ರಾಜ್ಯ

ಹಾಸನ ಪೆನ್‌ಡ್ರೈವ್‌ ಪ್ರಕರಣ: ವಿಶೇಷ ತನಿಖಾ ತಂಡ ರಚಿಸಲು ಮುಖ್ಯಮಂತ್ರಿಗೆ ಮಹಿಳಾ ಆಯೋಗ ಒತ್ತಾಯ

ಬೆಂಗಳೂರು: ಹಾಸನ ಜಿಲ್ಲೆಯ ಪೆನ್‌ಡ್ರೈವ್‌ ಪ್ರಕರಣ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ವಿವಿಧ ಮಹಿಳೆಯರ ಖಾಸಗಿ ವಿಡಿಯೊಗಳು ಹರಿದಾಡುತ್ತಿದೆ ಎನ್ನಲಾಗುತ್ತಿದ್ದು, ಈ ಕುರಿತು ಮಹಿಳಾ ಆಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆಯುವ ಮೂಲಕ ವಿಶೇಷ ತನಿಖಾ ತಂಡ ರಚಿಸಲು ಒತ್ತಾಯಿಸಿದೆ.

ಇಂದು ( ಏಪ್ರಿಲ್‌ 25 ) ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅವರು ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದು, ಹಾಸನ ಜಿಲ್ಲೆಯಲ್ಲಿ ಹರಿದಾಡುತ್ತಿರುವ ಪೆನ್‌ಡ್ರೈವ್‌ನಲ್ಲಿ ಮಹಿಳೆಯರ ಮೇಲೆ ನಡೆಸಲಾಗಿರುವ ಹಿಂಸೆಯ ಕುರಿತು ಮತ್ತು ಸಾವಿರಾರು ಅಮಾಯಕ ಹೆಣ್ಣುಮಕ್ಕಳನ್ನು ಲೈಂಗಿಕ ಕ್ರಿಯೆಗೆ ಬಳಸಿಕೊಂಡು ಮೊಬೈಲ್‌ನಲ್ಲಿ ಖಾಸಗಿ ವಿಡಿಯೊವನ್ನು ಚಿತ್ರಿಸಿದ್ದಾರೆ ಎಂದಿದ್ದಾರೆ.

ಹಾಸನ ಜಿಲ್ಲೆಯ ಪೆನ್‌ಡ್ರೈವ್‌ ಸುದ್ದಿಯು ಸಾಮಾಜಿಕ ಜಾಲತಾಣದಲ್ಲಿ ಹಾಗೂ ಮಾಧ್ಯಮದಲ್ಲಿ ಪ್ರಕಟವಾಗಿದ್ದು ಮಹಿಳೆಯರ ಘನತೆ ಹಾಗೂ ಅಸ್ತಿತ್ವಕ್ಕೆ ಹಾನಿ ಉಂಟು ಮಾಡುತ್ತಿರುವವರನ್ನು ಶೀಘ್ರವಾಗಿ ಪತ್ತೆಹಚ್ಚಲು ವಿಶೇಷ ತನಿಖಾ ತಂಡವನ್ನು ರಚಿಸಬೇಕೆಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗವು ಪತ್ರದಲ್ಲಿ ಉಲ್ಲೇಖಿಸಿದೆ.

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಹನೂರು| ಕಾಡಾನೆ ದಾಳಿ: ಆಟೋ ಜಖಂ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಂಚಾಪುರ ಗ್ರಾಮದಿಂದ ಒಡೆಯರ ಪಾಳ್ಯ ಗ್ರಾಮಕ್ಕೆ ವ್ಯಾಪಾರ ಮಾಡಲು…

16 mins ago

ಪಶ್ಚಿಮ ಏಷ್ಯಾದಲ್ಲಿ ಹೆಚ್ಚಾದ ಉದ್ವಿಗ್ನತೆ: ಮನ್‌ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ ಹೇಳಿದ್ದಿಷ್ಟು.!

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವಂತೆ ಭಾರತೀಯ ನಾಗರಿಕರು ಒಗ್ಗಟ್ಟಾಗಿರುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಪ್ರಧಾನಿ ನರೇಂದ್ರ…

33 mins ago

ಆರೋಗ್ಯ ಕೇಂದ್ರದ ಮುಂಭಾಗವೇ ವಾಹನಗಳ ಪಾರ್ಕಿಂಗ್:‌ ಸಾರ್ವಜನಿಕರಿಗೆ ಕಿರಿಕಿರಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಪ್ರಾಥಮಿಕ ಆರೋಗ್ಯ ಕೇಂದ್ರದ…

45 mins ago

ಹನೂರು: ಸಮರ್ಪಕ ಕುಡಿಯುವ ನೀರು ಪೂರೈಸುವಂತೆ ನಿವಾಸಿಗಳಿಂದ ಪ್ರತಿಭಟನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಹೂಗ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭೋವಿ ಸಮುದಾಯದ ಕಾಲೋನಿಗೆ…

51 mins ago

ನ್ಯಾಯ ವಿತರಣೆಯಲ್ಲಿ ಪೊಲೀಸರು ರಾಜಿಯಾಗಬಾರದು: ಸಿಎಂ ಸಿದ್ದರಾಮಯ್ಯ

ಮೈಸೂರು: ನ್ಯಾಯ ವಿತರಣೆಯಲ್ಲಿ ಪೊಲೀಸರು ರಾಜಿಯಾಗಬಾರದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರು ಘಟಕದ 46ನೇ ತಂಡದ ಸಿವಿಲ್‌ ಪೊಲೀಸ್‌…

1 hour ago

ಅಮೇರಿಕಾದಲ್ಲಿ ಡೊನಾಲ್ಡ್‌ ಟ್ರಂಪ್‌ ವಿರುದ್ಧವೇ ಭುಗಿಲೆದ್ದ ಆಕ್ರೋಶ

ಅಮೇರಿಕಾದಲ್ಲಿ ಡೊನಾಲ್ಡ್‌ ಟ್ರಂಪ್‌ ವಿರುದ್ಧವೇ ಭುಗಿಲೆದ್ದ ಆಕ್ರೋಶ 80 ಲಕ್ಷ ಜನರಿಂದ ನೋ ಕಿಂಗ್ಸ್‌ ಚಳುವಳಿ ಟ್ರಂಪ್‌ ನೀತಿ ವಿರೋಧಿಸಿ…

2 hours ago