ರಾಜ್ಯ

ಪ್ರಧಾನಿ ಮೋದಿ ವಿರುದ್ಧ ಟ್ವಿಟ್ಟರ್‌ ವಾರ್‌ ನಡೆಸಿದ ಎಚ್‌ಸಿ ಮಹದೇವಪ್ಪ

ಮೈಸೂರು: ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಸಿ ಮಹದೇವಪ್ಪ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಟ್ವಿಟ್ಟರ್‌ ಮೂಲಕ ದೇವದೂತ ಬಂದ ನಂತರವೇ ಎಂದು ತಲೆ ಬರಹ ನೀಡಿ ಮೋದಿ ಪ್ರಧಾನಿ ಆದಾಗಿನಿಂದ ಇಲ್ಲಿಯವರೆಗೆ ಇವೆಲ್ಲಾ ಅನಾಹುತಗಳು ನಡೆದಿವೆ ಎಂದು ಬರೆದುಕೊಂಡಿದ್ದಾರೆ.

ಕೆಲ ದಿನಗಳ ಹಿಂದಷ್ಟೆ, ಪ್ರಧಾನಿ ಮೋದಿ ತಮ್ಮನ್ನು ತಾವು ದೇವದೂತ ಎಂದು ಕರೆದುಕೊಂಡಿದ್ದರು. ಇದನ್ನು ಉಲ್ಲೇಖಿಸಿ ವಾಗ್ದಾಳಿ ನಡೆಸಿರುವ ಎಚ್‌ಸಿ ಮಹದೇವಪ್ಪ, ನಿಮ್ಮ ಅವಧಿಯಲ್ಲೇ ಡಾಲರ್‌ ಎದುರು ರೂಪಾಯಿ ಕುಸಿತ ಕಂಡಿತು. ಸಿಲಿಂಡರ್‌ ಬೆಲೆ ಏರಿಕೆ ಕಂಡಿತು. ಪುಲ್ವಾಮಾ ದಾಳಿ, ಹಸಿವಿನ ಸೂಚ್ಯಂಕದಲ್ಲಿ ಭಾರತದ ಕಳಪೆ ಸಾಧನೆ, ಮಣಿಪುರ ಹಿಂಸಾಚಾರ ವಿವಿಧ ವಿಚಾರಗಳನ್ನು ಉಲ್ಲೇಖಿಸಿ, ಮೋದಿ ಕಾಲೆಳೆದಿದ್ದಾರೆ.

ಟ್ವಿಟ್ಟರ್‌ನಲ್ಲೇನಿದೆ?

ದೇವದೂತ ಬಂದ ನಂತರವೇ

1) 72 ರೂಪಾಯಿ ಇದ್ದ ಪೆಟ್ರೋಲ್ ಬೆಲೆ 100 ರೂಪಾಯಿಗೆ ಏರಿತು

2) 60 ರೂ ಇದ್ದ ಡೀಸೆಲ್ 85 ಕ್ಕೆ ಏರಿಕೆಯಾಯಿತು

3) ಡಾಲರ್ ಎದುರು ರೂಪಾಯಿಯು ಭಾರೀ ಕುಸಿತ ಕಂಡಿತು

4) ಅಡುಗೆ ಸಿಲಿಂಡರ್ ಬೆಲೆ 400 ರಿಂದ 1000 ರೂಪಾಯಿಗೆ ಏರಿಕೆ ಕಂಡಿತು

5) ಪುಲ್ವಾಮ ದಾಳಿ ನಡೆದು ಸೈನಿಕರು ಸಾವನ್ನಪ್ಪುವಂತಾಯಿತು

6) ಭಾರತ ಜಾಗತಿಕ ಹಸಿವಿನ ಸೂಚ್ಯಂಕದಲ್ಲಿ 55 ರಿಂದ 102 ನೇ ಸ್ಥಾನಕ್ಕೆ ಕುಸಿಯಿತು

7) ಜನ ಸಾಮಾನ್ಯರ ಕೊಳ್ಳುವ ಶಕ್ತಿಯೇ ಕ್ಷೀಣಿಸಿತು

8) ಕರೋನಾ ಸಂದರ್ಭದಲ್ಲಿ ಆಕ್ಸಿಜನ್ ದೊರಕದೇ ಲೆಕ್ಕವಿಲ್ಲದಷ್ಟು ಸಾವು ನೋವುಗಳಾಯಿತು

9) ಚೀನಾವು ಗಡಿ ಪ್ರದೇಶದಲ್ಲಿ ಭಾರತವನ್ನು ಆಕ್ರಮಿಸಿ ತನ್ನ ಗ್ರಾಮಗಳನ್ನು ನಿರ್ಮಿಸಿತು

10) ಬಾಬಾ ಸಾಹೇಬರು ರಚಿಸಿದ ಸಂವಿಧಾನಕ್ಕೆ ಅಪಾಯ ಒದಗಿತು

11) ಜನರಿಗೆ ನ್ಯಾಯವಾಗಿಯೇ ನೀಡಬೇಕಿದ್ದ ಬರ ಪರಿಹಾರವನ್ನು ಕೋರ್ಟ್ ಮೆಟ್ಟಿಲೇರಿ ಪಡೆಯುವಂತೆ ಆಯಿತು

12) ಮಣಿಪುರದಂತಹ ರಾಜಕೀಯ ಅರಾಜಕತೆ ಮತ್ತು ಹಿಂಸೆಯು ಕಣ್ಣ ಮುಂದೆಯೇ ಜರುಗಿತು

13) ದೇಶದ ಸಾಲವು 55 ಲಕ್ಷ ಕೋಟಿಗಳಿಂದ 185 ಲಕ್ಷ ಕೋಟಿಗೆ ಏರಿಕೆ ಆಯಿತು ಎಂದು ಸುದೀರ್ಘವಾಗಿ ಬರೆದುಕೊಂಡು ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ನಾಳೆಯಿಂದ ಐಪಿಎಲ್‌ ಶುರು : ಅಧಿಕಾರಿಗಳ ಜತೆ ಸಿಎಸ್‌ ಸುದೀರ್ಘ ಸಭೆ

ಬೆಂಗಳೂರು : ನಾಳೆಯಿಂದ ಐಪಿಎಲ್ ಪಂದ್ಯಾವಳಿಗಳು ಆರಂಭವಾಗಲಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಂಬಂಧಪಟ್ಟ…

2 hours ago

ಮದ್ದೂರು ಬಳಿ ಭೀಕರ ಅಪಘಾತ : 14 ಶಾಲಾ ಮಕ್ಕಳು ಸೇರಿದಂತೆ 20 ಮಂದಿಗೆ ಗಾಯ

ಮದ್ದೂರು : ಖಾಸಗಿ ಶಾಲೆ ಬಸ್ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ, 14 ವಿದ್ಯಾರ್ಥಿಗಳ ಜತೆಗೆ 6…

2 hours ago

ಮಹದೇಶ್ವರ ಬೆಟ್ಟ | 23 ದಿನದಲ್ಲಿ 2 ಕೋಟಿ ಒಡೆಯನಾದ ಮಾದಪ್ಪ

ಹನೂರು : ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ…

2 hours ago

ಜನಪರ ಆಡಳಿತ ನೀಡುವಲ್ಲಿ ಸರ್ಕಾರ ವಿಫಲ : ನಿಖಿಲ್‌ ಕಿಡಿ

ಎಚ್.ಡಿ.ಕೋಟೆ : ರಾಜ್ಯದಲ್ಲಿ ಜಾತ್ಯತೀತ ಜನತಾದಳ-ಬಿಜೆಪಿಯ ಮೈತ್ರಿಯ ಸರ್ಕಾರ ಅಧಿಕಾರಕ್ಕೆ ಬಂದು ಜನಪರ ಆಡಳಿತ ನೀಡುವ ದಿನಗಳು ಹತ್ತಿರವಾಗುತ್ತಿವೆ ಎಂದು…

3 hours ago

ದಾವಣಗೆರೆ ದಕ್ಷಿಣ ಉಪಚುನಾವಣೆ : ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್‌

ಬೆಂಗಳೂರು : ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ತಾವು ಕಣದಿಂದ ಹಿಂದೆ ಸರಿದಿರುವುದಾಗಿ ಘೋಷಿಸಿದ್ದಾರೆ.…

3 hours ago

SSLC | ಪರೀಕ್ಷೆ ಅಂಕ 625ರ ಬದಲಿಗೆ 525ಕ್ಕೆ ಇಳಿಕೆ ; ಲೆಕ್ಕಕ್ಕಿಲ್ಲ ತೃತೀಯ ಭಾಷೆ

ಬೆಂಗಳೂರು : ಕರ್ನಾಟಕದ ಶೈಕ್ಷಣಿಕ ಇತಿಹಾಸದಲ್ಲಿ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪದ್ಧತಿಯಲ್ಲಿ ಆಮೂಲಾಗ್ರ…

3 hours ago