ಬೆಂಗಳೂರು: ಎರಡೂ ಪಕ್ಷಗಳ ಮೈತ್ರಿ, ವಿಧಾನ ಪರಿಷತ್ʼನ 6 ಸ್ಥಾನಗಳ ಚುನಾವಣೆ, ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ ಸೇರಿ ಹಲವಾರು ವಿಷಯಗಳ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದ ಜೆಡಿಎಸ್ ನಾಯಕರ ತಂಡವು ರಾಜ್ಯ ಬಿಜೆಪಿ ನಾಯಕರ ಜತೆ ಮಹತ್ವದ ಚರ್ಚೆ ನಡೆಸಿತು.
ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಅವರ ನಿವಾಸದಲ್ಲಿ ನಡೆದ ಈ ಸಭೆಯಲ್ಲಿ ಜಾತ್ಯತೀತ ಜನತಾದಳದ ಕೋರ್ ಕಮಿಟಿ ಅಧ್ಯಕ್ಷರಾದ ಜಿ.ಟಿ.ದೇವೇಗೌಡ, ಮಾಜಿ ಸಚಿವರಾದ ಬಂಡೆಪ್ಪ ಕಾಶೆಂಪೂರ, ವಿಧಾನ ಪರಿಷತ್ ಸದಸ್ಯರಾದ ಭೋಜೆಗೌಡರು, ಕೆ.ಎ.ತಿಪ್ಪೇಸ್ವಾಮಿ ಹಾಗೂ ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಭಾಗಿಯಾಗಿದ್ದರು.
ಹಾಗೆಯೇ ಬಿಜೆಪಿ ವತಿಯಿಂದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಮುಖ್ಯಮಂತ್ರಿಗಳಾದ ಡಿ.ವಿ.ಸದಾನಂದ ಗೌಡರು, ಬಸವರಾಜ ಬೊಮ್ಮಾಯಿ, ಪ್ರತಿಪಕ್ಷ ನಾಯಕ ಆರ್.ಅಶೋಕ, ಮಾಜಿ ಉಪ ಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರುಗಳು ಭಾಗವಹಿಸಿದ್ದರು.
ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಕುಮಾರಸ್ವಾಮಿ ಅವರು, ಯಡಿಯೂರಪ್ಪ ಅವರ ಮನೆಯಲ್ಲಿ ಎರಡೂ ಪಕ್ಷಗಳ ಪ್ರಮುಖ ನಾಯಕರು ಮಾತನಾಡಿದ್ದೇವೆ.
ಪ್ರಥಮ ಹಂತದಲ್ಲಿ ಮೊದಲ ಸಭೆ ಮಾಡಿದ್ದೇವೆ. ಮುಂದೆ ವಿಧಾನ ಪರಿಷತ್ ಉಪ ಚುನಾವಣೆ ಇದೆ. ಅಭ್ಯರ್ಥಿ ಆಯ್ಕೆ ಚರ್ಚೆ ಮಾಡಿದ್ದೇವೆ. ಈ ಬಗ್ಗೆ ಬಿಜೆಪಿ ಹೈಕಮಾಂಡ್ʼಗೆ ಮಾಹಿತಿ ನೀಡುತ್ತೇವೆ.
ಮುಂದಿನ ಲೋಕಸಭೆ ಚುನಾವಣೆಗೆ ಇಲ್ಲಿಂದಲೇ ಸಂದೇಶ ಕೊಡಲಿದ್ದೇವೆ. ಮೋದಿ ಅವರ ಕೈ ಬಲಪಡಿಸಲು ಒಟ್ಟಾಗಿ ಹೋಗುತ್ತೇವೆ. ರಾಜ್ಯದಲ್ಲಿ ಕೆಟ್ಟ ಸರ್ಕಾರ ಇದೆ, ಅದು ತೊಲಗಬೇಕು ಎಂದರು.
ರಜೆ ಘೋಷಣೆಗೆ ಆಗ್ರಹ: ನಾವು ಕೂಡ ಅಯೋಧ್ಯೆಗೆ ಹೋಗುತ್ತೇವೆ. ಶ್ರೀರಾಮ ದೇವರ ಪ್ರಾಣ ಪ್ರತಿಷ್ಠೆ ಮಾಡುವ ದಿನ, ಅಂದರೆ ಸೋಮವಾರ ರಾಜ್ಯ ಸರಕಾರ ರಜೆ ಘೋಷಣೆ ಮಾಡಬೇಕು ಎನ್ನುವುದು ಜನರ ಭಾವನೆ. ಆ ಕಾರ್ಯಕ್ರಮದ ನೇರ ಪ್ರಸಾರದ ವೀಕ್ಷಣೆ ಮಾಡಬೇಕು ಎನ್ನುವುದು ಎಲ್ಲರ ಆಕಾಂಕ್ಷೆ. ಇದು ನಾಡಿನ ಕಾರ್ಯಕ್ರಮ, ದೇಶದ ಕಾರ್ಯಕ್ರಮ. ಹೀಗಾಗಿ ರಜೆ ಘೋಷಣೆ ಮಾಡಲು ಸರ್ಕಾರಕ್ಕೆ ಒತ್ತಾಯ ಮಾಡುತ್ತೇನೆ. ಈಗಾಗಲೇ ಅನೇಕ ರಾಜ್ಯಗಳು ರಜಾ ಘೋಷಣೆ ಮಾಡಿವೆ ಎಂದು ಕುಮಾರಸ್ವಾಮಿ ಅವರು ಹೇಳಿದರು.
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…
ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…
ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…