ರಾಜ್ಯ

ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ರಾಜ್ಯಪಾಲರು ಕೆಲಸ ಮಾಡಿದ್ದಾರೆ: ಎಚ್‌ಸಿಎಂ

ಮೈಸೂರು: ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಷಿಕ್ಯೂಷನ್‌ ಹೊರಡಿಸಿರುವ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ಕೆಲಸ ಮಾಡಿದ್ದಾರೆ. ಅವರನ್ನು ರಾಜ್ಯಪಾಲ ಸ್ಥಾನದಿಂದ ವಜಾಗೊಳಿಸಬೇಕೆಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್‌ಸಿ ಮಹದೇವಪ್ಪ ದೂರಿದ್ದಾರೆ.

ಈ ಸಂಬಂಧ ಎಕ್ಸ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರು ಅವರು, “ಕೇಂದ್ರ ಸಚಿವರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ ಕುಮಾರಸ್ವಾಮಿಯವರ ಗಣಿ ಹಗರಣದ ವಿರುದ್ಧ ತನಿಖೆ ನಡೆಸಬೇಕೆಂದು ಲೋಕಾಯುಕ್ತ ಸಂಸ್ಥೆ ರಾಜ್ಯಪಾಲರಿಗೆ ಅನುಮತಿ ಕೇಳಿ 10 ತಿಂಗಳಾದರೂ ಮಾನ್ಯ ರಾಜ್ಯಪಾಲರು ಆ ಬಗ್ಗೆ ಸಂಪೂರ್ಣ ಮೌನ ವಹಿಸಿದ್ದಾರೆ.

ಬಿಜೆಪಿ ಸರ್ಕಾರದಲ್ಲಿ ಸಚಿವೆ ಆಗಿದ್ದ ಶಶಿಕಲಾ ಜೊಲ್ಲೆಯವರ ವಿರುದ್ಧದ ತನಿಖೆಗೆ ಅನುಮತಿ ನೀಡಿ ಎಂದು ಕೋರಿದ್ದ ಕಡತವನ್ನೂ ರಾಜ್ಯಪಾಲರು ಮೂಲೆಗೆ ತಳ್ಳಿದ್ದಾರೆ.

ಸಾಲದು ಎಂಬಂತೆ ಮುರುಗೇಶ್ ನಿರಾಣಿಯವರ ತನಿಖೆಗೆ ಸಂಬಂಧಿಸಿದ ಕಡತವೂ ರಾಜ್ಯಪಾಲರ ಕಚೇರಿಯಲ್ಲಿ ಧೂಳು ಹಿಡಿಯುತ್ತದೆ.

ಪರಿಸ್ಥಿತಿ ಹೀಗಿರುವಾಗ ನ್ಯಾಯಾಲಯದಿಂದಲೇ ಛೀಮಾರಿ ಹಾಕಿಸಿಕೊಂಡ ವ್ಯಕ್ತಿಯೊಬ್ಬ ನೀಡಿರುವ ದೂರನ್ನು ಆಧರಿಸಿ, ರಾತ್ರೋ ರಾತ್ರಿ ನೋಟಿಸ್ ಜಾರಿ ಮಾಡಿ ಈಗ ತನಿಖೆಗೆ ನೀಡಲು ಹೊರಟಿರುವ ರಾಜ್ಯಪಾಲರು, ತಾರತಮ್ಯದಿಂದ ಮತ್ತು ಪೂರ್ವಾಗ್ರಹ ಪೀಡಿತರಾಗಿ ಬಿಜೆಪಿಯ ಏಜೆಂಟರಂತೆ ವರ್ತಿಸುತ್ತಿದ್ದು ಇವರಿಗೆ ಒಂದು ಕ್ಷಣವೂ ರಾಜ್ಯಪಾಲರಾಗಿ ಮುಂದುವರೆಯುವ ನೈತಿಕತೆ ಇಲ್ಲ.

ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ, ರಾಜಕೀಯ ಪಕ್ಷಗಳ ಹಿತಕ್ಕೆ ಪೂರಕವಾಗಿ ಕೆಲಸ ಮಾಡುತ್ತಿರುವ ಅವರನ್ನು ಮಾನ್ಯ ರಾಷ್ಟ್ರಪತಿಗಳು ಕೂಡಲೇ ವಜಾ ಮಾಡಬೇಕು ಎಂದು ಬರೆದುಕೊಂಡಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

10 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

10 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

10 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

10 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

11 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

11 hours ago