ಮೈಸೂರು: ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಷಿಕ್ಯೂಷನ್ ಹೊರಡಿಸಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ಕೆಲಸ ಮಾಡಿದ್ದಾರೆ. ಅವರನ್ನು ರಾಜ್ಯಪಾಲ ಸ್ಥಾನದಿಂದ ವಜಾಗೊಳಿಸಬೇಕೆಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್ಸಿ ಮಹದೇವಪ್ಪ ದೂರಿದ್ದಾರೆ.
ಈ ಸಂಬಂಧ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರು ಅವರು, “ಕೇಂದ್ರ ಸಚಿವರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ ಕುಮಾರಸ್ವಾಮಿಯವರ ಗಣಿ ಹಗರಣದ ವಿರುದ್ಧ ತನಿಖೆ ನಡೆಸಬೇಕೆಂದು ಲೋಕಾಯುಕ್ತ ಸಂಸ್ಥೆ ರಾಜ್ಯಪಾಲರಿಗೆ ಅನುಮತಿ ಕೇಳಿ 10 ತಿಂಗಳಾದರೂ ಮಾನ್ಯ ರಾಜ್ಯಪಾಲರು ಆ ಬಗ್ಗೆ ಸಂಪೂರ್ಣ ಮೌನ ವಹಿಸಿದ್ದಾರೆ.
ಬಿಜೆಪಿ ಸರ್ಕಾರದಲ್ಲಿ ಸಚಿವೆ ಆಗಿದ್ದ ಶಶಿಕಲಾ ಜೊಲ್ಲೆಯವರ ವಿರುದ್ಧದ ತನಿಖೆಗೆ ಅನುಮತಿ ನೀಡಿ ಎಂದು ಕೋರಿದ್ದ ಕಡತವನ್ನೂ ರಾಜ್ಯಪಾಲರು ಮೂಲೆಗೆ ತಳ್ಳಿದ್ದಾರೆ.
ಸಾಲದು ಎಂಬಂತೆ ಮುರುಗೇಶ್ ನಿರಾಣಿಯವರ ತನಿಖೆಗೆ ಸಂಬಂಧಿಸಿದ ಕಡತವೂ ರಾಜ್ಯಪಾಲರ ಕಚೇರಿಯಲ್ಲಿ ಧೂಳು ಹಿಡಿಯುತ್ತದೆ.
ಪರಿಸ್ಥಿತಿ ಹೀಗಿರುವಾಗ ನ್ಯಾಯಾಲಯದಿಂದಲೇ ಛೀಮಾರಿ ಹಾಕಿಸಿಕೊಂಡ ವ್ಯಕ್ತಿಯೊಬ್ಬ ನೀಡಿರುವ ದೂರನ್ನು ಆಧರಿಸಿ, ರಾತ್ರೋ ರಾತ್ರಿ ನೋಟಿಸ್ ಜಾರಿ ಮಾಡಿ ಈಗ ತನಿಖೆಗೆ ನೀಡಲು ಹೊರಟಿರುವ ರಾಜ್ಯಪಾಲರು, ತಾರತಮ್ಯದಿಂದ ಮತ್ತು ಪೂರ್ವಾಗ್ರಹ ಪೀಡಿತರಾಗಿ ಬಿಜೆಪಿಯ ಏಜೆಂಟರಂತೆ ವರ್ತಿಸುತ್ತಿದ್ದು ಇವರಿಗೆ ಒಂದು ಕ್ಷಣವೂ ರಾಜ್ಯಪಾಲರಾಗಿ ಮುಂದುವರೆಯುವ ನೈತಿಕತೆ ಇಲ್ಲ.
ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ, ರಾಜಕೀಯ ಪಕ್ಷಗಳ ಹಿತಕ್ಕೆ ಪೂರಕವಾಗಿ ಕೆಲಸ ಮಾಡುತ್ತಿರುವ ಅವರನ್ನು ಮಾನ್ಯ ರಾಷ್ಟ್ರಪತಿಗಳು ಕೂಡಲೇ ವಜಾ ಮಾಡಬೇಕು ಎಂದು ಬರೆದುಕೊಂಡಿದ್ದಾರೆ.
ಮೈಸೂರು: ಬದಲಿ ನಿವೇಶನ ಹಂಚಿಕೆ, ೫೦:೫೦ ಅನುಪಾತದಲ್ಲಿ ನಿವೇಶನ ಅಕ್ರಮ ಹಂಚಿಕೆ ಹಗರಣದಿಂದಾಗಿ ಇಡೀ ರಾಜ್ಯದ ಗಮನ ಸೆಳೆದಿರುವ ಮೈಸೂರು…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜುಂಬೂ ಸವಾರಿ ಸಾಗುವ ಮಾರ್ಗದಲ್ಲಿ ಕಳೆದ ಎರಡೂ ವರ್ಷಗಳಿಂದ ಬಿದ್ದಿದ್ದ ಬೃಹತ್ ಮರದ ಕಾಂಡವನ್ನು…
ಮೈಸೂರು: ಈ ಬಾರಿಯ ದಸರಾ ಮಹೋತ್ಸವದ ಜಂಬೂ ಸವಾರಿಯನ್ನು ವೀಕ್ಷಿಸಲು ಆಗಮಿಸಿದ ಎಲ್ಲರಿಗೂ ಚಿನ್ನದ ಅಂಬಾರಿ ನೋಡುವ ಅವಕಾಶ ಸಿಗಬೇಕು…
ಮೈಸೂರು: ಸಾಂಸ್ಕೃತಿಕ ರಾಜಧಾನಿ, ಅರಮನೆಗಳ ನಗರಿ ಎಂದು ಕರೆಯುವ ಮೈಸೂರನ್ನು ಗರಡಿ ಮನೆಗಳ ನಗರಿ ಎಂದೂ ಇತ್ತೀಚಿನ ವರ್ಷಗಳಲ್ಲಿ ಕರೆಯುವುದು…
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…