ರಾಜ್ಯ

ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ರಾಜ್ಯಪಾಲರು ಕೆಲಸ ಮಾಡಿದ್ದಾರೆ: ಎಚ್‌ಸಿಎಂ

ಮೈಸೂರು: ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಷಿಕ್ಯೂಷನ್‌ ಹೊರಡಿಸಿರುವ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ಕೆಲಸ ಮಾಡಿದ್ದಾರೆ. ಅವರನ್ನು ರಾಜ್ಯಪಾಲ ಸ್ಥಾನದಿಂದ ವಜಾಗೊಳಿಸಬೇಕೆಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್‌ಸಿ ಮಹದೇವಪ್ಪ ದೂರಿದ್ದಾರೆ.

ಈ ಸಂಬಂಧ ಎಕ್ಸ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರು ಅವರು, “ಕೇಂದ್ರ ಸಚಿವರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ ಕುಮಾರಸ್ವಾಮಿಯವರ ಗಣಿ ಹಗರಣದ ವಿರುದ್ಧ ತನಿಖೆ ನಡೆಸಬೇಕೆಂದು ಲೋಕಾಯುಕ್ತ ಸಂಸ್ಥೆ ರಾಜ್ಯಪಾಲರಿಗೆ ಅನುಮತಿ ಕೇಳಿ 10 ತಿಂಗಳಾದರೂ ಮಾನ್ಯ ರಾಜ್ಯಪಾಲರು ಆ ಬಗ್ಗೆ ಸಂಪೂರ್ಣ ಮೌನ ವಹಿಸಿದ್ದಾರೆ.

ಬಿಜೆಪಿ ಸರ್ಕಾರದಲ್ಲಿ ಸಚಿವೆ ಆಗಿದ್ದ ಶಶಿಕಲಾ ಜೊಲ್ಲೆಯವರ ವಿರುದ್ಧದ ತನಿಖೆಗೆ ಅನುಮತಿ ನೀಡಿ ಎಂದು ಕೋರಿದ್ದ ಕಡತವನ್ನೂ ರಾಜ್ಯಪಾಲರು ಮೂಲೆಗೆ ತಳ್ಳಿದ್ದಾರೆ.

ಸಾಲದು ಎಂಬಂತೆ ಮುರುಗೇಶ್ ನಿರಾಣಿಯವರ ತನಿಖೆಗೆ ಸಂಬಂಧಿಸಿದ ಕಡತವೂ ರಾಜ್ಯಪಾಲರ ಕಚೇರಿಯಲ್ಲಿ ಧೂಳು ಹಿಡಿಯುತ್ತದೆ.

ಪರಿಸ್ಥಿತಿ ಹೀಗಿರುವಾಗ ನ್ಯಾಯಾಲಯದಿಂದಲೇ ಛೀಮಾರಿ ಹಾಕಿಸಿಕೊಂಡ ವ್ಯಕ್ತಿಯೊಬ್ಬ ನೀಡಿರುವ ದೂರನ್ನು ಆಧರಿಸಿ, ರಾತ್ರೋ ರಾತ್ರಿ ನೋಟಿಸ್ ಜಾರಿ ಮಾಡಿ ಈಗ ತನಿಖೆಗೆ ನೀಡಲು ಹೊರಟಿರುವ ರಾಜ್ಯಪಾಲರು, ತಾರತಮ್ಯದಿಂದ ಮತ್ತು ಪೂರ್ವಾಗ್ರಹ ಪೀಡಿತರಾಗಿ ಬಿಜೆಪಿಯ ಏಜೆಂಟರಂತೆ ವರ್ತಿಸುತ್ತಿದ್ದು ಇವರಿಗೆ ಒಂದು ಕ್ಷಣವೂ ರಾಜ್ಯಪಾಲರಾಗಿ ಮುಂದುವರೆಯುವ ನೈತಿಕತೆ ಇಲ್ಲ.

ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ, ರಾಜಕೀಯ ಪಕ್ಷಗಳ ಹಿತಕ್ಕೆ ಪೂರಕವಾಗಿ ಕೆಲಸ ಮಾಡುತ್ತಿರುವ ಅವರನ್ನು ಮಾನ್ಯ ರಾಷ್ಟ್ರಪತಿಗಳು ಕೂಡಲೇ ವಜಾ ಮಾಡಬೇಕು ಎಂದು ಬರೆದುಕೊಂಡಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಗ್ಯಾರಂಟಿ ಪರಿಷ್ಕರಣೆ; ಅರ್ಹರಿಗೆ ಅನ್ಯಾಯ ಆಗಬಾರದು

೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…

3 hours ago

ರಾಜ್ಯ ರಾಜಕಾರಣದ ಬೆಳವಣಿಗೆಯ ಲಾಭ ಪಡೆಯಲು ಬಿಜೆಪಿ-ಜಾ.ದಳ ಮಿತ್ರಕೂಟ ಯತ್ನ

ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ  ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್‌ನ…

3 hours ago

ಕೊಡಗಿನ ಮಲ್ಲಳ್ಳಿ ಫಾಲ್ಸ್‌ನಲ್ಲಿ ಅಭದ್ರತೆ

ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…

3 hours ago

ಮುಚ್ಚುವ ಆತಂಕದಲ್ಲಿ ಶತಮಾನ ಕಂಡ ಶಾಲೆ

ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…

3 hours ago

ಸರ್ಕಾರಿ ಕಚೇರಿ; ಮೂಲ ಸೌಕರ್ಯಗಳಿಗೆ ಗೋರಿ!

ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…

3 hours ago