ಬೆಂಗಳೂರು: ಹಾಸನ ಜಿಲ್ಲೆಯ ಪೆನ್ಡ್ರೈವ್ ಪ್ರಕರಣ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ವಿವಿಧ ಮಹಿಳೆಯರ ಖಾಸಗಿ ವಿಡಿಯೊಗಳು ಹರಿದಾಡುತ್ತಿದೆ ಎನ್ನಲಾಗುತ್ತಿದ್ದು, ಈ ಕುರಿತು ಮಹಿಳಾ ಆಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆಯುವ ಮೂಲಕ ವಿಶೇಷ ತನಿಖಾ ತಂಡ ರಚಿಸಲು ಒತ್ತಾಯಿಸಿದೆ.
ಇಂದು ( ಏಪ್ರಿಲ್ 25 ) ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅವರು ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದು, ಹಾಸನ ಜಿಲ್ಲೆಯಲ್ಲಿ ಹರಿದಾಡುತ್ತಿರುವ ಪೆನ್ಡ್ರೈವ್ನಲ್ಲಿ ಮಹಿಳೆಯರ ಮೇಲೆ ನಡೆಸಲಾಗಿರುವ ಹಿಂಸೆಯ ಕುರಿತು ಮತ್ತು ಸಾವಿರಾರು ಅಮಾಯಕ ಹೆಣ್ಣುಮಕ್ಕಳನ್ನು ಲೈಂಗಿಕ ಕ್ರಿಯೆಗೆ ಬಳಸಿಕೊಂಡು ಮೊಬೈಲ್ನಲ್ಲಿ ಖಾಸಗಿ ವಿಡಿಯೊವನ್ನು ಚಿತ್ರಿಸಿದ್ದಾರೆ ಎಂದಿದ್ದಾರೆ.
ಹಾಸನ ಜಿಲ್ಲೆಯ ಪೆನ್ಡ್ರೈವ್ ಸುದ್ದಿಯು ಸಾಮಾಜಿಕ ಜಾಲತಾಣದಲ್ಲಿ ಹಾಗೂ ಮಾಧ್ಯಮದಲ್ಲಿ ಪ್ರಕಟವಾಗಿದ್ದು ಮಹಿಳೆಯರ ಘನತೆ ಹಾಗೂ ಅಸ್ತಿತ್ವಕ್ಕೆ ಹಾನಿ ಉಂಟು ಮಾಡುತ್ತಿರುವವರನ್ನು ಶೀಘ್ರವಾಗಿ ಪತ್ತೆಹಚ್ಚಲು ವಿಶೇಷ ತನಿಖಾ ತಂಡವನ್ನು ರಚಿಸಬೇಕೆಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗವು ಪತ್ರದಲ್ಲಿ ಉಲ್ಲೇಖಿಸಿದೆ.
ಬೆಂಗಳೂರು: ಬ್ರೇಕ್ಫಾಸ್ಟ್ ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮಂತ್ರಿಗಳ ಜೊತೆ ಸಹಕಾರವನ್ನು ಕೇಳಿದ್ದಾರೆ. ಸಿಎಂ ಹುದ್ದೆಗೆ ಇಂದು ಸಿದ್ದರಾಮಯ್ಯ ರಾಜೀನಾಮೆ…
ಬೆಂಗಳೂರು: ನನಗೆ ಯಾವುದೇ ನೋವಿಲ್ಲ. ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮಂತ್ರಿಗಳ ಜೊತೆಗಿನ ಉಪಹಾರ ಸಭೆಯಲ್ಲಿ…
ಬೆಂಗಳೂರು: ಇಂದು ಬೆಳಿಗ್ಗೆ ಉಪಹಾರಕ್ಕೆ ಕಾವೇರಿ ನಿವಾಸಕ್ಕೆ ಆಗಮಿಸಿದ ಡಿ.ಕೆ.ಶಿವಕುಮಾರ್ ಅವರು ಸಿದ್ದರಾಮಯ್ಯರನ್ನು ತಬ್ಬಿಕೊಂಡು ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದಾರೆ.…
ತಡೆಯಲಿ ಸರ್ಕಾರ! ಏರುತ್ತಲೇ ಇದೆ ಇಂಧನ ಬೆಲೆ ಇಳಿಯುತ್ತಲೇ ಇದೆ ಮಾನವ ಬೆಲೆ! ಈ ಪರಿಯ ಹಾವು-ಏಣಿ ಆಟದಲಿ ಅಧೋಗತಿಗೆ…
ರಾಜ್ಯಾದ್ಯಂತ ಹೊಸ ಬಿಪಿಎಲ್ ಕಾರ್ಡ್ಗಾಗಿ ಸಲ್ಲಿಕೆಯಾಗಿರುವ ಮೂರು ಲಕ್ಷ ಅರ್ಜಿಗಳು ನಾಲ್ಕು ವರ್ಷಗಳಿಂದ ವಿಲೇವಾರಿಯಾಗದೆ ಬಾಕಿ ಉಳಿದಿರುವುದು ಬೇಸರದ ಸಂಗತಿ.…
ಚಾಮರಾಜನಗರ ಜಿಲ್ಲೆಯ ಮರಿಯಾಲ ಗ್ರಾಮದ ಪ್ರಮುಖ ರಸ್ತೆಯು ಹಾಳಾಗಿದೆ. ಈ ರಸ್ತೆಯು ಕೆಲ್ಲಂಬಳ್ಳಿ, ಕಸ್ತೂರು ಮೂಲಕ ವಿವಿಧ ಗ್ರಾಮಗಳ ಮೂಲಕ…