ಹಾಸನ : ಸುಪ್ರಸಿದ್ದ ಹಾಸನಾಂಬ ದೇವಾಲಯದಲ್ಲಿ ದೇವಿಯ ದರ್ಶನೋತ್ಸವ ನಡೆಯುತ್ತಿದೆ. ಹಾಸನಾಂಬೆ ದರ್ಶನ ಪಡೆಯಲು ರಾಜ್ಯದ ನಾನಾ ಭಾಗಗಳಿಂದ ಭಕ್ತರ ದಂಡೇ ಹರಿದು ಬರುತ್ತಿದೆ. ಈ ನಡುವೆ ದೇವಾಲಯದ ಅರ್ಚಕರಿಗೆ ದೇವಿ ಹೂ ಪ್ರಸಾದ ನೀಡಿ ಅಚ್ಚರಿ ಮೂಡಿಸಿದ್ದಾಳೆ.
ವರ್ಷಕ್ಕೊಮ್ಮೆ ದರ್ಶನ ಭಾಗ್ಯ ಕರುಣಿಸೋ ಹಾಸನದ ಅಧಿದೇವತೆ ಹಾಸನಾಂಬೆ ಒಂದಿಲ್ಲೊಂದು ಪವಾಡಗಳಿಂದ ಭಕ್ತರನ್ನು ಅಚ್ಚರಿಗೋಳಪಡಿಸುತ್ತಲೇ ಇದ್ದಾಳೆ. ಅಂತೆಯೇ ಈಗಲೂ ಕೂಡ,ದೇವಿಯ ಬಳಿ ಬೇಡಿಕೆ ಇಟ್ಟು ಧ್ಯಾನಕ್ಕೆ ಕುಳಿತಿದ್ದ ಅರ್ಚಕರಿಗೆ ಬಲಗಡೆಯಿಂದ ಹೂ ಪ್ರಸಾದ ಕೊಟ್ಟು ಅಚ್ಚರಿ ಮೂಡಿಸಿದ್ದಾಳೆ.
ಪ್ರತಿ ವರ್ಷ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಹಾಸನಾಂಬ ದೇವಾಲಯದ ಬಾಗಿಲನ್ನು ತೆರೆಯಲಾಗುತ್ತದೆ. ಈ ಸಂದರ್ಭದಲ್ಲಿ ಭಕ್ತಾದಿಗಳಿಗೆ ದಿನದ 24 ಗಂಟೆಗಳ ಕಾಲವೂ ಕೂಡ ದೇವಿಯ ದರ್ಶನಕ್ಕೆ ಅವಕಾಶವಿರುತ್ತದೆ. ಈ ಬಾರಿ ನ.2ರಂದು ದೇವಾಲಯದ ಬಾಗಿಲನ್ನು ತೆರೆಯಲಾಗಿದ್ದು,ನ.14 ರವರೆಗೂ ತಾಯಿಯ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ನ. 15 ರಂದು ವಿಧಿ ವಿಧಾನವನ್ನು ಪೂರೈಸಿ ದೇವಾಲಯದ ಬಾಗಿಲನ್ನು ಮುಚ್ಚಲಾಗುತ್ತದೆ.
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…
ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಸಾರ್ವಜನಿಕ ಸಂಸ್ಥೆಗಳಿಗೆ ಅತ್ಯಂತ ಮುಖ್ಯವಾದ ಪಾಠ ಯಾವುದೇ ನಾಗರಿಕನು ತನ್ನ…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ದೈಹಿಕ ನ್ಯೂನತೆ ನಡುವೆ ಆರ್ಥಿಕ ಪ್ರಗತಿಯ ಮೆಟ್ಟಿಲೇರಿದ ಮಹಿಳೆ ಹರ್ಯಾಣದ ಅಂಬಾಲಾದ ಹಿಮಾಂಶಿಕಾ ಶರ್ಮಾರಿಗೆ…
ಕೆ.ಬಿ.ರಮೇಶನಾಯಕ ರಾಜ್ಯ ಸರ್ಕಾರದ ಗಡುವಿನೊಳಗೆ ಪ್ರಕ್ರಿಯೆ ಮುಗಿಸಲು ಇಲಾಖೆ ಕಸರತ್ತು. ಮೈಸೂರು: ನಕಲಿ ಫಲಾನುಭವಿಗಳನ್ನು ಕೈಬಿಟ್ಟು ಪಾರದರ್ಶಕತೆ ಕಾಯ್ದುಕೊಳ್ಳಲು ಹಾಗೂ…