ರಾಜ್ಯ

ಬಿಜೆಪಿ ರಾಜ್ಯ ನಾಯಕರ ಜೊತೆ ಹೆಚ್.ಡಿ.ಕುಮಾರಸ್ವಾಮಿ ಸಮಾಲೋಚನೆ!

ಬೆಂಗಳೂರು: ಎರಡೂ ಪಕ್ಷಗಳ ಮೈತ್ರಿ, ವಿಧಾನ ಪರಿಷತ್‌ʼನ 6 ಸ್ಥಾನಗಳ ಚುನಾವಣೆ, ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ ಸೇರಿ ಹಲವಾರು ವಿಷಯಗಳ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದ ಜೆಡಿಎಸ್ ನಾಯಕರ ತಂಡವು ರಾಜ್ಯ ಬಿಜೆಪಿ ನಾಯಕರ ಜತೆ ಮಹತ್ವದ ಚರ್ಚೆ ನಡೆಸಿತು.

ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಅವರ ನಿವಾಸದಲ್ಲಿ ನಡೆದ ಈ ಸಭೆಯಲ್ಲಿ ಜಾತ್ಯತೀತ ಜನತಾದಳದ ಕೋರ್ ಕಮಿಟಿ ಅಧ್ಯಕ್ಷರಾದ ಜಿ.ಟಿ.ದೇವೇಗೌಡ, ಮಾಜಿ ಸಚಿವರಾದ ಬಂಡೆಪ್ಪ ಕಾಶೆಂಪೂರ, ವಿಧಾನ ಪರಿಷತ್ ಸದಸ್ಯರಾದ ಭೋಜೆಗೌಡರು, ಕೆ.ಎ.ತಿಪ್ಪೇಸ್ವಾಮಿ ಹಾಗೂ ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಭಾಗಿಯಾಗಿದ್ದರು.

ಹಾಗೆಯೇ ಬಿಜೆಪಿ ವತಿಯಿಂದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಮುಖ್ಯಮಂತ್ರಿಗಳಾದ ಡಿ.ವಿ.ಸದಾನಂದ ಗೌಡರು, ಬಸವರಾಜ ಬೊಮ್ಮಾಯಿ, ಪ್ರತಿಪಕ್ಷ ನಾಯಕ ಆರ್.ಅಶೋಕ, ಮಾಜಿ ಉಪ ಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರುಗಳು ಭಾಗವಹಿಸಿದ್ದರು.

ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಕುಮಾರಸ್ವಾಮಿ ಅವರು, ಯಡಿಯೂರಪ್ಪ ಅವರ ಮನೆಯಲ್ಲಿ ಎರಡೂ ಪಕ್ಷಗಳ ಪ್ರಮುಖ ನಾಯಕರು ಮಾತನಾಡಿದ್ದೇವೆ.

ಪ್ರಥಮ ಹಂತದಲ್ಲಿ ಮೊದಲ ಸಭೆ ಮಾಡಿದ್ದೇವೆ. ಮುಂದೆ ವಿಧಾನ ಪರಿಷತ್ ಉಪ ಚುನಾವಣೆ ಇದೆ. ಅಭ್ಯರ್ಥಿ ಆಯ್ಕೆ ಚರ್ಚೆ ಮಾಡಿದ್ದೇವೆ. ಈ ಬಗ್ಗೆ ಬಿಜೆಪಿ ಹೈಕಮಾಂಡ್ʼಗೆ ಮಾಹಿತಿ ನೀಡುತ್ತೇವೆ.

ಮುಂದಿನ ಲೋಕಸಭೆ ಚುನಾವಣೆಗೆ ಇಲ್ಲಿಂದಲೇ ಸಂದೇಶ ಕೊಡಲಿದ್ದೇವೆ. ಮೋದಿ ಅವರ ಕೈ ಬಲಪಡಿಸಲು ಒಟ್ಟಾಗಿ ಹೋಗುತ್ತೇವೆ. ರಾಜ್ಯದಲ್ಲಿ ಕೆಟ್ಟ ಸರ್ಕಾರ ಇದೆ, ಅದು ತೊಲಗಬೇಕು ಎಂದರು.

ರಜೆ ಘೋಷಣೆಗೆ ಆಗ್ರಹ:  ನಾವು ಕೂಡ ಅಯೋಧ್ಯೆಗೆ ಹೋಗುತ್ತೇವೆ. ಶ್ರೀರಾಮ ದೇವರ ಪ್ರಾಣ ಪ್ರತಿಷ್ಠೆ ಮಾಡುವ ದಿನ, ಅಂದರೆ ಸೋಮವಾರ ರಾಜ್ಯ ಸರಕಾರ ರಜೆ ಘೋಷಣೆ ಮಾಡಬೇಕು ಎನ್ನುವುದು ಜನರ ಭಾವನೆ. ಆ ಕಾರ್ಯಕ್ರಮದ ನೇರ ಪ್ರಸಾರದ ವೀಕ್ಷಣೆ ಮಾಡಬೇಕು ಎನ್ನುವುದು ಎಲ್ಲರ ಆಕಾಂಕ್ಷೆ. ಇದು ನಾಡಿನ ಕಾರ್ಯಕ್ರಮ, ದೇಶದ ಕಾರ್ಯಕ್ರಮ. ಹೀಗಾಗಿ ರಜೆ ಘೋಷಣೆ ಮಾಡಲು ಸರ್ಕಾರಕ್ಕೆ ಒತ್ತಾಯ ಮಾಡುತ್ತೇನೆ. ಈಗಾಗಲೇ ‌ಅನೇಕ ರಾಜ್ಯಗಳು ರಜಾ ಘೋಷಣೆ ಮಾಡಿವೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

 

andolanait

Recent Posts

ಹನೂರು| ಆಟೋ ಹಾಗೂ ಕಾರಿನ ನಡುವೆ ಡಿಕ್ಕಿ: ಮೂವರಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ‌ ಮಹದೇಶ್ವರಬೆಟ್ಟ ರಸ್ತೆಯ ತಾಳುಬೆಟ್ಟ–ಕೋಣನಕೆರೆ ಮಾರ್ಗದಲ್ಲಿ ಮಂಗಳವಾರ ಬೆಳ್ಳಂಬೆಳಿಗ್ಗೆ ಆಟೋ…

40 mins ago

ನೀಟ್‌ ಪರೀಕ್ಷೆಯ ರದ್ದು, ಕೇಂದ್ರ ಸರ್ಕಾರದ ಬಹು ದೊಡ್ಡ ಹಗರಣ: ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್

ಬೆಂಗಳೂರು: ನೀಟ್‌ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸದ ಕೇಂದ್ರ ಸರ್ಕಾರ, ಪರೀಕ್ಷೆ ರದ್ದು ಮಾಡುವ ಮೂಲಕ ವೈದ್ಯರಾಗಬೇಕು ಎಂಬ ಕನಸು ಹೊತ್ತಿದ್ದ…

46 mins ago

ಪಾಕಿಸ್ತಾನದಲ್ಲಿ ಭೀಕರ ಬಾಂಬ್‌ ಸ್ಫೋಟ: 9 ಮಂದಿ ಸಾವು

ಪಾಕಿಸ್ತಾನ: ಇಲ್ಲಿನ ವಾಯುವ್ಯ ಭಾಗದ ಮಾರುಕಟ್ಟೆಯೊಂದರಲ್ಲಿ ರಿಕ್ಷಾಗೆ ಅಳವಡಿಸಿದ್ದ ಬಾಂಬ್‌ ಸ್ಫೋಟಗೊಂಡ ಪರಿಣಾಮ 9 ಮಂದಿ ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ…

50 mins ago

ನಾಳೆಯಿಂದ ಎರಡು ದಿನ ಸಿದ್ದರಾಮಯ್ಯ ಮೈಸೂರು ಪ್ರವಾಸ

ಮೈಸೂರು: ನಾಳೆಯಿಂದ ಎರಡು ದಿನಗಳ ಕಾಲ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಸಂಜೆ 5.30ಕ್ಕೆ ವಿಶೇಷ…

51 mins ago

ವನ್ಯಜೀವಿ ಸಂಚಾರವಿರುವ ಚಾರಣಪಥ, ಸಂಚಾರಪಥ ಸ್ಥಗಿತಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು: ಚಾಮರಾಜನಗರದ ನಾಗಮಲೆ ಅರಣ್ಯದಲ್ಲಿ ಚಿರತೆ ದಾಳಿಯಿಂದ 10 ವರ್ಷದ ಬಾಲಕ ಮೃತಪಟ್ಟಿರುವ ಹಿನ್ನೆಲೆಯಲ್ಲಿ ವನ್ಯಜೀವಿ ಸಂಚಾರ ಇರುವ ಎಲ್ಲ…

51 mins ago

ನಾಗಮಲೆ ಗ್ರಾಮದಲ್ಲಿ ಎರಡು ಮೇಕೆ ಹೊತ್ತೊಯ್ದ ಚಿರತೆ: ಮತ್ತಷ್ಟು ಆತಂಕ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂಡಿಗನತ್ತ…

52 mins ago