ಹಾಸನ: ಕೆರೆಯಲ್ಲಿ ಈಜಲು ತೆರಳಿದ್ದ ನಾಲ್ವರು ಮಕ್ಕಳು ಸಾವನ್ನಪ್ಪಿದ್ದ ಘಟನೆ ಹಾಸನದಲ್ಲಿ ಇತ್ತೀಚೆಗೆ ನಡೆದಿತ್ತು. ಈ ದುರಂತ ಮಾಸುವ ಮುನ್ನವೇ ಇದೀಗ ಮತ್ತೊಂದು ಇಂತದ್ದೆ ಘಟನೆ ನಡೆದಿದೆ. ಹಾಸನದ ಬೇಲೂರು ತಾಲೂಕಿನ ನರಸೀಪುರ ಗ್ರಾಮದಲ್ಲಿ ಇಂದು(ಮೇ.31) ಕೆರೆಯಲ್ಲಿ ಮುಳುಗಿ ಮೂವರು ಮಕ್ಕಳು ಸಾವನ್ನಪ್ಪಿದ್ದಾರೆ.
ದೀಕ್ಷಿತ್(10) ನಿತ್ಯಶ್ರೀ(12) ಕುಸುಮ(6) ಮೃತಪಟ್ಟ ಮಕ್ಕಳು. ಹಸುಗಳನ್ನು ಕೆರೆಯ ಬಳಿ ಕಟ್ಟಿ ಆಟವಾಡುತ್ತಿದ್ದಾಗ ಈ ದುರಂತ ಸಂಭವಿಸಿದೆ ಎನ್ನಲಾಗಿದೆ. ಸ್ಥಳದಲ್ಲಿ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.
ಸ್ಥಳೀಯರು ಕೆರೆಯಿಂದ ಮಕ್ಕಳ ಶವವನು ಹೊರ ತೆಗೆದಿದ್ದಾರೆ. ಸ್ಥಳಕ್ಕಾಗಮಿಸಿದ ಹಳೆಬೀಡು ಪೊಲೀಸರು ಪರಿಶೀಲನೆ ನಡೆಸಿದ್ದಾರೆ.