ರಾಜ್ಯ

ಪ್ರಧಾನಿ ಮೋದಿ ವಿರುದ್ಧ ಟ್ವಿಟ್ಟರ್‌ ವಾರ್‌ ನಡೆಸಿದ ಎಚ್‌ಸಿ ಮಹದೇವಪ್ಪ

ಮೈಸೂರು: ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಸಿ ಮಹದೇವಪ್ಪ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಟ್ವಿಟ್ಟರ್‌ ಮೂಲಕ ದೇವದೂತ ಬಂದ ನಂತರವೇ ಎಂದು ತಲೆ ಬರಹ ನೀಡಿ ಮೋದಿ ಪ್ರಧಾನಿ ಆದಾಗಿನಿಂದ ಇಲ್ಲಿಯವರೆಗೆ ಇವೆಲ್ಲಾ ಅನಾಹುತಗಳು ನಡೆದಿವೆ ಎಂದು ಬರೆದುಕೊಂಡಿದ್ದಾರೆ.

ಕೆಲ ದಿನಗಳ ಹಿಂದಷ್ಟೆ, ಪ್ರಧಾನಿ ಮೋದಿ ತಮ್ಮನ್ನು ತಾವು ದೇವದೂತ ಎಂದು ಕರೆದುಕೊಂಡಿದ್ದರು. ಇದನ್ನು ಉಲ್ಲೇಖಿಸಿ ವಾಗ್ದಾಳಿ ನಡೆಸಿರುವ ಎಚ್‌ಸಿ ಮಹದೇವಪ್ಪ, ನಿಮ್ಮ ಅವಧಿಯಲ್ಲೇ ಡಾಲರ್‌ ಎದುರು ರೂಪಾಯಿ ಕುಸಿತ ಕಂಡಿತು. ಸಿಲಿಂಡರ್‌ ಬೆಲೆ ಏರಿಕೆ ಕಂಡಿತು. ಪುಲ್ವಾಮಾ ದಾಳಿ, ಹಸಿವಿನ ಸೂಚ್ಯಂಕದಲ್ಲಿ ಭಾರತದ ಕಳಪೆ ಸಾಧನೆ, ಮಣಿಪುರ ಹಿಂಸಾಚಾರ ವಿವಿಧ ವಿಚಾರಗಳನ್ನು ಉಲ್ಲೇಖಿಸಿ, ಮೋದಿ ಕಾಲೆಳೆದಿದ್ದಾರೆ.

ಟ್ವಿಟ್ಟರ್‌ನಲ್ಲೇನಿದೆ?

ದೇವದೂತ ಬಂದ ನಂತರವೇ

1) 72 ರೂಪಾಯಿ ಇದ್ದ ಪೆಟ್ರೋಲ್ ಬೆಲೆ 100 ರೂಪಾಯಿಗೆ ಏರಿತು

2) 60 ರೂ ಇದ್ದ ಡೀಸೆಲ್ 85 ಕ್ಕೆ ಏರಿಕೆಯಾಯಿತು

3) ಡಾಲರ್ ಎದುರು ರೂಪಾಯಿಯು ಭಾರೀ ಕುಸಿತ ಕಂಡಿತು

4) ಅಡುಗೆ ಸಿಲಿಂಡರ್ ಬೆಲೆ 400 ರಿಂದ 1000 ರೂಪಾಯಿಗೆ ಏರಿಕೆ ಕಂಡಿತು

5) ಪುಲ್ವಾಮ ದಾಳಿ ನಡೆದು ಸೈನಿಕರು ಸಾವನ್ನಪ್ಪುವಂತಾಯಿತು

6) ಭಾರತ ಜಾಗತಿಕ ಹಸಿವಿನ ಸೂಚ್ಯಂಕದಲ್ಲಿ 55 ರಿಂದ 102 ನೇ ಸ್ಥಾನಕ್ಕೆ ಕುಸಿಯಿತು

7) ಜನ ಸಾಮಾನ್ಯರ ಕೊಳ್ಳುವ ಶಕ್ತಿಯೇ ಕ್ಷೀಣಿಸಿತು

8) ಕರೋನಾ ಸಂದರ್ಭದಲ್ಲಿ ಆಕ್ಸಿಜನ್ ದೊರಕದೇ ಲೆಕ್ಕವಿಲ್ಲದಷ್ಟು ಸಾವು ನೋವುಗಳಾಯಿತು

9) ಚೀನಾವು ಗಡಿ ಪ್ರದೇಶದಲ್ಲಿ ಭಾರತವನ್ನು ಆಕ್ರಮಿಸಿ ತನ್ನ ಗ್ರಾಮಗಳನ್ನು ನಿರ್ಮಿಸಿತು

10) ಬಾಬಾ ಸಾಹೇಬರು ರಚಿಸಿದ ಸಂವಿಧಾನಕ್ಕೆ ಅಪಾಯ ಒದಗಿತು

11) ಜನರಿಗೆ ನ್ಯಾಯವಾಗಿಯೇ ನೀಡಬೇಕಿದ್ದ ಬರ ಪರಿಹಾರವನ್ನು ಕೋರ್ಟ್ ಮೆಟ್ಟಿಲೇರಿ ಪಡೆಯುವಂತೆ ಆಯಿತು

12) ಮಣಿಪುರದಂತಹ ರಾಜಕೀಯ ಅರಾಜಕತೆ ಮತ್ತು ಹಿಂಸೆಯು ಕಣ್ಣ ಮುಂದೆಯೇ ಜರುಗಿತು

13) ದೇಶದ ಸಾಲವು 55 ಲಕ್ಷ ಕೋಟಿಗಳಿಂದ 185 ಲಕ್ಷ ಕೋಟಿಗೆ ಏರಿಕೆ ಆಯಿತು ಎಂದು ಸುದೀರ್ಘವಾಗಿ ಬರೆದುಕೊಂಡು ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

16 mins ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

4 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026: ಗಜಪಯಣಕ್ಕೆ ವಿದ್ಯುಕ್ತ ಚಾಲನೆ

ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…

6 hours ago

ಓದುಗರ ಪತ್ರ: ಕಾವೇರಿ ನದಿ ನೀರಿನ ವಿವಾದಕ್ಕೆ ಮಾತುಕತೆಯೇ ಮದ್ದು

ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…

7 hours ago

ಓದುಗರ ಪತ್ರ: ಈ ‘ಎರಡು’ ಸಮಸ್ಯೆಗಳಿಗೆ ಪರಿಹಾರ ಸಿಗಬೇಕು

ಮೈಸೂರು ನಗರವು ‘ಸ್ವಚ್ಛ ನಗರಿ’, ‘ಸಾಂಸ್ಕೃತಿಕ ನಗರಿ’ ಮತ್ತು ‘ಪಾರಂಪರಿಕನಗರಿ’ ಎಂದೇ ಖ್ಯಾತವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಹೆಮ್ಮೆಯ…

7 hours ago

ಓದುಗರ ಪತ್ರ: ಸ್ಥಳ ಶುದ್ಧೀಕರಣಕ್ಕಿಂತ ಮನ ಶುದ್ಧೀಕರಣವಾಗಲಿ

ಎಐಸಿಸಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರಾದ, ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಖಂಡದ ಹಲ್ದ್ವಾನಿಯದಲ್ಲಿ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ…

7 hours ago