ರಾಜ್ಯ

ವಿದೇಶಕ್ಕೆ ನಿಮ್ಮ ಮಗ ಸಾಯಲಿ ಅಂತಲೇ ಕಳಿಸಿದ್ಧಿರಾ?: ಸಿಎಂಗೆ ಎಚ್‌ಡಿಕೆ ಪ್ರಶ್ನೆ

ಬೆಂಗಳೂರು: ಪ್ರಜ್ವಲ್ ಅವರನ್ನು ವಿದೇಶಕ್ಕೆ ದೇವೇಗೌಡರೇ ಕಳಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ಮಾಡಿರುವ ಮಾಜಿ ಎಚ್.ಡಿ.ಕುಮಾರಸ್ವಾಮಿ ಅವರು, ವಿದೇಶಕ್ಕೆ ನಿಮ್ಮ ಮಗನನ್ನು ಸಾಯಲಿ ಅಂತಲೇ ಕಳಿಸಿದಿರಾ? ಎಂದು ತೀಕ್ಷ್ಣವಾಗಿ ಪ್ರಶ್ನಿಸಿದ್ದಾರೆ.

ತಮ್ಮ ನಿವಾಸದ ಬಳಿ ಸಿಎಂ ಹೇಳಿಕೆಯ ಬಗ್ಗೆ ಮಾಧ್ಯಮಗಳು ಪ್ರಶ್ನೆ ಕೇಳಿದಾಗ, ಯಾರಿಗೆ ಆಗಲಿ ನೋವು ನೋವೇ. ನಿಮ್ಮ ಕುಟುಂಬದಲ್ಲಿ ಒಂದು ಘಟನೆ ನಡೆದಿದೆ. ಆಗ ನಿಮ್ಮ ಮಗನನ್ನು ನೀವೇ ಕಳಿಸಿದಿರಾ? ಅವರ ಸಾವಿಗೆ ನೀವೇ ಕಾರಣರಾ? ಎಂದು ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದರು.

ರಾಜತಾಂತ್ರಿಕ ಪಾಸ್ ಪೋರ್ಟ್ ಬಗ್ಗೆ ಇವರೆಲ್ಲಾ ಮಾತನಾಡುತ್ತಿದ್ದಾರೆ. ಆದರೆ ಇವರಿಗೆ ಕಾನೂನಿನ ತಿಳಿವಳಿಕೆಯೇ ಇಲ್ಲ. ಈಗ ಪ್ರಜ್ವಲ್ ಗೆ ವಾಪಸ್ ಕರೆದುಕೊಂಡು ಬರಲು ಪತ್ರ ಬರೆದಿದ್ದಾರೆ. ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದು ಮಾಡಬೇಕು ಎಂದು ಕೇಳಿದ್ದಾರೆ. ತಕ್ಷಣಕ್ಕೆ ಅದು ಸಾಧ್ಯವಿಲ್ಲ ಎಂದು ಅವರು ಹೇಳಿದರು.

ಇದೆಲ್ಲಾ ಪ್ರಕ್ರಿಯೆ ಸಾಕಷ್ಟು ದಿನ ಆಗಬಹುದು ಎನ್ನುವ ಕಾರಣಕ್ಕೆ ತಕ್ಷಣ ವಾಪಸ್ ಬಂದು ತನಿಖೆಗೆ ಹಾಜರಾಗು ಎಂದು ಪ್ರಜ್ವಲ್ ಗೆ ಸಂದೇಶ ಕೊಟ್ಟಿದ್ದೇನೆ. ದೇವೇಗೌಡರು ಕೊನೆ ಎಚ್ಚರಿಕೆ ಕೊಟ್ಟಿದ್ದಾರೆ. ಆದರೆ, ಮಾಧ್ಯಮ ಹೇಳಿಕೆ ಮೂಲಕ ದೇವೇಗೌಡರು ನೀಡಿದ ಎಚ್ಚರಿಕೆ ಬಗ್ಗೆ ಮುಖ್ಯಮಂತ್ರಿಗಳು ಹಗುರವಾಗಿ ಮಾತಮಾಡುತ್ತಿದ್ದಾರೆ. ಎಷ್ಟು ವರ್ಷ ಇವರು ದೇವೆಗೌಡರ ಜತೆ ಕೆಲಸ ಮಾಡಿದ್ದಾರೆ? ಅವರು ಯಾವ ರೀತಿ ರಾಜಕಾರಣ ಮಾಡಿದ್ದಾರೆ ಎನ್ನುವುದು ಸಿದ್ದರಾಮಯ್ಯ ಅವರಿಗೆ ಗೊತ್ತಿಲ್ಲವೇ? ಎಂದು ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು.

ಅದೇ ನಿಮ್ಮ ಕುಟುಂಬಕ್ಕೆ ಅನ್ವಯಿಸಿಕೊಂಡು ನೋಡಿ, ಆ ನೋವು ಏನು ಎನ್ನುವುದು ಗೊತ್ತಾಗುತ್ತದೆ. ನಿಮಗೆ ನಾಚಿಕೆ ಆಗೋದಿಲ್ಲವೇ? ತೆನಿಖೆಯ ದಾರಿ ತಪ್ಪಿಸುವ ಕೆಲಸ ನಾನು ಮಾಡಿದೆನಾ? ಎಂದ ಅವರು ಕಾಂಗ್ರೆಸ್ ಪಕ್ಷದ ವಿರುದ್ಧ ಕೆಂಡಾಮಂಡಲರಾದರು.

ಇನ್ನು ಇದೊಂದು ರಾಜಕೀಯ ಪಕ್ಷವಾ? ಇವರಿಗೆ ಗೌರವ ಇದೆಯಾ? ಮಾನ ಮಾರ್ಯಾದೆ ಇದೆಯಾ? ಅದೇ ನಿಮ್ಮ ಡಿ.ಕೆ.ಶಿವಕುಮಾರ್, ಅದೇ ಸಿಡಿ ಶಿವು ಮಾಡಿದ್ದು ಗೊತ್ತಿಲ್ಲವೇ? ಆ ವ್ಯಕ್ತಿಯನ್ನು ಶಿವಕುಮಾರ್ ಎನ್ನುವುದು ಉಪಯೋಗಕ್ಕೆ ಬರೋದಿಲ್ಲ. ಅವರನ್ನು ಸಿಡಿ ಶಿವು ಅಂತಲೇ ಕರೆಯಬೇಕು. ಯಾಕಪ್ಪ ಸೀಡಿ ಶಿವು ಬ್ರೋಕರ್ ಶಿವರಾಮೇಗೌಡ ಜತೆ ಮಾತನಾಡಿದೆ? ಎಂದು ಡಿಸಿಎಂ ಡಿಕೆಶಿಯನ್ನು ನೇರವಾಗಿ ಪ್ರಶ್ನಿಸಿದರು.

ಇಡೀ ಪ್ರಕರಣದಲ್ಲಿ ಇವರು ಯಾರದ್ದು ಪಾತ್ರ ಇಲ್ಲ ಎಂದರೆ ದೇವರಾಜೇಗೌಡ, ಶಿವರಾಮೇಗೌಡ, ಡಿ.ಕೆ.ಶಿವಕುಮಾರ್ ಯಾಕೆ ಮಾತನಾಡಿದರು? ಇನ್ನು ಏನಾದರೂ ಸಾಕ್ಷ್ಯ, ಮೆಟಿರಿಯಲ್ ಇದೆಯಾ? ಅಂತ ಯಾಕೆ ಕೇಳಿದರು? ಬ್ರೋಕರ್ ಕೆಲಸ, ತಲೆ ಹಿಡಿಯುವ ಕೆಲಸ ಮಾಡುತ್ತಿರುವುದು ಅವರು. ನನ್ನ ಬಗ್ಗೆ ಪಕ್ಷದಿಂದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಾಕಿ ಅವಹೇಳನ ಮಾಡುತ್ತೀರಾ? ನೀವು ಯಾವ ನೈತಿಕತೆ ಇಟ್ಟುಕೊಂಡಿದ್ದೀರಾ? ಎಂದು ಡಿಸಿಎಂ ಡಿಕೆಶಿ ವಿರುದ್ಧ ಕಿಡಿಕಾರಿದರು.

ಗೃಹ ಸಚಿವರು ತನಿಖೆ ನಿಷ್ಪಕ್ಷಪಾತವಾಗಿ ನಡೆಯುವಂತೆ ನೋಡಿಕೊಳ್ಳಬೇಕು. ನಿಜವಾದ ಅಪರಾಧಿ ವಿರುದ್ಧ ಕ್ರಮ ಕೈಗೊಳ್ಳಲಿ. ನಮ್ಮದೇನೂ ತಕರಾರು ಇಲ್ಲ. ನಿಮಗೂ ತಂದೆ ತಾಯಿ ಇದ್ದಾರೆ. ಒಡಹುಟ್ಟಿದ ಅಕ್ಕತಂಗಿಯರಿದ್ದಾರೆ. ಅರ್ಥ ಮಾಡಿಕೊಳ್ಳಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಉಳಿದಂತೆ ಚನ್ನಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಸರ್ಕಾರಕ್ಕೆ ಹಾಗೂ ಅಧಿಕಾರಿಗಳಿಗೆ ಯಾರೂ ಗೌರವ ಕೊಡುವ ವಾತವರಣವಿಲ್ಲ. ಯಾವುದೇ ಪೊಲೀಸ್ ಅಧಿಕಾರಿಗಳಿಗೆ ಗೌರವವಿಲ್ಲ, ಯಾಕಂದರೆ ಸರಕಾರ ಆ ರೀತಿ ಇದೆ. ಪೊಲೀಸ್ ಅಧಿಕಾರಿಗಳನ್ನು ಆ ರೀತಿ ಬಳಕೆ ಮಾಡಿಕೊಂಡಿದ್ದಾರೆ ಸರಕಾರದವರು. ಅದರಿಂದ ರಾಜ್ಯದಲ್ಲಿ ಕಾನೂನು ಸಂಪೂರ್ಣ ಕುಸಿತವಾಗಿದೆ. ಇದು ಸರಕಾರದ ಸ್ವಯಂಕೃತ ಅಪರಾಧ. ಈ ಸರಕಾರದ ಬಗ್ಗೆ ಅಧಿಕಾರಿಗಳಲ್ಲೂ ವಿಶ್ವಾಸವಿಲ್ಲ, ಜನತೆಯಲ್ಲೂ ವಿಶ್ವಾಸವಿಲ್ಲ ಎಂದು ಕುಮಾರಸ್ವಾಮಿ ಕಟುವಾಗಿ ಟೀಕಿಸಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

1 hour ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

2 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

3 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

4 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

9 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

9 hours ago