ರಾಜ್ಯ

ಹಾವೇರಿ ರಸ್ತೆ ಅಪಘಾತಕ್ಕೆ ಕಾರಣವಾದ ಅಂಶಗಳ ಬಗ್ಗೆ ಅಲೋಕ್ ಕುಮಾರ್ ಟ್ವೀಟ್‌

ಹಾವೇರಿ : ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿ 13 ಜನರು ಮೃತಪಟ್ಟಿದ್ದರು. ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು ಗಣ್ಯರು ಸಂತಾಪವನ್ನು ಸೂಚಿಸಿದ್ದರು. ಇದೀಗ ಈ ಅಪಘಾತಕ್ಕೆ ಕಾರಣವಾದ ಅಂಶಗಳು ಯಾವುವು ಎಂಬುವುದರ ಬಗ್ಗೆ ರಾಜ್ಯ ಸಂಚಾರ ಮತ್ತು ರಸ್ತೆ ಸುರಕ್ಷತೆ ವಿಭಾಗದ ಹೆಚ್ಚುವರಿ ಪೊಲೀಸ್​ ಮಹಾನಿರ್ದೇಶಕ ಅಲೋಕ್​ ಕುಮಾರ್ ತಿಳಿಸಿದ್ದಾರೆ.

ಈ ಕುರಿತಂತೆ ಟ್ವೀಟ್‌ ಮಾಡಿರುವ ಅವರು, ಅಪಘಾತದಲ್ಲಿ 13 ಜನ ಸಾವನ್ನಪ್ಪಿರುವ ವಿಚಾರ ತಿಳಿದು ಬಹಳ ನೋವಾಗಿದೆ ಎಂದು ಸಂತಾಪ ಸೂಚಿಸಿದ್ದಾರೆ. ಅಲ್ಲದೆ ಅಪಘಾತಕ್ಕೆ ಏನು ಕಾರಣ ಎಂಬುವುದರ ಬಗ್ಗೆಯೂ ಟ್ವೀಟ್‌ ಮಾಡಿದ್ದು, ತಪ್ಪಾದ ಸ್ಥಳದಲ್ಲಿ ಲಾರಿ ಪಾರ್ಕಿಂಗ್​ ಮಾಡಿರುವುದು, ತಪ್ಪಾಗಿ ಓವರ್‌‌ ಟೇಕಿಂಗ್ ಮಾಡಿರಬಹುದು. ಅಥವಾ ಅತಿಯಾದ ವೇಗ , ಇಲ್ಲ ಚಾಲಕ ಆಯಾಸಗೊಂಡಿದ್ದರಿಂದ ಅಪಘಾತ ಸಂಭವಿಸಿರಬಹುದು ಎಂದು ಅಂದಾಜಿಸಿದ್ದಾರೆ.

ಇನ್ನು ಅಪಘಾತ ಸ್ಥಳಕ್ಕೆ ಭೇಟಿ ನೀಡುವುದಾಗಿ ಮಾಹಿತಿ ನೀಡಿ, ಜಾಗರೂಕತೆಯಿಂದ ವಾಹನ ಚಲಾಯಿಸಿ, ಜೀವ ರಕ್ಷಿಸಿ ಎಂದು ಬರೆದುಕೊಂಡಿದ್ದಾರೆ.

 

 

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಅಲರ್ಟ್‌ ಆದ ಲಾಟ್ಕರ್‌ : ಡ್ರಗ್ಸ್‌ ಜಾಲಮುಕ್ತಕ್ಕೆ ಪಣ : ದಿಢೀರ್‌ ದಾಳಿ

ಮೈಸೂರು : ನಗರವನ್ನು ಡ್ರಗ್ಸ್ ಜಾಲಮುಕ್ತ ಮಾಡಬೇಕು ಎಂಬ ತೀರ್ಮಾನಕ್ಕೆ ಬಂದಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು…

3 hours ago

ಫೆ.8ರಂದು ಸ್ವಚ್ಛತಾ ಓಟ : ʻಓಡೋಣ ಮೈಸೂರಿಗಾಗಿ-ಒಂದಾಗೋಣ ಸ್ವಚ್ಛತೆಗಾಗಿʼ

ಮೈಸೂರು : ಸ್ವಚ್ಛತೆಗೆ ಸಂಬಂಧಿಸಿದಂತೆ ಮತ್ತೆ ಒಂದನೇ ಸ್ಥಾನ ಪಡೆಯುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಲುವಾಗಿ ನಗರಪಾಲಿಕೆ ವತಿಯಿಂದ…

4 hours ago

ಗ್ರಾಮ ಪಂಚಾಯ್ತಿ ಅಧಿಕಾರ ಅವಧಿ ಮುಕ್ತಾಯ : ಈಗಿರುವ ಸದಸ್ಯರನ್ನೇ ಮುಂದುವರೆಸುತ್ತಾ ಸರ್ಕಾರ?

ಬೆಂಗಳೂರು : ಮಾರ್ಚ್ ಅಂತ್ಯದೊಳಗೆ ಎಲ್ಲಾ ಗ್ರಾಮ ಪಂಚಾಯಿತಿ ಸದಸ್ಯರ ಅಧಿಕಾರ ಅವಧಿ ಮುಕ್ತಾಯವಾಗಲಿರುವುದರಿಂದ ಗ್ರಾಮ ಪಂಚಾಯಿತಿ ಚುನಾವಣೆಗೆ ಸಿದ್ಧತೆ…

5 hours ago

ಪ್ರತ್ಯೇಕ ಕಳವು ಪ್ರಕರಣ : 11 ಮಂದಿ ಬಂಧನ

19 ಬೈಕ್, ಚಿನ್ನಾಭರಣ ಸೇರಿದಂತೆ 34 ಲಕ್ಷ ರೂ.ಮೌಲ್ಯದ ವಸ್ತುಗಳು ವಶ : ಎಸ್‌ಪಿ ಶೋಭಾರಾಣಿ ಮಂಡ್ಯ : ಮಳವಳ್ಳಿಯಲ್ಲಿ…

6 hours ago

ಪರೀಕ್ಷೆ ಮುಗಿದ ದಿನವೇ ಫಲಿತಾಂಶ ಪ್ರಕಟಿಸಿದ ಮಹಿಳಾ ಸರ್ಕಾರಿ ಕಾಲೇಜು!

ಮಂಡ್ಯ : ನಗರದ ಮಹಿಳಾ ಸರ್ಕಾರಿ ಕಾಲೇಜು (ಸ್ವಾಯುತ್ತ) ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸ ದಾಖಲೆ ನಿರ್ಮಿಸಿದ್ದು 2025-26ನೇ ಸಾಲಿನ ವಿವಿಧ…

6 hours ago

ಮಂಡ್ಯ ಜಿಲ್ಲೆಯ ರಾಷ್ಟೀಯ ಹೆದ್ದಾರಿಗಳ ಕಾಮಗಾರಿ ಶೀಘ್ರ ಮುಕ್ತಾಯಗೊಳಿಸಿ : ಸಚಿವ ಎನ್.ಚಲುವರಾಯಸ್ವಾಮಿ

ಬೆಂಗಳೂರು : ಮಂಡ್ಯ ಜಿಲ್ಲೆ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಮುಕ್ತಾಯಗೊಳಿಸುವಂತೆ ಕೃಷಿ ಸಚಿವರು…

7 hours ago