Mysore
14
broken clouds

Social Media

ಗುರುವಾರ, 11 ಡಿಸೆಂಬರ್ 2025
Light
Dark

ಹಾವೇರಿ ರಸ್ತೆ ಅಪಘಾತಕ್ಕೆ ಕಾರಣವಾದ ಅಂಶಗಳ ಬಗ್ಗೆ ಅಲೋಕ್ ಕುಮಾರ್ ಟ್ವೀಟ್‌

ಹಾವೇರಿ : ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿ 13 ಜನರು ಮೃತಪಟ್ಟಿದ್ದರು. ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು ಗಣ್ಯರು ಸಂತಾಪವನ್ನು ಸೂಚಿಸಿದ್ದರು. ಇದೀಗ ಈ ಅಪಘಾತಕ್ಕೆ ಕಾರಣವಾದ ಅಂಶಗಳು ಯಾವುವು ಎಂಬುವುದರ ಬಗ್ಗೆ ರಾಜ್ಯ ಸಂಚಾರ ಮತ್ತು ರಸ್ತೆ ಸುರಕ್ಷತೆ ವಿಭಾಗದ ಹೆಚ್ಚುವರಿ ಪೊಲೀಸ್​ ಮಹಾನಿರ್ದೇಶಕ ಅಲೋಕ್​ ಕುಮಾರ್ ತಿಳಿಸಿದ್ದಾರೆ.

ಈ ಕುರಿತಂತೆ ಟ್ವೀಟ್‌ ಮಾಡಿರುವ ಅವರು, ಅಪಘಾತದಲ್ಲಿ 13 ಜನ ಸಾವನ್ನಪ್ಪಿರುವ ವಿಚಾರ ತಿಳಿದು ಬಹಳ ನೋವಾಗಿದೆ ಎಂದು ಸಂತಾಪ ಸೂಚಿಸಿದ್ದಾರೆ. ಅಲ್ಲದೆ ಅಪಘಾತಕ್ಕೆ ಏನು ಕಾರಣ ಎಂಬುವುದರ ಬಗ್ಗೆಯೂ ಟ್ವೀಟ್‌ ಮಾಡಿದ್ದು, ತಪ್ಪಾದ ಸ್ಥಳದಲ್ಲಿ ಲಾರಿ ಪಾರ್ಕಿಂಗ್​ ಮಾಡಿರುವುದು, ತಪ್ಪಾಗಿ ಓವರ್‌‌ ಟೇಕಿಂಗ್ ಮಾಡಿರಬಹುದು. ಅಥವಾ ಅತಿಯಾದ ವೇಗ , ಇಲ್ಲ ಚಾಲಕ ಆಯಾಸಗೊಂಡಿದ್ದರಿಂದ ಅಪಘಾತ ಸಂಭವಿಸಿರಬಹುದು ಎಂದು ಅಂದಾಜಿಸಿದ್ದಾರೆ.

ಇನ್ನು ಅಪಘಾತ ಸ್ಥಳಕ್ಕೆ ಭೇಟಿ ನೀಡುವುದಾಗಿ ಮಾಹಿತಿ ನೀಡಿ, ಜಾಗರೂಕತೆಯಿಂದ ವಾಹನ ಚಲಾಯಿಸಿ, ಜೀವ ರಕ್ಷಿಸಿ ಎಂದು ಬರೆದುಕೊಂಡಿದ್ದಾರೆ.

 

 

Tags:
error: Content is protected !!