ಬೆಂಗಳೂರು: ಮುಖ್ಯಮಂತ್ರಿ ಬದಲಾವಣೆ ಯಾವುದೇ ಪ್ರಸ್ತಾಪ ಸರ್ಕಾರ ಅಥವಾ ಪಕ್ಷದ ಮುಂದಿಲ್ಲ ಎಂದು ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ತಿಳಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯ ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ಗೆ ಕಾಂಗ್ರೆಸ್ ಹೈಕಮಾಂಡ್ ಯಾವಾಗ ವಿಷಯ ತಿಳಿಸಿದೆಯೋ ಗೊತ್ತಿಲ್ಲ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾರೆ. ಮುಖ್ಯಮಂತ್ರಿಯಾಗಿಯೇ ಮುಂದುವರೆಯುತ್ತಾರೆ ಎಂದು ಸ್ಪಷ್ಟಪಡಿಸಿದರು.
ಸರ್ಕಾರದ ನಡುವೆ ಹೊಂದಾಣಿಕೆ ಇದೆ. ಅಭಿವೃದ್ಧಿ ಕಾರ್ಯಗಳಿಗೆ ಹಣಕಾಸಿನ ಸಮಸ್ಯೆ ಇಲ್ಲ ಎಂಬುದಕ್ಕೆ ನಿನ್ನೆ ಯಾದಗಿರಿಯಲ್ಲಿ ನಡೆದ ಕಾರ್ಯಕ್ರಮವೇ ಸಾಕ್ಷಿ. ಲಕ್ಷಾಂತರ ಜನ ಅಭಿವೃದ್ಧಿ ಕಾರ್ಯಗಳಿಗೆ ಸಾಕ್ಷಿಯಾಗಿದ್ದರು. ವಿರೋಧ ಪಕ್ಷಗಳು ರಾಜಕೀಯಕ್ಕಾಗಿ ಸುಳ್ಳು ಹೇಳುತ್ತಿವೆ ಎಂದು ಆರೋಪಿಸಿದರು.
ಭ್ರಷ್ಟಾಚಾರ ನಡೆಯುತ್ತಿದ್ದರೆ ದಾಖಲಾತಿಗಳನ್ನು ತನಿಖಾ ಸಂಸ್ಥೆಗೆ ಕೊಡಲಿ. ಎಚ್.ವಿಶ್ವನಾಥ್ ಹಿರಿಯ ರಾಜಕಾರಣಿ. ಅವರು ಮಾತನಾಡುವಾಗ ಅದರಲ್ಲಿ ಸತ್ಯಾಂಶ ಇರಬೇಕು. ಆಧಾರಗಳಿರಬೇಕು ಎಂದು ಹೇಳಿದರು.
ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…
ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…
ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…
ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…