ಮೈಸೂರು: ಮೈಸೂರು-ಕೊಡಗು ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಎಂ. ಲಕ್ಷ್ಮಣ್ ಪರ ಮತಯಾಚಿಸಿದ ಡಿಕೆ ಶಿವಕುಮಾರ್ ಅವರು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರನ್ನು ಕಟುವಾಗಿ ಟೀಕಿಸಿದ್ದಾರೆ.
ಮತಯಾಚನೆ ವೇಳೆ ಮಾತನಾಡಿರುವ ಡಿಕೆ ಮಂಡ್ಯ ಮತ್ತು ಮೈಸೂರು ಜಿಲ್ಲೆಗೆ ಎಚ್.ಡಿ ಕುಮಾರಸ್ವಾಮಿ ಕೊಡುಗೆ ಏನು ಎಂದು ಪ್ರಶ್ನಿಸಿದ್ದಾರೆ.
2018 ರಲ್ಲಿ ಎಚ್.ಡಿ ಕುಮಾರಸ್ವಾಮಿ ಅವರನ್ನು ಸಿಎಂ ಮಾಡಿದ್ದಾಗ ಈ ಎರಡು ಜಿಲ್ಲೆಗಳಿಂದ ಮೂರು ಎಂಎಲ್ಸಿ, ಮೂರು ಜನ ಶಾಸಕರು ಹಾಗೂ ಸಾರಾ ಮಹೇಶ್, ಡಿಸಿ ತಮ್ಮಣ್ಣ, ಪುಟ್ಟರಾಜು ಸೇರಿದಂತೆ ಮಂತ್ರಿಗಳಿದ್ದರು ಸಹಾ ಕ್ಷೇತ್ರದ ಅಭಿವೃದ್ಧಿಗೆ ಅವರು ಯಾವುದೇ ಕೊಡುಗೆಯನ್ನು ಸಹಾ ನೀಡಿಲ್ಲ ಎಂದು ಕಿಡಿಕಾರಿದರು.
ಮೈಸೂರು, ಮಂಡ್ಯ ಭಾಗದ ಜನರು ಕಾಂಗ್ರೆಸ್ ನೆರವಿನಿಂದ ಪ್ರಧಾನಿಯಾದ ದೇವೇಗೌಡರನ್ನಾಗಲಿ, ಕಾಂಗ್ರೆಸ್ನಿಂದ ಎರಡೆರೆಡು ಬಾರಿ ಸಿಎಂ ಆದ ಎಚ್ಡಿಕೆಯನ್ನಾಗಲಿ ನೆನೆಯುವುದಿಲ್ಲ. ಇವರಿಂದ ಕ್ಷೇತ್ರದಲ್ಲಿ ನೀರಾವರಿ ಯೋಜನೆ ಬಿಟ್ಟು, ಬೇರೆ ಯಾವುದೇ ಕಾಮಗಾರಿಯಾಗಿಲ್ಲ. ಹಾಗಾಗಿ ಇಲ್ಲಿನ ಜನತೆ ಎಸ್.ಎಂ ಕೃಷ್ಣ, ದೇವರಾಜು ಅರಸು, ಸಿಎಂ ಸಿದ್ದರಾಮಯ್ಯ ಹಾಗೂ ಶಂಕರೇಗೌಡ, ಮಾದೇಗೌಡರನ್ನು ನೆನೆಯುತ್ತಾರೆ ಎಂದು ಟೀಕಿಸಿದರು.
ಹನೂರು : ತಾಲೂಕಿನ ಬಿ.ಆರ್.ಟಿ ಅರಣ್ಯ ಪ್ರದೇಶ ವ್ಯಾಪ್ತಿಯ ಲೊಕ್ಕನಹಳ್ಳಿ ಸಮೀಪದ ಗುಡ್ಡದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡು ಸುಮಾರು 20 ಎಕರೆಗೂ…
ಜಕಾರ್ತಾ : ಇಂಡೋನೇಷ್ಯಾದ ಉತ್ತರ ಮೊಲುಕ್ಕಾ ಸಮುದ್ರ ಪ್ರದೇಶದಲ್ಲಿ ಗುರುವಾರ ಬೆಳಗ್ಗೆ ಪ್ರಬಲ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 7.4ರಷ್ಟು…
ಹನೂರು : ಏಕ ಕಾಲದಲ್ಲಿ ಬುಧವಾರ ತಡರಾತ್ರಿ ಕಾಡಾನೆಗಳು ರೈತರ ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳ ಮೇಲೆ ದಾಳಿ ನಡೆಸಿ ಸುಮಾರು…
ಮೈಸೂರು : ಸ್ಪರ್ಧಾತ್ಮಕ ಜಗತ್ತು ಸಾಗರದಂತೆ. ಇವತ್ತಿನ ಸ್ಪರ್ಧಾತ್ಮಕ ಸಮಾಜದಲ್ಲಿ ಹೆಚ್ಚಿನ ಬದಲಾವಣೆಗಳು, ಒತ್ತಡಗಳಿದ್ದು, ಎಲ್ಲದಕ್ಕೂ ಸಿದ್ಧರಿರಬೇಕು. ನಿರಂತರ ಅಭ್ಯಾಸ…
ಹನೂರು : ತಾಲೂಕಿನ ಪೊನ್ನಾಚಿ ಗ್ರಾಮದಲ್ಲಿ ಇಬ್ಬರು ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಹನೂರು…
ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿ ಜನಸ್ಪಂದನೆ ದೊರೆಯುತ್ತಿದ್ದು, ಅಭಿವೃದ್ಧಿ ಮಾಡದ ಬಿಜೆಪಿಯ ಸತ್ಯವನ್ನು ಜನರು ಅರಿತಿದ್ದಾರೆ…