ರಾಜ್ಯ

ಹಾವೇರಿಯಲ್ಲಿ ಮಹಾಮಾರಿ ಡೆಂಗ್ಯೂಗೆ ಮೊದಲ ಬಲಿ: ಚಿಕಿತ್ಸೆ ಫಲಿಸದೇ ಮಹಿಳೆ ಸಾವು

ಹಾವೇರಿ: ಹಾವೇರಿಯಲ್ಲಿ ಮಹಾಮಾರಿ ಡೆಂಗ್ಯೂಗೆ ಮೊದಲ ಬಲಿಯಾಗಿದ್ದು, ಚಿಕಿತ್ಸೆ ಫಲಿಸದೇ ಮಹಿಳೆಯೊಬ್ಬರು ಬಲಿಯಾಗಿದ್ದಾರೆ.

ಮೃತ ಮಹಿಳೆಯನ್ನು ಹಾನಗಲ್‌ ತಾಲ್ಲೂಕಿನ ನರೇಗಲ್‌ ಗ್ರಾಮದ ಗೌಸಿಯಾ ಎಂದು ಗುರುತಿಸಲಾಗಿದೆ. ಹಾವೇರಿ ನಗರದ ಮಲ್ಲಾಡ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.

ಗೌಸಿಯಾಗೆ ಕಳೆದ ಎರಡು ದಿನಗಳಿಂದ ತೀವ್ರ ಜ್ವರವಿತ್ತು. ನಂತರ ಅವರನ್ನು ಆಸ್ಪತ್ರೆಗೆ ದಾಖಲಿಸಿ ತಪಾಸಣೆ ನಡೆಸಿದಾಗ ಮಹಾಮಾರಿ ಡೆಂಗ್ಯೂ ಇರುವುದು ಪತ್ತೆಯಾಗಿದೆ ಎನ್ನಲಾಗಿದೆ. ನಂತರ ಅವರಿಗೆ ಹೆಚ್ಚಿನ ಚಿಕಿತ್ಸೆ ನೀಡಿದರೂ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

ಇನ್ನೂ ರಾಜ್ಯದಲ್ಲಿ ಪ್ರತೀ ಶುಕ್ರವಾದ ರೋಗ ಹರಡುವ ಮೂಲ ಪತ್ತೆ ಮತ್ತು ನಾಶ ವಿಶೇಷ ಅಭಿಯಾನವನ್ನು ಹೆಚ್ಚು ಪರಿಣಾಮಕಾರಿಯಾಗಿ ಮಾಡಲಾಗುತ್ತಿದೆ. ಆದರೂ ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣಗಳು ಏರಿಕೆಯಾಗುತ್ತಿರುವುದು ಜನರಲ್ಲಿ ಭಯವನ್ನುಂಟುಮಾಡಿದೆ.

ಇನ್ನೂ ಈ ಬಗ್ಗೆ ಮಾತನಾಡಿರುವ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಅವರು, ಡೆಂಗ್ಯೂ ಪರೀಕ್ಷೆಯ ಪ್ರಮಾಣವನ್ನು ಕಡಿಮೆ ಮಾಡುವುದು ಬೇಡ. ಹೆಚ್ಚು ಮಾಡಿದಂತೆ ಪ್ರಕರಣಗಳನ್ನು ಪ್ರಾರಂಭಿಕ ಹಂತದಲ್ಲಿ ಪತ್ತೆ ಹಚ್ಚಿ ಚಿಕಿತ್ಸೆ ನೀಡಬಹುದು. ಡೆಂಗ್ಯೂಗೆ ಕಾರಣವಾಗುವ ಲಾರ್ವಾ ಮತ್ತು ಮೊಟ್ಟೆಗಳನ್ನು ಮೂಲದಲ್ಲಿಯೇ ನಾಶ ಮಾಡಬೇಕು ಎಂದು ಹೇಳಿದ್ದಾರೆ.

ಆಶಾ ಕಾರ್ಯಕರ್ತೆಯರು, ನರ್ಸಿಂಗ್‌ ವಿದ್ಯಾರ್ಥಿಗಳು, ಎನ್‌ಎಸ್‌ಎಸ್‌ ವಿದ್ಯಾರ್ಥಿಗಳು ಸೇರಿದಂತೆ ಮತ್ತಿತರ ಸ್ವಯಂ ಸೇವಕರ ನೆರವಿನೊಂದಿಗೆ ಮನೆ ಮನೆ ಸಮೀಕ್ಷೆ ನಡೆಸಿ ಡೆಂಗ್ಯೂ ಬಗ್ಗೆ ಜನರಲ್ಲಿ ಹೆಚ್ಚಿನ ಅರಿವು ಮೂಡಿಸಬೇಕು ಎಂದು ಸೂಚನೆ ನೀಡಿದ್ದಾರೆ.

ರಾಜ್ಯದಲ್ಲಿ ಏನೇ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದರೂ, ಡೆಂಗ್ಯೂ ಪ್ರಕರಣ ಮಾತ್ರ ಕಡಿಮೆಯಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಹಳ್ಳಿಗಳಲ್ಲಿ ಹೆಚ್ಚಿನ ಸ್ವಚ್ಛತೆ ಕಾಪಾಡಬೇಕು. ಮಳೆ ನೀರು ನಿಂತುಕೊಳ್ಳುವ ಸ್ಥಳಗಳನ್ನು ಆಗಾಗ ಸ್ವಚ್ಛ ಮಾಡಿಕೊಳ್ಳಬೇಕು ಎಂದು ಆರೋಗ್ಯ ಇಲಾಖೆ ಜನತೆಗೆ ಸೂಚನೆ ನೀಡಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಚೇತನ್ ಅಹಿಂಸಾ ಗಡಿಪಾರಿಗೆ ಆಗ್ರಹ

ಅಭಿಮಾನಿಗಳು, ನಿರ್ಮಾಪಕರ ಸಂಘದ ಆಕ್ರೋಶ ಬೆಂಗಳೂರು : ಪದ್ಮಭೂಷಣ ಡಾ.ರಾಜ್‌ಕುಮಾರ್ ಅವರ ಸ್ಮಾರಕದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಹೇಳಿಕೆ…

1 hour ago

ಕೊಡಗು | ಗುಂಡು ಹೊಡೆದುಕೊಂಡು ಶಿಕ್ಷಕಿ ಆತ್ಮಹತ್ಯೆ

ಮಡಿಕೇರಿ : ಶಿಕ್ಷಕಿಯೊಬ್ಬರು ಬಂದೂಕಿನಿಂದ ಗುಂಡು ಹೊಡೆದುಕೊಂಡು ಸಾವಿಗೆ ಶರಣಾದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಚೇರಂಬಾಣೆಯಲ್ಲಿ ನಡೆದಿದೆ.…

1 hour ago

ಬಿಜೆಪಿಗೆ ಸೇರ್ಪಡೆಗೊಂಡ 7 ರಾಜ್ಯಸಭಾ ಸದಸ್ಯರ ವಿರುದ್ಧ ಕ್ರಮಕ್ಕೆ ಎಎಪಿ ಆಗ್ರಹ

ನವದೆಹಲಿ : ಆಮ್ ಆದ್ಮಿ ಪಕ್ಷದಲ್ಲಿ ಭಾರೀ ರಾಜಕೀಯ ಬೆಳವಣಿಗೆ ನಡೆದಿದ್ದು, ಪಕ್ಷ ತೊರೆದು ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ)…

2 hours ago

ಶಾಲೆಗಳಲ್ಲಿ ದಿನಪತ್ರಿಕೆ ಓದುವುದು ಇನ್ಮುಂದೆ ಕಡ್ಡಾಯ

ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಪ್ರತಿದಿನ ದಿನಪತ್ರಿಕೆ ಓದಿಸುವುದನ್ನು ಕಡ್ಡಾಯಗೊಳಿಸಲು ಶಿಕ್ಷಣ…

2 hours ago

ಜನಗಣತಿಯಲ್ಲಿ ಪ್ರತಿಯೊಬ್ಬ ನಾಗರಿಕನ ಪಾಲ್ಗೊಳ್ಳುವಿಕೆ ಅತ್ಯಗತ್ಯ: ಪ್ರಧಾನಿ ಮೋದಿ

ನವದೆಹಲಿ : ದೇಶದಾದ್ಯಂತ ನಡೆಯುತ್ತಿರುವ ಜನಗಣತಿ ಕಾರ್ಯವು ಕೇವಲ ಸರ್ಕಾರದ ಕೆಲಸವಲ್ಲ, ಬದಲಾಗಿ ಪ್ರತಿ ನಾಗರಿಕರ ಜವಾಬ್ದಾರಿಯಾಗಿದೆ. ಇದರಲ್ಲಿ ಎಲ್ಲರ…

3 hours ago

ಮೈಸೂರು | ಕರಗ ಮಹೋತ್ಸವ ಸಂಪನ್ನ

ಮೈಸೂರು : ನಗರದ ಇಟ್ಟಿಗೆಗೂಡಿನ ಶ್ರೀ ರೇಣುಕಾದೇವಿ ಕರಗ ದೇವಸ್ಥಾನ ಟ್ರಸ್ಟ್, ಶ್ರೀ ಚಾಮುಂಡೇಶ್ವರಿ ಮತ್ತು ಮಾರಿಯಮ್ಮನವರ ೧೦೨ನೇ ಕರಗಮಹೋತ್ಸವ…

3 hours ago