ಮೈಸೂರು: ಮೈಸೂರು-ಕೊಡಗು ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಎಂ. ಲಕ್ಷ್ಮಣ್ ಪರ ಮತಯಾಚಿಸಿದ ಡಿಕೆ ಶಿವಕುಮಾರ್ ಅವರು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರನ್ನು ಕಟುವಾಗಿ ಟೀಕಿಸಿದ್ದಾರೆ.
ಮತಯಾಚನೆ ವೇಳೆ ಮಾತನಾಡಿರುವ ಡಿಕೆ ಮಂಡ್ಯ ಮತ್ತು ಮೈಸೂರು ಜಿಲ್ಲೆಗೆ ಎಚ್.ಡಿ ಕುಮಾರಸ್ವಾಮಿ ಕೊಡುಗೆ ಏನು ಎಂದು ಪ್ರಶ್ನಿಸಿದ್ದಾರೆ.
2018 ರಲ್ಲಿ ಎಚ್.ಡಿ ಕುಮಾರಸ್ವಾಮಿ ಅವರನ್ನು ಸಿಎಂ ಮಾಡಿದ್ದಾಗ ಈ ಎರಡು ಜಿಲ್ಲೆಗಳಿಂದ ಮೂರು ಎಂಎಲ್ಸಿ, ಮೂರು ಜನ ಶಾಸಕರು ಹಾಗೂ ಸಾರಾ ಮಹೇಶ್, ಡಿಸಿ ತಮ್ಮಣ್ಣ, ಪುಟ್ಟರಾಜು ಸೇರಿದಂತೆ ಮಂತ್ರಿಗಳಿದ್ದರು ಸಹಾ ಕ್ಷೇತ್ರದ ಅಭಿವೃದ್ಧಿಗೆ ಅವರು ಯಾವುದೇ ಕೊಡುಗೆಯನ್ನು ಸಹಾ ನೀಡಿಲ್ಲ ಎಂದು ಕಿಡಿಕಾರಿದರು.
ಮೈಸೂರು, ಮಂಡ್ಯ ಭಾಗದ ಜನರು ಕಾಂಗ್ರೆಸ್ ನೆರವಿನಿಂದ ಪ್ರಧಾನಿಯಾದ ದೇವೇಗೌಡರನ್ನಾಗಲಿ, ಕಾಂಗ್ರೆಸ್ನಿಂದ ಎರಡೆರೆಡು ಬಾರಿ ಸಿಎಂ ಆದ ಎಚ್ಡಿಕೆಯನ್ನಾಗಲಿ ನೆನೆಯುವುದಿಲ್ಲ. ಇವರಿಂದ ಕ್ಷೇತ್ರದಲ್ಲಿ ನೀರಾವರಿ ಯೋಜನೆ ಬಿಟ್ಟು, ಬೇರೆ ಯಾವುದೇ ಕಾಮಗಾರಿಯಾಗಿಲ್ಲ. ಹಾಗಾಗಿ ಇಲ್ಲಿನ ಜನತೆ ಎಸ್.ಎಂ ಕೃಷ್ಣ, ದೇವರಾಜು ಅರಸು, ಸಿಎಂ ಸಿದ್ದರಾಮಯ್ಯ ಹಾಗೂ ಶಂಕರೇಗೌಡ, ಮಾದೇಗೌಡರನ್ನು ನೆನೆಯುತ್ತಾರೆ ಎಂದು ಟೀಕಿಸಿದರು.
ಸ್ವಾವಲಂಬನೆಗೆ ಸಹಕಾರಿಯಾದ ನಿಯೋಬೋಲ್ಟ್ ಸ್ಕೂಟರ್ ಗಾಲಿಕುರ್ಚಿ 2010ರ ಆಗಸ್ಟ್ ತಿಂಗಳಿನಲ್ಲಿ ನಾಗ್ಪುರದ ನಿವಾಸಿ ನಿತೀನ್ರ ಜನ್ಮ ದಿನಾಚರಣೆಯ ಸಂಭ್ರಮ ಆಚರಿಸಲು…
ನವೀನ್ ಡಿಸೋಜ ಮಡಿಕೇರಿ ಪ್ರಾದೇಶಿಕ ಸಾರಿಗೆ ಕಚೇರಿ ಅಧಿಕಾರಿಗಳ ಸಾಧನೆ ಜಿಲ್ಲೆಯಾದ್ಯಂತ ನಿರಂತರ ವ್ಯಾಪಕ ತಪಾಸಣಾ ಕ್ರಮ ಮಡಿಕೇರಿ: ಪ್ರಾದೇಶಿಕ…
ನಾಗರಹೊಳೆ ಅರಣ್ಯದ ಮಧ್ಯಭಾಗದಲ್ಲಿರುವ ದೇವಸ್ಥಾನಕ್ಕೆ ವಿವಿಧೆಡೆಯಿಂದ ಸಾವಿರಾರು ಮಂದಿ ಭೇಟಿ ಪಿರಿಯಾಪಟ್ಟಣ: ತಾಲ್ಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಆನೆಚೌಕೂರು ಮೀಸಲು…
ಎಂ.ಗೂಳೀಪುರ ನಂದೀಶ್ ಕೆಸ್ತೂರು ಪ್ರೌಢಶಾಲೆಯ ಸುತ್ತುಗೋಡೆಯಲ್ಲಿ ಕನ್ನಡ ಸಾಹಿತಿಗಳ, ಸಾಧಕರ ಸೊಗಸಾದ ಚಿತ್ರಗಳ ಚಿತ್ತಾರ ಯಳಂದೂರು: ಶಾಲೆಯ ಸುತ್ತುಗೋಡೆಯಲ್ಲಿ ರಾರಾಜಿಸುತ್ತಿರುವ…
ಎಂ.ಬಿ.ರಂಗಸ್ವಾಮಿ ಮೂಗೂರಿನ ತ್ರಿಪುರ ಸುಂದರಿ ದೇಗುಲದ ನೂತನ ಕಲ್ಯಾಣಿಯಲ್ಲಿ ೪ ವರ್ಷಗಳಿಂದ ನಡೆಯದ ತೆಪ್ಪೋತ್ಸವ ಮೂಗೂರು: ಐತಿಹಾಸಿಕ ಹಿನ್ನೆಲೆಯುಳ್ಳ ಧಾರ್ಮಿಕ…