ಹಾಸನ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಪೆನ್ಡ್ರೈವ್ ಪ್ರಕರಣದಲ್ಲಿ ಅರಕಲಗೂಡು ಶಾಸಕ ಎ. ಮಂಜು ಅವರನ್ನು ಪೊಲೀಸರು ವಿಚಾರಣೆ ನಡೆಸಿ ಮಾಹಿತಿ ಪಡೆದಿದ್ದಾರೆ.
ಪೆನ್ಡ್ರೈವ್ ಪ್ರಕರಣ ಆರೋಪಿ ನವೀನ್ಗೌಡ, ಪೆನ್ಡ್ರೈವ್ನನ್ನು ಶಾಸಕ ಎ.ಮಂಜು ಅವರಿಗೆ ನೀಡಿದ್ದೆ ಎಂದು ಫೇಸ್ಬುಕ್ನಲ್ಲಿ ಆರೋಪಿಸಿದ್ದರು. ಈ ಹಿನ್ನೆಲೆ ಹಾಸನ ಸೆನ್ ಠಾಣೆಯ ಪೊಲೀಸರು ಮಂಜು ಅವರನ್ನು ವಿಚಾರಣೆ ನಡೆಸಿದ್ದಾರೆ.
ತನಿಖಾ ಅಧಿಕಾರಿಯಾಗಿರುವ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಂ.ಕೆ ತಿಮ್ಮಯ್ಯ ಅವರು ಶಾಸಕ ಮಂಜು ಅವರನ್ನು ಒಂದು ಗಂಟೆ ಕಾಲ ವಿಚಾರಣೆ ನಡೆಸಿದರು.
ಎಸ್ಐಟಿ ಅಧಿಕಾರಿಗಳು ಈಗಾಗಲೇ ನವೀನ್ಗೌಡ ಅವರನ್ನು ಬಂಧಿಸಿ ವಿಚಾರಣೆ ಮಾಡುತ್ತಿದ್ದಾರೆ. ಆತ ನೀಡಿರುವ ಮಾಹಿತಿ ಆಧರಿಸಿ ಶಾಸಕ ಮಂಜು ಅವರಿಗ ಎಸ್ಐಟಿ ನೋಟಿಸ್ ನೀಡಿತ್ತು.
ವಿಚಾರಣೆ ಬಗ್ಗೆ ಪ್ರತಿಕ್ರಿಯಿಸಿದ ಶಾಸಕ ಎ.ಮಂಜು, ನವೀನ್ಗೌಡ ವಿರುದ್ಧ ನಾನೇ ದೂರು ನೀಡಿದ್ದೆ. ಅದರ ಸಂಬಂಧ ಎಸ್ಐಟಿ ತಂಡಕ್ಕೆ ಮಾಹಿತಿ ನೀಡಿದ್ದೇನೆ ಎಂದು ಹೇಳಿದರು.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…