ರಾಜ್ಯ

ಅರಣ್ಯ ಸಿಬ್ಬಂದಿಗೆ ಅಪಾಯ ಭತ್ಯೆ: ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು: ವನ್ಯಜೀವಿ ಮತ್ತು ಕಳ್ಳಬೇಟೆಗಾರರ ದಾಳಿಯಿಂದ ಅಪಾಯಕ್ಕೀಡಾಗಿವ ಅರಣ್ಯ ಸಿಬ್ಬಂದಿಗಳಿಗೆ ಅಪಾಯ ಭತ್ಯೆ ನೀಡಲು ಸರ್ಕಾರ ತೀರ್ಮಾನಿಸಿದೆ ಎಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಹೇಳಿದರು.

ಇಂದು (ಫೆ.21) ಅರಣ್ಯ ಭವನದಲ್ಲಿ ಅರಣ್ಯ ಪಡೆಯ ಮುಖ್ಯಸ್ಥೆ ಮೀನಾಕ್ಷಿ ನೇಗಿ ಹಾಗೂ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್‌.ಷಡಾಕ್ಷರಿ ಅವರನ್ನು ಅಭಿನಂದಿಸಿ ಮಾತನಾಡಿದರು.

ಅರಣ್ಯ ಸಿಬ್ಬಂದಿಯ ಬಹು ಬೇಡಿಕೆಗಳಲ್ಲಿ ಒಂದಾಗಿರುವ ಪೊಲೀಸ್‌ ಕ್ಯಾಂಟಿನ್‌ ಮಾದರಿಯ ಕ್ಯಾಂಟೀನ್‌ ವ್ಯವಸ್ಥೆ ಜಾರಿಗೊಳಿಸಲು ಮುಕ್ಯಮಂತ್ರಿಯವರ ಗಮನ ಸೆಳೆಯಲಾಗಿದೆ ಎಂದು ತಿಳಿಸಿದರು.

ಅರಣ್ಯ ಮತ್ತು ಪರಿಸರ ಇಲಾಖೆ ಅತ್ಯಂತ ಮಹತ್ವದ ಇಲಾಖೆ. ಇಡೀ ವಿಶ್ವದ ಜಾಗತಿಕ ತಾಪಮಾನ, ಹವಮಾನ ಬದಲಾವಣೆಯಂತಹ ಸವಾಲುಗಳಿಗೆ ಪರಿಹಾರ ಇರುವುದು ಅರಣ್ಯ ಮತ್ತು ಪರಿಸರ ಇಲಾಖೆಯಲ್ಲಿ ಮಾತ್ರ ಎಂದರು.

ನಾನು ಅರಣ್ಯ ಇಲಾಖೆ ಸಚಿವನಾದ ಮೇಲೆ ಈ ಇಲಾಖೆಯಲ್ಲಿ ಹಲವಾರು ಸುಧಾರಣೆಗಳನ್ನು ತಂದಿದ್ದೇನೆ. ಆನ್‌ಲೈನ್‌,ಎಫ್‌ಐಆರ್‌ ವ್ಯವಸ್ಥೆ, ಕೌನ್ಸೆಲಿಂಗ್‌ ಮೂಲಕ ಟಿಕೆಟ್‌ ಮುಂಗಡ ಕಾಯ್ದಿರಿಸುವ ವ್ಯವಸ್ಥೆ, ಅರಣ್ಯ ಒತ್ತುವರಿ ತೆರವು ಮೊದಲಾದ ಹಲವು ಕ್ರಮಗಳನ್ನು ಕೈಗೊಂಡಿದ್ದೇನೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಅಂಜುಂ ಪರ್ವೇಜ್‌ ಮತ್ತಿರರು ಇದ್ದರು.

 

ಆಂದೋಲನ ಡೆಸ್ಕ್

Recent Posts

ದಸರಾ ಯಶಸ್ವಿಗೆ 17 ಉಪಸಮಿತಿಗಳ ರಚನೆ

ಮೈಸೂರು: ಮೈಸೂರು ದಸರಾ ಮಹೋತ್ಸವದ ಯಶಸ್ವಿ ಆಯೋಜನೆಗಾಗಿ 17 ಉಪಸಮಿತಿಗಳನ್ನು ರಚಿಸಲಾಗಿದ್ದು, ಕಾರ್ಯಾಧ್ಯಕ್ಷರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ…

5 hours ago

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

19 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

19 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

19 hours ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

19 hours ago