ರಾಜ್ಯ

ವಿಪಕ್ಷಗಳ ವಿರೋಧದ ಮಧ್ಯೆ ವಿಧಾನಸಭೆಯಲ್ಲಿ ದ್ವೇಷ ಭಾಷಣ ಮಸೂದೆ ಅಂಗೀಕಾರ

ಬೆಂಗಳೂರು: ವಿಧಾನಸಭೆಯಲ್ಲಿ ವಿಪಕ್ಷಗಳ ತೀವ್ರ ವಿರೋಧ ಹಾಗೂ ಗದ್ದಲದ ಮಧ್ಯೆ ಕರ್ನಾಟಕ ದ್ವೇಷಭಾಷಣ ಹಾಗೂ ದ್ವೇಷಾಪರಾಧಗಳ ಪ್ರತಿಬಂಧನ ಮಸೂದೆ 2025ನ್ನು ಅಂಗೀಕರಿಸಲಾಯಿತು.

ಗೃಹ ಸಚಿವ ಜಿ.ಪರಮೇಶ್ವರ್‌ ಅವರು ಈ ಮಸೂದೆಯನ್ನು ಮಂಡಿಸಿದರು. ಮಸೂದೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ ಪ್ರತಿಪಕ್ಷ ನಾಯಕ ಆರ್.‌ಅಶೋಕ್‌ ಅವರು, ಮಸೂದೆಯ ಪ್ರತಿಯನ್ನು ಹರಿದು ಎಸೆದರು.

ಇದನ್ನು ಓದಿ: ಲೋಕಸಭೆಯಲ್ಲಿ ವಿ-ಬಿಜಿ ರಾಮ್‌ ಜಿ ಮಸೂದೆ ಅಂಗೀಕಾರ

ಈ ನಡುವೆಯೇ ಸಚಿವ ಪರಮೇಶ್ವರ್‌ ಅವರು ಮಸೂದೆಗೆ ಸದನದ ಅನುಮೋದನೆ ಪಡೆದರು.

ದ್ವೇಷ ಭಾಷಣದ ಮಲಕ ಧಾರ್ಮಿಕ, ಜನಾಂಗೀಯ, ಜಾತಿ ಅಥವಾ ಸಮುದಾಯ, ಲಿಂಗ, ಲೈಂಗಿಕ ದೃಷ್ಟಿಕೋನ, ಜನ್ಮಸ್ಥಳ, ಭಾಷೆ, ನಿವಾಸ, ಅಂಗವೈಕಲ್ಯ, ಬುಡಕಟ್ಟು ಕುರಿತು ಯಾವುದೇ ವ್ಯಕ್ತಿಗೆ ಹಾನಿ ಮಾಡುವ ಅಥವಾ ದ್ವೇಷವನ್ನು ಉತ್ತೇಜಿಸುವ ಅಥವಾ ಪ್ರಚಾರ ಮಾಡುವ ವ್ಯಕ್ತಿ ಅಥವಾ ಗುಂಪಿಗೆ ಮೂರು ವರ್ಷಗಳ ಕಾಲ ಶಿಕ್ಷೆ ವಿಧಿಸಬಹುದು ಅಥವಾ ಐದು ಸಾವಿರ ರೂ ದಂಡದ ಜೊತೆಗೆ ಶಿಕ್ಷೆ ವಿಧಿಸಬಹುದು.

ರಾಜ್ಯದಲ್ಲಿ ಕೋಮು ದ್ವೇಷದ ಭಾಷಣ ಹೆಚ್ಚಾಗಿ ಸಮಾಜದಲ್ಲಿ ಅಶಾಂತಿ ಸೃಷ್ಟಿಯಾಗುತ್ತಿದೆ. ಇದನ್ನು ತಡೆಯಲು ಕಠಿಣ ಕ್ರಮ ಒಳಗೊಂಡ ಕಾನೂನು ಅಗತ್ಯಯ ಎಂದು ಸರ್ಕಾರದ ವಾದವಾಗಿದೆ. ಆದ್ದರಿಂದ ಈ ಮಸೂದೆಯನ್ನು ಮಂಡಿಸಲಾಗಿದೆ.

ಆಂದೋಲನ ಡೆಸ್ಕ್

Recent Posts

ಮಂಡ್ಯದಲ್ಲಿ ಭಿಕ್ಷುಕಿ ನಿಧನ : ಮೃತಳ ಮನೆಯಲ್ಲಿ ಮೂಟೆಗಟ್ಟಲೆ ಹಣ ಪತ್ತೆ; ಊರಿಗೂರೇ ಶಾಕ್!

ಮಂಡ್ಯ: ವೃದ್ಧ ಭೀಕ್ಷುಕಿಯೊಬ್ಬರು ತಾನು ಬೇಡಿ ಸಂಗ್ರಹಿಸಿಟ್ಟಿದ್ದ ಸಂಪತ್ತು ಇದೀಗ ಪರರ ಪಾಲಾಗಿರುವ ಸಂಗತಿ ಜನರನ್ನು ಅಚ್ಚರಿಗೊಳಿಸಿದೆ. ಮಂಡ್ಯ ನಗರದ…

6 hours ago

ಜಿಲ್ಲೆಗೊಂದು ಕೈಗಾರಿಕೆ ತರುತ್ತೇನೆ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭರವಸೆ

ಪಾಂಡವಪುರ : ಜಿಲ್ಲೆಯ ಜನರ ನಿರೀಕ್ಷೆಯಂತೆ ಕೇಂದ್ರ ಸಚಿವನಾಗಿ ನನ್ನ ಅಧಿಕಾರದ ಅವಧಿಯೊಳಗೆ ಜಿಲ್ಲೆಗೊಂದು ಕೈಗಾರಿಕೆಯನ್ನು ತಂದೇ ತರುತ್ತೇವೆ ಎಂದು…

8 hours ago

ನಕಲಿ ಔಷಧ ತಯಾರಿಕಾ, ಮಾರಾಟ ಜಾಲ ; ವಿದೇಶದಲ್ಲಿ ಕಿಂಗ್‌ಪಿನ್ ಬಂಧನ

ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಹರಡಿದ್ದ ನಕಲಿ ಔಷಧ ಮಾರಾಟ ಜಾಲದ ಕಿಂಗ್ ಪಿನ್, ವಿದೇಶದಲ್ಲಿ ಅಡಗಿದ್ದ…

8 hours ago

ಗೋಣಿಕೊಪ್ಪ | ಮಾರುಕಟ್ಟೆಯಲ್ಲಿ ಗಸ್ತು ತಿರುಗಿದ ಪೊಲೀಸರು ; ಅಕ್ರಮ ಚಟುವಟಿಕೆ ಮೇಲೆ ನಿಗಾ

ಗೋಣಿಕೊಪ್ಪ : ಗೋಣಿಕೊಪ್ಪ ಪಟ್ಟಣದ ಮಾರುಕಟ್ಟೆ ಪ್ರದೇಶದಲ್ಲಿ ಅನಧಿಕೃತ ವಾಹನ ನಿಲುಗಡೆ, ರಸ್ತೆ ಅತಿಕ್ರಮಣ ಹಾಗೂ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ…

9 hours ago

ಪಾರದೀಪ್ ಕರಾವಳಿಯಲ್ಲಿ ಹಡಗು ಮುಳುಗಡೆ ; ಇಬ್ಬರ ರಕ್ಷಣೆ, 22 ಮಂದಿ ನಾಪತ್ತೆ

72,100 ಟನ್‌ ಕಬ್ಬಿಣದ ಅದಿರು ಇದ್ದ ಹಡಗು ಭುವನೇಶ್ವರ: ಒಡಿಶಾದ ಪಾರದೀಪ್ ಕರಾವಳಿಯ ಆಳ ಸಮುದ್ರದಲ್ಲಿ ಶನಿವಾರ ಭೀಕರ ನೌಕಾ…

11 hours ago

ಐಎಎಸ್‌ ಅಧಿಕಾರಿ ಜ್ಞಾನೇಂದ್ರ ಕುಮಾರ್ ಮನೆ ಬಾಗಿಲು ಒಡೆದು ಇಡಿ ದಾಳಿ

ಬೆಂಗಳೂರು : ಕೆಪಿಎಸ್‌ಸಿ ಹಗರಣ ಸಂಬಂಧ ಫೋನ್ ಕರೆಗೆ ಪ್ರತಿಕ್ರಿಯಿಸದ ಹಿನ್ನೆಲೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅನುಪಸ್ಥಿತಿಯಲ್ಲಿ ಅವರ…

12 hours ago