ರಾಜ್ಯ

ಹಾಸನ ಜನಲ್ಯಾಣ ಸಮಾವೇಶ: ಸಚಿವ ಕೆ.ಎಚ್‌.ಮುನಿಯಪ್ಪ ಕಾರಿಗೆ ರಸ್ತೆ ಮಧ್ಯದಲ್ಲಿ ಅಪಘಾತ

ಹಾಸನ: ಜೆಡಿಎಸ್‌ ಭದ್ರಕೋಟೆ ಹಾಸನದ ಎಸ್‌.ಎಂ.ಕೃಷ್ಣನಗರದಲ್ಲಿ ನಡೆಯುತ್ತಿರುವ ಜನಕಲ್ಯಾಣ ಸಮಾವೇಶಕ್ಕೆ ಆಗಮಿಸುತ್ತಿದ್ದ ಸಚಿವ ಕೆ.ಎಚ್‌.ಮುನಿಯಪ್ಪ ಅವರ ಕಾರಿಗೆ ರಸ್ತೆ ಮಧ್ಯದಲ್ಲಿ ಅಪಘಾತವಾಗಿದೆ.

ಕಾಂಗ್ರೆಸ್‌ ಸರ್ಕಾರದ ವತಿಯಿಂದ ಇಂದು(ಡಿ.5) ಆಯೋಜಿಸಲಾಗಿದ್ದ ಜನಕಲ್ಯಾಣ ಸಮಾವೇಶ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಸಚಿವ ಮುನಿಯಪ್ಪ ಹಾಸನಕ್ಕೆ ಆಗಮಿಸುತ್ತಿದ್ದರು. ಈ ವೇಳೆ ಅವರ ಕಾರಿಗೆ ಬೆಂಗಳೂರು-ಮಂಗಳೂರು ರಾಷ್ಟೀಯ ಹೆದ್ದಾರಿಯ ಶಾಂತಿಗ್ರಾಮದ ಟೋಲ್‌ಗೇಟ್‌ ಸಮೀಪದಲ್ಲಿ ಕಾರವೊಂದು ಹಿಂಬದಿಯಿಂದ ಬಂದು ಡಿಕ್ಕಿಯೊಡೆದಿದೆ. ಈ ಅಪಘಾತದಿಂದ ಸದ್ಯ ಎರಡು ಕಾರಿನಲ್ಲಿರುವ ಪ್ರಯಾಣಿಕರಿಗೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಮೂಲಗಳು ತಿಳಿಸಿವೆ.

ಹಾಸನ ಜಿಲ್ಲೆಯೂ ಜೆಡಿಎಸ್‌ನ  ಭದ್ರಕೋಟೆಯಾಗಿದ್ದು, 25 ವರ್ಷಗಳ ನಂತರ ಸಂಸದ ಸ್ಥಾನದಿಂದ ಕಾಂಗ್ರೆಸ್‌ ಗೆಲುವು ಸಾಧಿಸಿತ್ತು. ಬಳಿಕ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಗೆಲುವು ಸಾಧಿಸಿದ ಬಳಿಕ ಜನಕಲ್ಯಾಣ ಸಮಾವೇಶವನ್ನು ಹಾಸನದಲ್ಲಿ ನಡೆಸಬೇಕೆಂದು ಆಯೋಜನೆ ಮಾಡಿಕೊಂಡಿದ್ದರು. ಈ  ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಹಲವು ಸಚಿವರು ಹಾಗೂ ಶಾಸಕರು ಸಮಾವೇಶಕ್ಕೆ ಆಗಮಿಸುತ್ತಿದ್ದರು. ಅಂತೆಯೇ ಸಚಿವ ಕೆ.ಎಚ್‌.ಮುನಿಯಪ್ಪ ಅವರು ಆಗಮಿಸುವ ವೇಳೆ ರಸ್ತೆ ಮಾರ್ಗದಲ್ಲಿ ಅಪಘಾತ ಸಂಭವಿಸಿದೆ.

 

 

ಅರ್ಚನ ಎಸ್‌ ಎಸ್

Recent Posts

ಮೂರು ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ ; ಉಭಯ ಸದನಗಳು ಅನಿರ್ದಿಷ್ಟಾವಧಿಗೆ ಮುಂದೂಡಿಕೆ

ಬೆಂಗಳೂರು : ವಾಲ್ಮೀಕಿ ನಿಗಮ ಹಗರಣ ಸಂಬಂಧ ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳ ತೀವ್ರ ಪ್ರತಿಭಟನೆಗೆ ಸಾಕ್ಷಿಯಾದ…

3 hours ago

ರಾಜ್ಯಕ್ಕೆ ಮತ್ತೆ ಕಾವೇರಿ ಆಘಾತ ; ತಮಿಳುನಾಡಿಗೆ 9,000 ಕ್ಯುಸೆಕ್‌ ನೀರು ಹರಿಸಲು ಆದೇಶ

ಬೆಂಗಳೂರು : ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಸವಾಲು ಎದುರಾಗಿದೆ. ತಮಿಳುನಾಡಿಗೆ ಬಿಳಿಗುಂಡ್ಲುವಿನಲ್ಲಿ ಮುಂದಿನ 15 ದಿನಗಳ…

6 hours ago

ಮಳೆ ಕೊರತೆ ನೀಗಿಸಲು ಕೃತಕ ಮಳೆ ಅಸ್ತ್ರ : ಮೋಡ ಬಿತ್ತನೆಗೆ ಸರ್ಕಾರ ಗ್ರೀನ್ ಸಿಗ್ನಲ್

ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…

8 hours ago

ವರ್ಷಕ್ಕೆ ಮೂರು ಸಿಲಿಂಡರ್ ಉಚಿತ – ತಮಿಳುನಾಡು ಜನರಿಗೆ ವಿಜಯ್‌ ಸರ್ಕಾರದ ಬಂಪರ್‌ ಆಫರ್‌!

ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್‌ ಸರ್ಕಾರದಿಂದ ಭರ್ಜರಿ ಗುಡ್‌ನ್ಯೂಸ್‌ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್‌ಗಳ ವಿಚಾರದಲ್ಲಿ ಮಹತ್ವದ…

13 hours ago

ತಮಿಳುನಾಡಿಗೆ ಕಾವೇರಿ ನೀರು: ಸೋಮವಾರಕ್ಕೆ ವಿಚಾರಣೆ ಮುಂದೂಡಿಕೆ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…

13 hours ago

ಕಲಾಪಗಳೇ ನಡೆಯದ ಅಧಿವೇಶನ

ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…

14 hours ago