ಹಾಸನ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಪೆನ್ಡ್ರೈವ್ ಪ್ರಕರಣದಲ್ಲಿ ಅರಕಲಗೂಡು ಶಾಸಕ ಎ. ಮಂಜು ಅವರನ್ನು ಪೊಲೀಸರು ವಿಚಾರಣೆ ನಡೆಸಿ ಮಾಹಿತಿ ಪಡೆದಿದ್ದಾರೆ.
ಪೆನ್ಡ್ರೈವ್ ಪ್ರಕರಣ ಆರೋಪಿ ನವೀನ್ಗೌಡ, ಪೆನ್ಡ್ರೈವ್ನನ್ನು ಶಾಸಕ ಎ.ಮಂಜು ಅವರಿಗೆ ನೀಡಿದ್ದೆ ಎಂದು ಫೇಸ್ಬುಕ್ನಲ್ಲಿ ಆರೋಪಿಸಿದ್ದರು. ಈ ಹಿನ್ನೆಲೆ ಹಾಸನ ಸೆನ್ ಠಾಣೆಯ ಪೊಲೀಸರು ಮಂಜು ಅವರನ್ನು ವಿಚಾರಣೆ ನಡೆಸಿದ್ದಾರೆ.
ತನಿಖಾ ಅಧಿಕಾರಿಯಾಗಿರುವ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಂ.ಕೆ ತಿಮ್ಮಯ್ಯ ಅವರು ಶಾಸಕ ಮಂಜು ಅವರನ್ನು ಒಂದು ಗಂಟೆ ಕಾಲ ವಿಚಾರಣೆ ನಡೆಸಿದರು.
ಎಸ್ಐಟಿ ಅಧಿಕಾರಿಗಳು ಈಗಾಗಲೇ ನವೀನ್ಗೌಡ ಅವರನ್ನು ಬಂಧಿಸಿ ವಿಚಾರಣೆ ಮಾಡುತ್ತಿದ್ದಾರೆ. ಆತ ನೀಡಿರುವ ಮಾಹಿತಿ ಆಧರಿಸಿ ಶಾಸಕ ಮಂಜು ಅವರಿಗ ಎಸ್ಐಟಿ ನೋಟಿಸ್ ನೀಡಿತ್ತು.
ವಿಚಾರಣೆ ಬಗ್ಗೆ ಪ್ರತಿಕ್ರಿಯಿಸಿದ ಶಾಸಕ ಎ.ಮಂಜು, ನವೀನ್ಗೌಡ ವಿರುದ್ಧ ನಾನೇ ದೂರು ನೀಡಿದ್ದೆ. ಅದರ ಸಂಬಂಧ ಎಸ್ಐಟಿ ತಂಡಕ್ಕೆ ಮಾಹಿತಿ ನೀಡಿದ್ದೇನೆ ಎಂದು ಹೇಳಿದರು.
ಮನುಷ್ಯರಿಗೆ ಅಭಿವೃದ್ಧಿ, ಆನೆಗಳಿಗೆ ಅತಿಕ್ರಮಣ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಮೇ ೧೮ರಂದು ಕರ್ನಾಟಕದ ದುಬಾರೆ ಶಿಬಿರದಲ್ಲಿ ನಡೆದ ಆನೆಗಳ ಕಾಳಗ;…
ಕೆ.ವಿ.ಸ್ಲ್ಯಾನ್ಲಿ ಇದು ಎಂಬತ್ತರ ದಶಕದ ಕಥೆಯಲ್ಲದ ಜೀವನಗಾಥೆ. ದ್ವೀಪ ರಾಷ್ಟ್ರಸಿಂಹಳ ಮೂಲದ ಕುಟುಂಬವೊಂದು ಸಾಂಸ್ಕೃತಿಕ ಕರ್ನಾಟಕದಲ್ಲಿ ವಿಲೀನವಾಗಿ ಜೀವನ ನಡೆಸುತ್ತಿತ್ತು.…
ದೆಹಲಿ : ಮದುವೆಯಾದ ಯುವತಿಯರು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಯುವತಿಯರಿಗೆ…
ಹೊಸದಿಲ್ಲಿ : ಆಗಸ್ಟ್ ೩೧ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನಗರಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸರ್ವೋಚ್ಚ ನ್ಯಾಯಾಲಯ…
ಸಫಾರಿ ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಅಳವಡಿಸಲು ಖಂಡ್ರೆ ಸೂಚನೆ ಬೆಂಗಳೂರು : ರಾಜ್ಯದ ಐದು ಹುಲಿ…