್ನೆಲೆಯಲ್ಲಿ ರಾಜ್ಯಸರ್ಕಾರ ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ.ಕೆ.ಎಸ್.ರವೀಂದ್ರನಾಥ್ ಅವರ ಅಧ್ಯಕ್ಷತೆಯಲ್ಲಿ ತಜ್ಞರನ್ನೊಳಗೊಂಡ ಉನ್ನತ ಸಮಿತಿಯನ್ನು ರಚಿಸಿದೆ. ಸಮಿತಿ ಸೋಮವಾರ ಹಾಸನ ಜಿಲ್ಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ. ಅದಕ್ಕೆ ಪೂರ್ವಭಾವಿಯಾಗಿ ಹಾಸನ ಜಿಲ್ಲಾಧಿಕಾರಿಯವರು ಜಿಲ್ಲಾ ಆರೋಗ್ಯ ಮತ್ತು ಕುಟಂಬ ಕಲ್ಯಾಣಾಧಿಕಾರಿ ಅಧ್ಯಕ್ಷತೆಯಲ್ಲಿ ಸಮಿತಿಯೊಂದನ್ನು ರಚಿಸಿದ್ದಾರೆ. ಈ ಸಮಿತಿಯಲ್ಲಿ ಹಾಸನ ವೈದ್ಯಕೀಯ ಕಾಲೇಜಿನ ನಿರ್ದೇಶಕರು, ಹೃದ್ರೋಗ ವಿಭಾಗದ ಮುಖ್ಯಸ್ಥರು, ಹೃದ್ರೋಗ ತಜ್ಞರು ಹಾಗೂ ಇತರರ ತಂಡವೊಂದನ್ನು ರಚಿಸಿದ್ದಾರೆ.

ಈ ತಂಡ ಮನೆಮನೆಗೆ ಭೇಟಿ ನೀಡಿ ಮೃತಪಟ್ಟವರ ಬಗ್ಗೆ ಮಾಹಿತಿಯನ್ನು ಕಲೆ ಹಾಕುತ್ತಿದೆ. ಅಸಹಜ ಸಾವಿಗೀಡಾದವರಿಗೆ ಧೂಮಪಾನ, ಮಧ್ಯಪಾನದಂತಹ ಅಭ್ಯಾಸಗಳಿದ್ದವೇ?, ಈ ಹಿಂದೆ ಎಂದಾದರೂ ಅವರಿಗೆ ಹೃದಯಾಘಾತವಾಗಿತ್ತೇ?, ಕುಟುಂಬದ ಹಿನ್ನೆಲೆಯಲ್ಲಿ ಹೃದಯಾಘಾತಗಳಾದ ಹಿನ್ನೆಲೆಗಳಿವೆಯೇ? ಎಂಬೆಲ್ಲಾ ವಿಚಾರಗಳನ್ನು ಸಂಗ್ರಹಿಸಿದ್ದಾರೆ.

ನಿಗದಿತ ಪ್ರಶ್ನಾವಳಿ ನಮೂನೆಯಲ್ಲಿ ಮಾಹಿತಿ ಸಂಗ್ರಹಿಸಲಾಗಿದ್ದು, ಅದನ್ನು ಜಿಲ್ಲಾಧಿಕಾರಿಯವರಿಗೆ ಸಲ್ಲಿಸುವ ಸಾಧ್ಯತೆಯಿದೆ. ಆ ವರದಿ ರಾಜ್ಯಮಟ್ಟದ ತಜ್ಞರ ಸಮಿತಿಗೆ ರವಾನೆಯಾಗಲಿದೆ. ಪ್ರಾಥಮಿಕ ಅಧ್ಯಯನದ ವರದಿಯ ಬಳಿಕ ವರದಿಯನ್ನು ಪರಿಶೀಲಿಸಿ ತಜ್ಞರ ಸಮಿತಿ ಜಿಲ್ಲೆಗೆ ಭೇಟಿ ನೀಡಿದ ವೇಳೆ ಮತ್ತಷ್ಟು ಪರಿಶೀಲನೆ ನಡೆಸಲಿವೆ. ಈ ಮೂಲಕ ಹೃದಯಾಘಾತಕ್ಕೆ ಕಾರಣಗಳೇನು ಎಂದು ಪತ್ತೆಹಚ್ಚುವ ಪ್ರಯತ್ನ ನಡೆದಿದೆ.

ಕೆಲವು ಪ್ರಕರಣಗಳಲ್ಲಿ ಮನೆ ಅಥವಾ ಕಚೇರಿಗಳಲ್ಲೇ ಸಾವುಗಳಾಗಿದ್ದು, ಶವಪರೀಕ್ಷೆಯನ್ನೂ ಕೂಡ ನಡೆಸಿಲ್ಲ ಎನ್ನಲಾಗುತ್ತಿದೆ. ಹೃದಯಾಘಾತ ಹಾಗೂ ಅಸಹಜ ಸಾವಿಗೆ ನಿಖರ ಕಾರಣ ತಿಳಿಯಬೇಕಾದರೆ ಶವಪರೀಕ್ಷೆ ಅನಿವಾರ್ಯ ಎಂಬ ಅಭಿಪ್ರಾಯಗಳಿವೆ. ಕುಟುಂಬದ ಸಹಮತಿ ಪಡೆದು ಸಂಸ್ಕಾರಗೊಂಡಿರುವ ಶವಗಳನ್ನು ಹೊರತೆಗೆದು ಶವಪರೀಕ್ಷೆ ನಡೆಸುವ ಸಾಧ್ಯತೆಗಳ ಬಗ್ಗೆ ಕೂಡ ಪರಿಶೀಲನೆ ನಡೆಯುತ್ತಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

5 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

5 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

5 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

5 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

5 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

5 hours ago