ರಾಜ್ಯ

ಸಿಎಂ ಪರಿವಾರ ರಕ್ಷಿಸಲು RTI ಕಾರ್ಯಕರ್ತರ ವಿರುದ್ಧ ದೂರು: ಎಚ್‌ಡಿಕೆ ಆರೋಪ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬ ಮೈಸೂರಿನ ಮೂಡದಲ್ಲಿ ನಡೆಸಿರುವ ಬದಲಿ ನಿವೇಶನ ಹಗರಣವನ್ನು ಬಯಲಿಗೆಳೆದ ಆರ್‌ಟಿಐ ಕಾರ್ಯಕರ್ತರಿಗೆ ರಾಜ್ಯ ಸರ್ಕಾರ ಕಿರುಕುಳ ನೀಡುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಹಗರಣಗಳನ್ನು ಪ್ರಶ್ನಿಸಿದ ಪ್ರತಿಪಕ್ಷಗಳನ್ನು ವಿಧಾನಮಂಡಲದಲ್ಲಿ ಹತ್ತಿಕ್ಕಲಾಯಿತು! ಸತ್ಯಶೋಧನೆಯಲ್ಲಿ ನಿರತರಾದ ಆರ್‌ಟಿಐ ಕಾರ್ಯಕರ್ತರನ್ನು ಅಧಿಕಾರ ದುರ್ಬಳಕೆ ಮಾಡಿಕೊಂಡು ದಮನ ಮಾಡಲಾಗುತ್ತಿದೆ ಎಂದು ಹರಿಹಾಯ್ದಿದ್ದಾರೆ.

ಮುಖ್ಯಮಂತ್ರಿಗಳ ಕುಟುಂಬ ಮೈಸೂರಿನ ಮೂಡಾದಲ್ಲಿ ನಡೆಸಿರುವ ಬದಲಿ ನಿವೇಶನ ಹಗರಣವನ್ನು ಬಯಲಿಗೆಳೆದ ಅರ್‌ಟಿಐ ಕಾರ್ಯಕರ್ತರನ್ನು ಕಾಂಗ್ರೆಸ್ ಗುರಿ ಮಾಡಿಕೊಂಡಿದೆ. ಆರೋಪಿತ ಸ್ಥಾನದಲ್ಲಿರುವ ಸಿಎಂ ಪರಿವಾರವನ್ನು ರಕ್ಷಿಸುವ ಏಕೈಕ ದುರುದ್ದೇಶದಿಂದ ಕಾಂಗ್ರೆಸ್ಸಿಗರು ಆರ್‌ಟಿಐ ಕಾರ್ಯಕರ್ತರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ಕುಂಬಳಕಾಯಿ ಕಳ್ಳ ಹೆಗಲು ಮುಟ್ಟಿ ನೋಡಿಕೊಂಡ ಎಂಬಂತಿದೆ ಈ ನಾಟಕ ಎಂದು ಎಚ್‌ಡಿಕೆ ಟೀಕಾ ಪ್ರಹಾರ ನಡೆಸಿದ್ದಾರೆ.

ಪೊಲೀಸ್ ಬಲ ಬಳಸಿ ಸತ್ಯದ ಕತ್ತು ಹಿಚುಕಲು ಸಾಧ್ಯವೇ ಇಲ್ಲ. ಹಾದಿಬೀದಿಯಲ್ಲಿ ಜನರ ಕೈಗೆ ಸಿಕ್ಕಿರುವ ದಾಖಲೆಗಳೇ ಮೂಡಾ ಹಗರಣದ ‘ಅಸಲಿ ಕೈ’ ಯಾವುದು ಎನ್ನುವುದನ್ನು ಸ್ಪಷ್ಟವಾಗಿ ಹೇಳುತ್ತಿವೆ. ಹಾಗಿದ್ದ ಮೇಲೆ ಸತ್ಯವನ್ನು ಹೆಕ್ಕಿ ತೆಗೆದ ಆರ್‌ಟಿಐ ಕಾರ್ಯಕರ್ತರ ಮೇಲೆ ರಾಜ್ಯ ಕಾಂಗ್ರೆಸ್ ಪಕ್ಷ ಸೇಡಿನ ರಾಜಕಾರಣ ಮಾಡುತ್ತಿದೆ ಎಂದು ದೂರಿದ್ದಾರೆ.

ದೂರು ನೀಡಿರುವ ಪ್ರಸಂಗ ಹೇಗಿದೆ ಎಂದರೆ, ಬದಲಿ ನಿವೇಶನ ಫಲಾನುಭವಿಗಳು ಪರೋಕ್ಷವಾಗಿ ಸತ್ಯ ಒಪ್ಪಿಕೊಂಡಂತೆ ಆಗಿದೆ. ಅಷ್ಟೇ ಅಲ್ಲ ಆರ್‌ಟಿಐ ಕಾರ್ಯಕರ್ತರ ಟಾರ್ಗೆಟ್ ಮಾಡಿದಷ್ಟು ಮೂಡಾದ ಮೂಲೆಮೂಲೆಗಳಲ್ಲಿ ಮುಗ್ಗುತ್ತಿರುವ ಸತ್ಯಗಳು ಮತ್ತಷ್ಟು ವ್ಯಘ್ರವಾಗಿ ಹೂಂಕರಿಸುತ್ತವೆ. ಇಂಥ ವ್ಯರ್ಥ ಕೆಲಸ ಬಿಟ್ಟು ಮರ್ಯಾದೆಯಿಂದ ಸತ್ಯವನ್ನು ಎದುರಿಸುವುದು ಸಿಎಂ ಆದವರಿಗೆ ಶೋಭೆ ತರುತ್ತದೆ ಎಂದು ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ವಿಧಾನಸಭೆಯಲ್ಲಿ ಹನೂರು ಎನ್‌ಕೌಂಟರ್‌ ಸದ್ದು: ಗದ್ದಲ ಕೋಲಾಹಲ

ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿಂದು ಹನೂರು ಎನ್‌ಕೌಂಟರ್‌ ಪ್ರಕರಣ ಭಾರೀ ಚರ್ಚೆಗೆ ಕಾರಣವಾಯಿತು. ಕಲಾಪ ಆರಂಭವಾದ ತಕ್ಷಣವೇ ವಿಷಯ ಪ್ರಸ್ತಾಪಿಸಿದ ಆರ್.ಅಶೋಕ್‌,…

2 hours ago

ಕಾರ್ಮಿಕರ ಮೇಲೆ ಕಾಡಾನೆ ದಾಳಿ: ಒಬ್ಬ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…

5 hours ago

ಕಾವೇರಿ ವನ್ಯಜೀವಿಧಾಮದಲ್ಲಿ ಎನ್‌ಕೌಂಟರ್: ಮೃತ 3 ಕುಟುಂಬಗಳಿಗೆ ಶಾಸಕ ಎಂ.ಆರ್. ಮಂಜುನಾಥ್ 15 ಲಕ್ಷ ಪರಿಹಾರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…

5 hours ago

ಹನೂರಿನಲ್ಲಿ ಮೂವರ ಎನ್‌ಕೌಂಟರ್ ಪ್ರಕರಣ: ಘಟನಾ ಸ್ಥಳಕ್ಕೆ ತನಿಖಾ ತಂಡ ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್‌ಕೌಂಟರ್ ಘಟನೆಯ…

6 hours ago

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

9 hours ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

9 hours ago