ರಾಜ್ಯ

ಅರ್ಚಕರಿಗೆ ಹೂ ಪ್ರಸಾದ ಕೊಟ್ಟ ಹಾಸನಾಂಬೆ

ಹಾಸನ : ಸುಪ್ರಸಿದ್ದ ಹಾಸನಾಂಬ ದೇವಾಲಯದಲ್ಲಿ ದೇವಿಯ ದರ್ಶನೋತ್ಸವ ನಡೆಯುತ್ತಿದೆ. ಹಾಸನಾಂಬೆ ದರ್ಶನ ಪಡೆಯಲು ರಾಜ್ಯದ ನಾನಾ ಭಾಗಗಳಿಂದ ಭಕ್ತರ ದಂಡೇ ಹರಿದು ಬರುತ್ತಿದೆ. ಈ ನಡುವೆ ದೇವಾಲಯದ ಅರ್ಚಕರಿಗೆ ದೇವಿ ಹೂ ಪ್ರಸಾದ ನೀಡಿ ಅಚ್ಚರಿ ಮೂಡಿಸಿದ್ದಾಳೆ.

ವರ್ಷಕ್ಕೊಮ್ಮೆ ದರ್ಶನ ಭಾಗ್ಯ ಕರುಣಿಸೋ ಹಾಸನದ ಅಧಿದೇವತೆ ಹಾಸನಾಂಬೆ ಒಂದಿಲ್ಲೊಂದು ಪವಾಡಗಳಿಂದ ಭಕ್ತರನ್ನು ಅಚ್ಚರಿಗೋಳಪಡಿಸುತ್ತಲೇ ಇದ್ದಾಳೆ. ಅಂತೆಯೇ ಈಗಲೂ ಕೂಡ,ದೇವಿಯ ಬಳಿ ಬೇಡಿಕೆ ಇಟ್ಟು ಧ್ಯಾನಕ್ಕೆ ಕುಳಿತಿದ್ದ ಅರ್ಚಕರಿಗೆ ಬಲಗಡೆಯಿಂದ ಹೂ ಪ್ರಸಾದ ಕೊಟ್ಟು ಅಚ್ಚರಿ ಮೂಡಿಸಿದ್ದಾಳೆ.

ಪ್ರತಿ ವರ್ಷ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಹಾಸನಾಂಬ ದೇವಾಲಯದ ಬಾಗಿಲನ್ನು ತೆರೆಯಲಾಗುತ್ತದೆ. ಈ ಸಂದರ್ಭದಲ್ಲಿ ಭಕ್ತಾದಿಗಳಿಗೆ ದಿನದ 24 ಗಂಟೆಗಳ ಕಾಲವೂ ಕೂಡ ದೇವಿಯ ದರ್ಶನಕ್ಕೆ ಅವಕಾಶವಿರುತ್ತದೆ. ಈ ಬಾರಿ ನ.2ರಂದು ದೇವಾಲಯದ ಬಾಗಿಲನ್ನು ತೆರೆಯಲಾಗಿದ್ದು,ನ.14 ರವರೆಗೂ ತಾಯಿಯ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ನ. 15 ರಂದು ವಿಧಿ ವಿಧಾನವನ್ನು ಪೂರೈಸಿ ದೇವಾಲಯದ ಬಾಗಿಲನ್ನು ಮುಚ್ಚಲಾಗುತ್ತದೆ.

lokesh

Recent Posts

ಸೈದ್ಧಾಂತಿಕ ಬದ್ಧತೆ; ಪಕ್ಷದ ಸಿದ್ಧಾಂತದಲ್ಲಿ ರಾಜಿ ಸಲ್ಲದು ; ಡಿಕೆಶಿಗೆ ಸಿದ್ದರಾಮಯ್ಯ ಭಾವನಾತ್ಮಕ ಪೋಸ್ಟ್

ಬೆಂಗಳೂರು : ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಡಿ.ಕೆ.ಶಿವಕುಮಾರ್ ಅವರಿಗೆ ಭಾವನಾತ್ಮಕ ಪೋಸ್ಟ್ ಮಾಡಿದ್ದಾರೆ. ಈ…

1 hour ago

ಹೊಸ ಸಚಿವ ಸಂಪುಟ ರಚನೆ ಬಗ್ಗೆ ಖರ್ಗೆ ಹೇಳಿದಿಷ್ಟು…

ಕಲಬುರಗಿ : ಮುಖ್ಯಮಂತ್ರಿಯಾಗಿ ನೇಮಕಗೊಂಡ ಡಿ.ಕೆ. ಶಿವಕುಮಾರ್ ನೇತೃತ್ವದ ಕರ್ನಾಟಕದಲ್ಲಿ ನೂತನ ಸಚಿವ ಸಂಪುಟ ರಚನೆಗೆ ಸಂಬಂಧಿಸಿದಂತೆ ಪಕ್ಷದ ನಾಯಕತ್ವಕ್ಕೆ…

4 hours ago

ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ನಾಯಕರ ನಡುವೆ ಪೈಪೋಟಿ

ಬೆಂಗಳೂರು : ಡಿ.ಕೆ.ಶಿವಕುಮಾರ್‌ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಬೆನ್ನಲ್ಲೇ ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ಪ್ರಬಲ ನಾಯಕರ ನಡುವೆ…

7 hours ago

ಶಾಲೆ ಶುರುವಾಗಿದೆ; ಮನಸು ಯಾಕೋ ಹೂ ಬಿಟ್ಟಿದೆ…

ವರ್ಷಕ್ಕೊಮ್ಮೆ ಎದುರುಗೊಳ್ಳುವ ಈ ಸುಂದರ ಕಾಲ ಹೊಸತೊಂದು ಯುಗದ ಆರಂಭಕ್ಕೆ ಭಾಷ್ಯ ಬರೆದಂತೆ ಭಾಸವಾಗುತ್ತದೆ. ಮಕ್ಕಳ ಹುಮ್ಮಸ್ಸನ್ನು ನೋಡುವುದೇ ಒಂದು…

10 hours ago

ಭಾನುವಾರದ ಹಾಡುಪಾಡು | ಶಾಲೆಯೆಂಬ ಕಟ್ಟಡಗಳಿಗೆ ಜೀವ ಬರುವ ಹೊತ್ತು…..

ಕನಸುಗಂಗಳ ಈ ಹುಡುಗಿಯರ ಕಲರವದಿಂದಾಗಿ ಜಡವಾಗಿದ್ದ ಕಟ್ಟಡಗಳಿಗೆ ಜೀವ ಬರುತ್ತದೆ. ಅವರ ನಡಿಗೆಯ ಚುರುಕುತನದಿಂದ ಸುತ್ತಲಿನ ಪರಿಸರ ಚಲನಶೀಲವಾಗುತ್ತದೆ. ಸುಧಾ…

10 hours ago

ಭಾನುವಾರದ ಹಾಡುಪಾಡು | ಜೂನ್ ಬಂತು ಎಂದರೆ ಶಿಕ್ಷಕರಿಗೆ ಸುಗ್ಗಿ ಕಾಲ

ವರ್ಷವಿಡೀ ಪಾಠ ಮಾಡಿ ಸುಸ್ತಾದ ಶಿಕ್ಷಕರು ಬೇಸಿಗೆ ರಜಕ್ಕಾಗಿ ಎಷ್ಟೇ ಹಂಬಲಿಸಿದರೂ ಕೂಡ ರಜೆ ಮುಗಿಯುವ ಹೊತ್ತಿಗೆ ಬೇಸರವಾಗಿ ಎಷ್ಟು…

10 hours ago