ರಾಜ್ಯ

ಅರಣ್ಯ ಸಿಬ್ಬಂದಿಗೆ ಅಪಾಯ ಭತ್ಯೆ: ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು: ವನ್ಯಜೀವಿ ಮತ್ತು ಕಳ್ಳಬೇಟೆಗಾರರ ದಾಳಿಯಿಂದ ಅಪಾಯಕ್ಕೀಡಾಗಿವ ಅರಣ್ಯ ಸಿಬ್ಬಂದಿಗಳಿಗೆ ಅಪಾಯ ಭತ್ಯೆ ನೀಡಲು ಸರ್ಕಾರ ತೀರ್ಮಾನಿಸಿದೆ ಎಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಹೇಳಿದರು.

ಇಂದು (ಫೆ.21) ಅರಣ್ಯ ಭವನದಲ್ಲಿ ಅರಣ್ಯ ಪಡೆಯ ಮುಖ್ಯಸ್ಥೆ ಮೀನಾಕ್ಷಿ ನೇಗಿ ಹಾಗೂ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್‌.ಷಡಾಕ್ಷರಿ ಅವರನ್ನು ಅಭಿನಂದಿಸಿ ಮಾತನಾಡಿದರು.

ಅರಣ್ಯ ಸಿಬ್ಬಂದಿಯ ಬಹು ಬೇಡಿಕೆಗಳಲ್ಲಿ ಒಂದಾಗಿರುವ ಪೊಲೀಸ್‌ ಕ್ಯಾಂಟಿನ್‌ ಮಾದರಿಯ ಕ್ಯಾಂಟೀನ್‌ ವ್ಯವಸ್ಥೆ ಜಾರಿಗೊಳಿಸಲು ಮುಕ್ಯಮಂತ್ರಿಯವರ ಗಮನ ಸೆಳೆಯಲಾಗಿದೆ ಎಂದು ತಿಳಿಸಿದರು.

ಅರಣ್ಯ ಮತ್ತು ಪರಿಸರ ಇಲಾಖೆ ಅತ್ಯಂತ ಮಹತ್ವದ ಇಲಾಖೆ. ಇಡೀ ವಿಶ್ವದ ಜಾಗತಿಕ ತಾಪಮಾನ, ಹವಮಾನ ಬದಲಾವಣೆಯಂತಹ ಸವಾಲುಗಳಿಗೆ ಪರಿಹಾರ ಇರುವುದು ಅರಣ್ಯ ಮತ್ತು ಪರಿಸರ ಇಲಾಖೆಯಲ್ಲಿ ಮಾತ್ರ ಎಂದರು.

ನಾನು ಅರಣ್ಯ ಇಲಾಖೆ ಸಚಿವನಾದ ಮೇಲೆ ಈ ಇಲಾಖೆಯಲ್ಲಿ ಹಲವಾರು ಸುಧಾರಣೆಗಳನ್ನು ತಂದಿದ್ದೇನೆ. ಆನ್‌ಲೈನ್‌,ಎಫ್‌ಐಆರ್‌ ವ್ಯವಸ್ಥೆ, ಕೌನ್ಸೆಲಿಂಗ್‌ ಮೂಲಕ ಟಿಕೆಟ್‌ ಮುಂಗಡ ಕಾಯ್ದಿರಿಸುವ ವ್ಯವಸ್ಥೆ, ಅರಣ್ಯ ಒತ್ತುವರಿ ತೆರವು ಮೊದಲಾದ ಹಲವು ಕ್ರಮಗಳನ್ನು ಕೈಗೊಂಡಿದ್ದೇನೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಅಂಜುಂ ಪರ್ವೇಜ್‌ ಮತ್ತಿರರು ಇದ್ದರು.

 

ಆಂದೋಲನ ಡೆಸ್ಕ್

Recent Posts

ಸಚ್ಚಿದಾನದ ಶ್ರೀಗಳ ನೇತೃತ್ವದಲ್ಲಿ ಹನುಮಾನ್‌ ಚಾಲೀಸಾ ಪಾರಾಯಣ ಯಜ್ಞ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅವಧೂತ ದತ್ತ ಪೀಠದ ಗಣಪತಿ ಸಚ್ಚಿದಾನಂದ ಸ್ವಾಮೀಜಿಗಳ ನೇತೃತ್ವದಲ್ಲಿ ಬೃಹತ್ ಸಾಮೂಹಿಕ ಹನುಮಾನ್…

17 seconds ago

ಓದುಗರ ಪತ್ರ | ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಸೌಲಭ್ಯ ಕಲ್ಪಿಸಿ

ಚಾಮರಾಜನಗರ ಜಿಲ್ಲೆಯ ಎಲ್ಲಾ ಗ್ರಾಮಗಳ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಆಂಬ್ಯುಲೆನ್ಸ್ ಸೌಲಭ್ಯವಿಲ್ಲದೇ ಅಪಘಾತ ಮೊದಲಾದ ತುರ್ತು ಸಂದರ್ಭಗಳಲ್ಲಿ ರೋಗಿಗಳು ಹಾಗೂ…

40 mins ago

ಭಾರತ – ಅಮೆರಿಕ ವ್ಯಾಪಾರ ಒಪ್ಪಂದ : ಹಿನ್ನೆಲೆ ಮತ್ತು ಪರಿಣಾಮ

• ರಮಾನಂದ ಶರ್ಮಾ, ಅರ್ಥಿಕ, ರಾಜಕೀಯ ವಿಶ್ಲೇಷಕರು ಭಾರೀ ಹಗ್ಗಜಗ್ಗಾಟದ ನಂತರ ಭಾರತ ಮತ್ತು ಅಮೆರಿಕ ವ್ಯಾಪಾರ ಒಪ್ಪಂದಕ್ಕೆ ಸಹಿ…

54 mins ago

ಓದುಗರ ಪತ್ರ | ಯಡತೊರೆಯಲ್ಲಿ ಬಸ್ ತಂಗುದಾಣ ನಿರ್ಮಿಸಿ

ತಿ.ನರಸೀಪುರ ತಾಲ್ಲೂಕಿನ ಯಡದೊರೆ ಗ್ರಾಮದಲ್ಲಿ ಬಸ್ ತಂಗುದಾಣ ಇಲ್ಲದೇ ಸಾರ್ವಜನಿಕರು ಮರದ ಕೆಳಗೆ ನಿಲ್ಲುವುದು ಅನಿವಾರ್ಯವಾಗಿದೆ. ಬಸ್ಸುಗಳು ಯಡದೊರೆ ಹತ್ತಿರ…

1 hour ago

ಓದುಗರ ಪತ್ರ | ಕಾಲೇಜಿಗೆ ಸುತ್ತುಗೋಡೆ ನಿರ್ಮಿಸಿ

ಮಹಾರಾಣಿ ಮಹಿಳಾ ಕಲಾ ಕಾಲೇಜಿನಲ್ಲಿ ಸುತ್ತು ಗೋಡೆ ಇಲ್ಲದೇ ವಿದ್ಯಾರ್ಥಿನಿಯರಿಗೆ ಭದ್ರತೆ ಇಲ್ಲದಂತಾಗಿದೆ. ಕಾಲೇಜಿನ ಪಕ್ಕದ ರಸ್ತೆಗಳಲ್ಲಿ ವಾಹನಗಳು ಚಲಿಸುತ್ತಿರುವ…

1 hour ago

ಮ.ಬೆಟ್ಟ ಮಾರ್ಗ ಮಧ್ಯೆ ಚಿರತೆ ಪ್ರತ್ಯಕ್ಷ : ಸಾರ್ವಜನಿಕರಲ್ಲಿ ಆತಂಕ

ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಮಾರ್ಗ ಮಧ್ಯದಲ್ಲಿ ಶುಕ್ರವಾರ ತಡರಾತ್ರಿ ಚಿರತೆ ಕಾಣಿಸಿಕೊಂಡಿದ್ದು ಭಕ್ತರಲ್ಲಿ ಆತಂಕ…

1 hour ago