ರಾಜ್ಯ

ಅರಣ್ಯ ಸಿಬ್ಬಂದಿಗೆ ಅಪಾಯ ಭತ್ಯೆ: ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು: ವನ್ಯಜೀವಿ ಮತ್ತು ಕಳ್ಳಬೇಟೆಗಾರರ ದಾಳಿಯಿಂದ ಅಪಾಯಕ್ಕೀಡಾಗಿವ ಅರಣ್ಯ ಸಿಬ್ಬಂದಿಗಳಿಗೆ ಅಪಾಯ ಭತ್ಯೆ ನೀಡಲು ಸರ್ಕಾರ ತೀರ್ಮಾನಿಸಿದೆ ಎಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಹೇಳಿದರು.

ಇಂದು (ಫೆ.21) ಅರಣ್ಯ ಭವನದಲ್ಲಿ ಅರಣ್ಯ ಪಡೆಯ ಮುಖ್ಯಸ್ಥೆ ಮೀನಾಕ್ಷಿ ನೇಗಿ ಹಾಗೂ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್‌.ಷಡಾಕ್ಷರಿ ಅವರನ್ನು ಅಭಿನಂದಿಸಿ ಮಾತನಾಡಿದರು.

ಅರಣ್ಯ ಸಿಬ್ಬಂದಿಯ ಬಹು ಬೇಡಿಕೆಗಳಲ್ಲಿ ಒಂದಾಗಿರುವ ಪೊಲೀಸ್‌ ಕ್ಯಾಂಟಿನ್‌ ಮಾದರಿಯ ಕ್ಯಾಂಟೀನ್‌ ವ್ಯವಸ್ಥೆ ಜಾರಿಗೊಳಿಸಲು ಮುಕ್ಯಮಂತ್ರಿಯವರ ಗಮನ ಸೆಳೆಯಲಾಗಿದೆ ಎಂದು ತಿಳಿಸಿದರು.

ಅರಣ್ಯ ಮತ್ತು ಪರಿಸರ ಇಲಾಖೆ ಅತ್ಯಂತ ಮಹತ್ವದ ಇಲಾಖೆ. ಇಡೀ ವಿಶ್ವದ ಜಾಗತಿಕ ತಾಪಮಾನ, ಹವಮಾನ ಬದಲಾವಣೆಯಂತಹ ಸವಾಲುಗಳಿಗೆ ಪರಿಹಾರ ಇರುವುದು ಅರಣ್ಯ ಮತ್ತು ಪರಿಸರ ಇಲಾಖೆಯಲ್ಲಿ ಮಾತ್ರ ಎಂದರು.

ನಾನು ಅರಣ್ಯ ಇಲಾಖೆ ಸಚಿವನಾದ ಮೇಲೆ ಈ ಇಲಾಖೆಯಲ್ಲಿ ಹಲವಾರು ಸುಧಾರಣೆಗಳನ್ನು ತಂದಿದ್ದೇನೆ. ಆನ್‌ಲೈನ್‌,ಎಫ್‌ಐಆರ್‌ ವ್ಯವಸ್ಥೆ, ಕೌನ್ಸೆಲಿಂಗ್‌ ಮೂಲಕ ಟಿಕೆಟ್‌ ಮುಂಗಡ ಕಾಯ್ದಿರಿಸುವ ವ್ಯವಸ್ಥೆ, ಅರಣ್ಯ ಒತ್ತುವರಿ ತೆರವು ಮೊದಲಾದ ಹಲವು ಕ್ರಮಗಳನ್ನು ಕೈಗೊಂಡಿದ್ದೇನೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಅಂಜುಂ ಪರ್ವೇಜ್‌ ಮತ್ತಿರರು ಇದ್ದರು.

 

ಆಂದೋಲನ ಡೆಸ್ಕ್

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 12 ಶುಕ್ರವಾರ

2 hours ago

ಮಳವಳ್ಳಿ | ಚಿರತೆ ಪ್ರತ್ಯಕ್ಷ ; ಆತಂಕ

ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…

12 hours ago

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

16 hours ago

ಮಲ್ಲಿಕಾರ್ಜುನ್‌ ಖರ್ಗೆ, ಎಂ.ನಾಗರಾಜ್‌ ಸಹಿತ ನಾಲ್ವರು ರಾಜ್ಯಸಭೆಗೆ ಅವಿರೋಧ ಆಯ್ಕೆ

ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…

17 hours ago

ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ 11ನೇ ನೀತಿ ಆಯೋಗದ ಸಭೆ

ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…

17 hours ago

ಕಾಂಗ್ರೆಸ್‌ ಶಾಸಕ ಷಡಕ್ಷರಿ ಆರೋಗ್ಯ ಸ್ಥಿತಿ ಗಂಭೀರ

ನವದೆಹಲಿ: ತಿಪಟೂರು ಕಾಂಗ್ರೆಸ್‌ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…

22 hours ago