ರಾಜ್ಯ

ಸಿಎಂ ಪರಿವಾರ ರಕ್ಷಿಸಲು RTI ಕಾರ್ಯಕರ್ತರ ವಿರುದ್ಧ ದೂರು: ಎಚ್‌ಡಿಕೆ ಆರೋಪ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬ ಮೈಸೂರಿನ ಮೂಡದಲ್ಲಿ ನಡೆಸಿರುವ ಬದಲಿ ನಿವೇಶನ ಹಗರಣವನ್ನು ಬಯಲಿಗೆಳೆದ ಆರ್‌ಟಿಐ ಕಾರ್ಯಕರ್ತರಿಗೆ ರಾಜ್ಯ ಸರ್ಕಾರ ಕಿರುಕುಳ ನೀಡುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಹಗರಣಗಳನ್ನು ಪ್ರಶ್ನಿಸಿದ ಪ್ರತಿಪಕ್ಷಗಳನ್ನು ವಿಧಾನಮಂಡಲದಲ್ಲಿ ಹತ್ತಿಕ್ಕಲಾಯಿತು! ಸತ್ಯಶೋಧನೆಯಲ್ಲಿ ನಿರತರಾದ ಆರ್‌ಟಿಐ ಕಾರ್ಯಕರ್ತರನ್ನು ಅಧಿಕಾರ ದುರ್ಬಳಕೆ ಮಾಡಿಕೊಂಡು ದಮನ ಮಾಡಲಾಗುತ್ತಿದೆ ಎಂದು ಹರಿಹಾಯ್ದಿದ್ದಾರೆ.

ಮುಖ್ಯಮಂತ್ರಿಗಳ ಕುಟುಂಬ ಮೈಸೂರಿನ ಮೂಡಾದಲ್ಲಿ ನಡೆಸಿರುವ ಬದಲಿ ನಿವೇಶನ ಹಗರಣವನ್ನು ಬಯಲಿಗೆಳೆದ ಅರ್‌ಟಿಐ ಕಾರ್ಯಕರ್ತರನ್ನು ಕಾಂಗ್ರೆಸ್ ಗುರಿ ಮಾಡಿಕೊಂಡಿದೆ. ಆರೋಪಿತ ಸ್ಥಾನದಲ್ಲಿರುವ ಸಿಎಂ ಪರಿವಾರವನ್ನು ರಕ್ಷಿಸುವ ಏಕೈಕ ದುರುದ್ದೇಶದಿಂದ ಕಾಂಗ್ರೆಸ್ಸಿಗರು ಆರ್‌ಟಿಐ ಕಾರ್ಯಕರ್ತರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ಕುಂಬಳಕಾಯಿ ಕಳ್ಳ ಹೆಗಲು ಮುಟ್ಟಿ ನೋಡಿಕೊಂಡ ಎಂಬಂತಿದೆ ಈ ನಾಟಕ ಎಂದು ಎಚ್‌ಡಿಕೆ ಟೀಕಾ ಪ್ರಹಾರ ನಡೆಸಿದ್ದಾರೆ.

ಪೊಲೀಸ್ ಬಲ ಬಳಸಿ ಸತ್ಯದ ಕತ್ತು ಹಿಚುಕಲು ಸಾಧ್ಯವೇ ಇಲ್ಲ. ಹಾದಿಬೀದಿಯಲ್ಲಿ ಜನರ ಕೈಗೆ ಸಿಕ್ಕಿರುವ ದಾಖಲೆಗಳೇ ಮೂಡಾ ಹಗರಣದ ‘ಅಸಲಿ ಕೈ’ ಯಾವುದು ಎನ್ನುವುದನ್ನು ಸ್ಪಷ್ಟವಾಗಿ ಹೇಳುತ್ತಿವೆ. ಹಾಗಿದ್ದ ಮೇಲೆ ಸತ್ಯವನ್ನು ಹೆಕ್ಕಿ ತೆಗೆದ ಆರ್‌ಟಿಐ ಕಾರ್ಯಕರ್ತರ ಮೇಲೆ ರಾಜ್ಯ ಕಾಂಗ್ರೆಸ್ ಪಕ್ಷ ಸೇಡಿನ ರಾಜಕಾರಣ ಮಾಡುತ್ತಿದೆ ಎಂದು ದೂರಿದ್ದಾರೆ.

ದೂರು ನೀಡಿರುವ ಪ್ರಸಂಗ ಹೇಗಿದೆ ಎಂದರೆ, ಬದಲಿ ನಿವೇಶನ ಫಲಾನುಭವಿಗಳು ಪರೋಕ್ಷವಾಗಿ ಸತ್ಯ ಒಪ್ಪಿಕೊಂಡಂತೆ ಆಗಿದೆ. ಅಷ್ಟೇ ಅಲ್ಲ ಆರ್‌ಟಿಐ ಕಾರ್ಯಕರ್ತರ ಟಾರ್ಗೆಟ್ ಮಾಡಿದಷ್ಟು ಮೂಡಾದ ಮೂಲೆಮೂಲೆಗಳಲ್ಲಿ ಮುಗ್ಗುತ್ತಿರುವ ಸತ್ಯಗಳು ಮತ್ತಷ್ಟು ವ್ಯಘ್ರವಾಗಿ ಹೂಂಕರಿಸುತ್ತವೆ. ಇಂಥ ವ್ಯರ್ಥ ಕೆಲಸ ಬಿಟ್ಟು ಮರ್ಯಾದೆಯಿಂದ ಸತ್ಯವನ್ನು ಎದುರಿಸುವುದು ಸಿಎಂ ಆದವರಿಗೆ ಶೋಭೆ ತರುತ್ತದೆ ಎಂದು ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಯುದ್ಧದ ನಡುವೆಯೇ ಭಾರತಕ್ಕೆ ಗುಡ್‌ನ್ಯೂಸ್: 45,000 ಮೆಟ್ರಿಕ್‌ ಟನ್‌ ಎಲ್‌ಪಿಜಿ ಹೊತ್ತು ತಂದ ಹಡಗು

ಅಹಮದಾಬಾದ್:‌ 45,000 ಮೆಟ್ರಿಕ್‌ ಟನ್‌ ಎಲ್‌ಪಿಜಿ ಹೊತ್ತ ಶಿವಾಲಿಕ್‌ ಹಡಗು ಗುಜರಾತ್‌ನ ಮುಂದ್ರಾ ಬಂದರಿಗೆ ಬಂದು ತಲುಪಲಿದೆ. ಈ ಬಗ್ಗೆ…

10 mins ago

110 ಅಡಿಗೆ ಇಳಿದ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ: ಕುಡಿಯುವ ನೀರಿಗಿಲ್ಲ ತೊಂದರೆ

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿರುವ ರೈತರ ಜೀವನಾಡಿ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ 110.44 ಅಡಿಗೆ ಇಳಿದಿದೆ. ಈ ಬಗ್ಗೆ…

43 mins ago

ರಾಜ್ಯಾದ್ಯಂತ ಮಾರ್ಚ್.‌18ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ

ಬೆಂಗಳೂರು: ಮಾರ್ಚ್.‌18ರಿಂದ ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಪ್ರಾರಂಭವಾಗಲಿವೆ. ಪರೀಕ್ಷಾ ಅಕ್ರಮಗಳನ್ನು ತಡೆಯಲು ಮತ್ತು ಪಾರದರ್ಶಕತೆ ಕಾಪಾಡಲು ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಬಿಡುಗಡೆ…

1 hour ago

ನಾನಿನ್ನೂ ಬದುಕಿದ್ದೇನೆ: ಕ್ಯಾಮರಾ ಮುಂದೆ ಪ್ರತ್ಯಕ್ಷರಾದ ಇಸ್ರೇಲ್‌ ಪ್ರಧಾನಿ

ಜೆರುಸೇಲಂ: ನಾನಿನ್ನೂ ಬದುಕಿದ್ದೇನೆ ಎಂದು ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಹೇಳಿದ್ದಾರೆ. ಸಾವಿನ ವದಂತಿಗಳ ನಡುವೆ ವಿಡಿಯೋದಲ್ಲಿ ಕಾಣಿಸಿಕೊಂಡು ಸಂದೇಶ…

2 hours ago

ಎಲ್‌ಪಿಜಿ ಕೊರತೆ; ಜನರ ಆತಂಕ ದೂರ ಮಾಡಬೇಕಿದೆ

ಅಮೆರಿಕ-ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧಕ್ಕಿಂತಲ್ಲೂ ಹೆಚ್ಚು ಸದ್ದು ಮಾಡುತ್ತಿರುವುದು ಭಾರತದಲ್ಲಿನ ಎಲ್‌ಪಿಜಿ ಪೂರೈಕೆ ವಿಚಾರ. ಯುದ್ಧೋನ್ಮಾದ ವೈರತ್ವ ಹೊಂದಿರುವ…

5 hours ago

ಭಾರತ-ಗಲ್ಛ್ ರಾಷ್ಟ್ರಗಳ ಸಂಬಂಧಕ್ಕೆ ಧಕ್ಕೆ ಇಲ್ಲ!

ಶುಭಾ ಖಟಾವಕರ ಮ್ಹೆತ್ರಸ್ ಬಲಾಢ್ಯ ರಾಷ್ಟ್ರಗಳಾದ ಅಮೆರಿಕ -ಇಸ್ರೇಲ್, ಇರಾನ್ ಮೇಲೆ ದಾಳಿ ಶುರು ಮಾಡಿ ೧೩-೧೪ ದಿನಗಳೇ ಕಳೆದು…

5 hours ago