ಮೈಸೂರು: ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಷಿಕ್ಯೂಷನ್ ಹೊರಡಿಸಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ಕೆಲಸ ಮಾಡಿದ್ದಾರೆ. ಅವರನ್ನು ರಾಜ್ಯಪಾಲ ಸ್ಥಾನದಿಂದ ವಜಾಗೊಳಿಸಬೇಕೆಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್ಸಿ ಮಹದೇವಪ್ಪ ದೂರಿದ್ದಾರೆ.
ಈ ಸಂಬಂಧ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರು ಅವರು, “ಕೇಂದ್ರ ಸಚಿವರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ ಕುಮಾರಸ್ವಾಮಿಯವರ ಗಣಿ ಹಗರಣದ ವಿರುದ್ಧ ತನಿಖೆ ನಡೆಸಬೇಕೆಂದು ಲೋಕಾಯುಕ್ತ ಸಂಸ್ಥೆ ರಾಜ್ಯಪಾಲರಿಗೆ ಅನುಮತಿ ಕೇಳಿ 10 ತಿಂಗಳಾದರೂ ಮಾನ್ಯ ರಾಜ್ಯಪಾಲರು ಆ ಬಗ್ಗೆ ಸಂಪೂರ್ಣ ಮೌನ ವಹಿಸಿದ್ದಾರೆ.
ಬಿಜೆಪಿ ಸರ್ಕಾರದಲ್ಲಿ ಸಚಿವೆ ಆಗಿದ್ದ ಶಶಿಕಲಾ ಜೊಲ್ಲೆಯವರ ವಿರುದ್ಧದ ತನಿಖೆಗೆ ಅನುಮತಿ ನೀಡಿ ಎಂದು ಕೋರಿದ್ದ ಕಡತವನ್ನೂ ರಾಜ್ಯಪಾಲರು ಮೂಲೆಗೆ ತಳ್ಳಿದ್ದಾರೆ.
ಸಾಲದು ಎಂಬಂತೆ ಮುರುಗೇಶ್ ನಿರಾಣಿಯವರ ತನಿಖೆಗೆ ಸಂಬಂಧಿಸಿದ ಕಡತವೂ ರಾಜ್ಯಪಾಲರ ಕಚೇರಿಯಲ್ಲಿ ಧೂಳು ಹಿಡಿಯುತ್ತದೆ.
ಪರಿಸ್ಥಿತಿ ಹೀಗಿರುವಾಗ ನ್ಯಾಯಾಲಯದಿಂದಲೇ ಛೀಮಾರಿ ಹಾಕಿಸಿಕೊಂಡ ವ್ಯಕ್ತಿಯೊಬ್ಬ ನೀಡಿರುವ ದೂರನ್ನು ಆಧರಿಸಿ, ರಾತ್ರೋ ರಾತ್ರಿ ನೋಟಿಸ್ ಜಾರಿ ಮಾಡಿ ಈಗ ತನಿಖೆಗೆ ನೀಡಲು ಹೊರಟಿರುವ ರಾಜ್ಯಪಾಲರು, ತಾರತಮ್ಯದಿಂದ ಮತ್ತು ಪೂರ್ವಾಗ್ರಹ ಪೀಡಿತರಾಗಿ ಬಿಜೆಪಿಯ ಏಜೆಂಟರಂತೆ ವರ್ತಿಸುತ್ತಿದ್ದು ಇವರಿಗೆ ಒಂದು ಕ್ಷಣವೂ ರಾಜ್ಯಪಾಲರಾಗಿ ಮುಂದುವರೆಯುವ ನೈತಿಕತೆ ಇಲ್ಲ.
ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ, ರಾಜಕೀಯ ಪಕ್ಷಗಳ ಹಿತಕ್ಕೆ ಪೂರಕವಾಗಿ ಕೆಲಸ ಮಾಡುತ್ತಿರುವ ಅವರನ್ನು ಮಾನ್ಯ ರಾಷ್ಟ್ರಪತಿಗಳು ಕೂಡಲೇ ವಜಾ ಮಾಡಬೇಕು ಎಂದು ಬರೆದುಕೊಂಡಿದ್ದಾರೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…