ರಾಜ್ಯ

ಸಿಎಂ ಪರಿವಾರ ರಕ್ಷಿಸಲು RTI ಕಾರ್ಯಕರ್ತರ ವಿರುದ್ಧ ದೂರು: ಎಚ್‌ಡಿಕೆ ಆರೋಪ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬ ಮೈಸೂರಿನ ಮೂಡದಲ್ಲಿ ನಡೆಸಿರುವ ಬದಲಿ ನಿವೇಶನ ಹಗರಣವನ್ನು ಬಯಲಿಗೆಳೆದ ಆರ್‌ಟಿಐ ಕಾರ್ಯಕರ್ತರಿಗೆ ರಾಜ್ಯ ಸರ್ಕಾರ ಕಿರುಕುಳ ನೀಡುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಹಗರಣಗಳನ್ನು ಪ್ರಶ್ನಿಸಿದ ಪ್ರತಿಪಕ್ಷಗಳನ್ನು ವಿಧಾನಮಂಡಲದಲ್ಲಿ ಹತ್ತಿಕ್ಕಲಾಯಿತು! ಸತ್ಯಶೋಧನೆಯಲ್ಲಿ ನಿರತರಾದ ಆರ್‌ಟಿಐ ಕಾರ್ಯಕರ್ತರನ್ನು ಅಧಿಕಾರ ದುರ್ಬಳಕೆ ಮಾಡಿಕೊಂಡು ದಮನ ಮಾಡಲಾಗುತ್ತಿದೆ ಎಂದು ಹರಿಹಾಯ್ದಿದ್ದಾರೆ.

ಮುಖ್ಯಮಂತ್ರಿಗಳ ಕುಟುಂಬ ಮೈಸೂರಿನ ಮೂಡಾದಲ್ಲಿ ನಡೆಸಿರುವ ಬದಲಿ ನಿವೇಶನ ಹಗರಣವನ್ನು ಬಯಲಿಗೆಳೆದ ಅರ್‌ಟಿಐ ಕಾರ್ಯಕರ್ತರನ್ನು ಕಾಂಗ್ರೆಸ್ ಗುರಿ ಮಾಡಿಕೊಂಡಿದೆ. ಆರೋಪಿತ ಸ್ಥಾನದಲ್ಲಿರುವ ಸಿಎಂ ಪರಿವಾರವನ್ನು ರಕ್ಷಿಸುವ ಏಕೈಕ ದುರುದ್ದೇಶದಿಂದ ಕಾಂಗ್ರೆಸ್ಸಿಗರು ಆರ್‌ಟಿಐ ಕಾರ್ಯಕರ್ತರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ಕುಂಬಳಕಾಯಿ ಕಳ್ಳ ಹೆಗಲು ಮುಟ್ಟಿ ನೋಡಿಕೊಂಡ ಎಂಬಂತಿದೆ ಈ ನಾಟಕ ಎಂದು ಎಚ್‌ಡಿಕೆ ಟೀಕಾ ಪ್ರಹಾರ ನಡೆಸಿದ್ದಾರೆ.

ಪೊಲೀಸ್ ಬಲ ಬಳಸಿ ಸತ್ಯದ ಕತ್ತು ಹಿಚುಕಲು ಸಾಧ್ಯವೇ ಇಲ್ಲ. ಹಾದಿಬೀದಿಯಲ್ಲಿ ಜನರ ಕೈಗೆ ಸಿಕ್ಕಿರುವ ದಾಖಲೆಗಳೇ ಮೂಡಾ ಹಗರಣದ ‘ಅಸಲಿ ಕೈ’ ಯಾವುದು ಎನ್ನುವುದನ್ನು ಸ್ಪಷ್ಟವಾಗಿ ಹೇಳುತ್ತಿವೆ. ಹಾಗಿದ್ದ ಮೇಲೆ ಸತ್ಯವನ್ನು ಹೆಕ್ಕಿ ತೆಗೆದ ಆರ್‌ಟಿಐ ಕಾರ್ಯಕರ್ತರ ಮೇಲೆ ರಾಜ್ಯ ಕಾಂಗ್ರೆಸ್ ಪಕ್ಷ ಸೇಡಿನ ರಾಜಕಾರಣ ಮಾಡುತ್ತಿದೆ ಎಂದು ದೂರಿದ್ದಾರೆ.

ದೂರು ನೀಡಿರುವ ಪ್ರಸಂಗ ಹೇಗಿದೆ ಎಂದರೆ, ಬದಲಿ ನಿವೇಶನ ಫಲಾನುಭವಿಗಳು ಪರೋಕ್ಷವಾಗಿ ಸತ್ಯ ಒಪ್ಪಿಕೊಂಡಂತೆ ಆಗಿದೆ. ಅಷ್ಟೇ ಅಲ್ಲ ಆರ್‌ಟಿಐ ಕಾರ್ಯಕರ್ತರ ಟಾರ್ಗೆಟ್ ಮಾಡಿದಷ್ಟು ಮೂಡಾದ ಮೂಲೆಮೂಲೆಗಳಲ್ಲಿ ಮುಗ್ಗುತ್ತಿರುವ ಸತ್ಯಗಳು ಮತ್ತಷ್ಟು ವ್ಯಘ್ರವಾಗಿ ಹೂಂಕರಿಸುತ್ತವೆ. ಇಂಥ ವ್ಯರ್ಥ ಕೆಲಸ ಬಿಟ್ಟು ಮರ್ಯಾದೆಯಿಂದ ಸತ್ಯವನ್ನು ಎದುರಿಸುವುದು ಸಿಎಂ ಆದವರಿಗೆ ಶೋಭೆ ತರುತ್ತದೆ ಎಂದು ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಇಚ್ಛಾಶಕ್ತಿ ಇದ್ದರೆ , ಕನ್ನಡ ಚಿತ್ರೋದ್ಯಮದ ಕಾಯಕಲ್ಪಕ್ಕಿದು ಸಕಾಲ

ಚಿತ್ರೋದ್ಯಮಿಗಳೂ ಆಗಿರುವ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರನ್ನು ಮೊನ್ನೆ ಚಲನಚಿತ್ರ ವಾಣಿಜ್ಯ ಮಂಡಳಿಯ ಪದಾಧಿಕಾರಿಗಳು ಮತ್ತು ಮಾಜಿ ಅಧ್ಯಕ್ಷರ…

2 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 3 , ಶುಕ್ರವಾರ

5 hours ago

ನಂಜನಗೂಡು | ಲೋಕಾ ಬಲೆಗೆ ಬಿದ್ದ ಸರ್ವೆಯರ್‌

ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ…

18 hours ago

ಅನೈತಿಕ ಸಂಬಂಧದ ಶಂಕೆ : ರಾಡ್‌ನಿಂದ ಹೊಡೆದು ಪತ್ನಿ ಕೊಂದ ಪತಿ

ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…

19 hours ago

ರಾಮನಗರ: ಕಲ್ಲು ಕ್ವಾರಿಯಲ್ಲಿ ದುರಂತ: ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವು

ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…

1 day ago

ಕೊಡಗಿನಲ್ಲಿ ಸಾಧಾರಣ ಮಳೆ: ಹಾರಂಗಿ ಜಲಾಶಯದ ಒಳಹರಿವು ಹೆಚ್ಚಳ

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…

1 day ago