ಮೈಸೂರು: ಮೈಸೂರು-ಕೊಡಗು ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಎಂ. ಲಕ್ಷ್ಮಣ್ ಪರ ಮತಯಾಚಿಸಿದ ಡಿಕೆ ಶಿವಕುಮಾರ್ ಅವರು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರನ್ನು ಕಟುವಾಗಿ ಟೀಕಿಸಿದ್ದಾರೆ.
ಮತಯಾಚನೆ ವೇಳೆ ಮಾತನಾಡಿರುವ ಡಿಕೆ ಮಂಡ್ಯ ಮತ್ತು ಮೈಸೂರು ಜಿಲ್ಲೆಗೆ ಎಚ್.ಡಿ ಕುಮಾರಸ್ವಾಮಿ ಕೊಡುಗೆ ಏನು ಎಂದು ಪ್ರಶ್ನಿಸಿದ್ದಾರೆ.
2018 ರಲ್ಲಿ ಎಚ್.ಡಿ ಕುಮಾರಸ್ವಾಮಿ ಅವರನ್ನು ಸಿಎಂ ಮಾಡಿದ್ದಾಗ ಈ ಎರಡು ಜಿಲ್ಲೆಗಳಿಂದ ಮೂರು ಎಂಎಲ್ಸಿ, ಮೂರು ಜನ ಶಾಸಕರು ಹಾಗೂ ಸಾರಾ ಮಹೇಶ್, ಡಿಸಿ ತಮ್ಮಣ್ಣ, ಪುಟ್ಟರಾಜು ಸೇರಿದಂತೆ ಮಂತ್ರಿಗಳಿದ್ದರು ಸಹಾ ಕ್ಷೇತ್ರದ ಅಭಿವೃದ್ಧಿಗೆ ಅವರು ಯಾವುದೇ ಕೊಡುಗೆಯನ್ನು ಸಹಾ ನೀಡಿಲ್ಲ ಎಂದು ಕಿಡಿಕಾರಿದರು.
ಮೈಸೂರು, ಮಂಡ್ಯ ಭಾಗದ ಜನರು ಕಾಂಗ್ರೆಸ್ ನೆರವಿನಿಂದ ಪ್ರಧಾನಿಯಾದ ದೇವೇಗೌಡರನ್ನಾಗಲಿ, ಕಾಂಗ್ರೆಸ್ನಿಂದ ಎರಡೆರೆಡು ಬಾರಿ ಸಿಎಂ ಆದ ಎಚ್ಡಿಕೆಯನ್ನಾಗಲಿ ನೆನೆಯುವುದಿಲ್ಲ. ಇವರಿಂದ ಕ್ಷೇತ್ರದಲ್ಲಿ ನೀರಾವರಿ ಯೋಜನೆ ಬಿಟ್ಟು, ಬೇರೆ ಯಾವುದೇ ಕಾಮಗಾರಿಯಾಗಿಲ್ಲ. ಹಾಗಾಗಿ ಇಲ್ಲಿನ ಜನತೆ ಎಸ್.ಎಂ ಕೃಷ್ಣ, ದೇವರಾಜು ಅರಸು, ಸಿಎಂ ಸಿದ್ದರಾಮಯ್ಯ ಹಾಗೂ ಶಂಕರೇಗೌಡ, ಮಾದೇಗೌಡರನ್ನು ನೆನೆಯುತ್ತಾರೆ ಎಂದು ಟೀಕಿಸಿದರು.
ಬೆಂಗಳೂರು: ಬಡವರ ಮತಗಳನ್ನು ತೆಗೆಯಲು ಎಸ್ಐಆರ್ ಮೂಲಕ ಸಂಚು ಮಾಡಲಾಗಿದೆ. ನಾವುಗಳು ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ನಮ್ಮ ಪಕ್ಷದ…
ಬೆಂಗಳೂರು: ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ಗೆ ರಾಜ್ಯ ಸರ್ಕಾರ ರಿಲೀಫ್ ನೀಡಿದೆ. ವಾಟಾಳ್ ನಾಗರಾಜ್ ಮೇಲಿನ ಕೇಸ್ಗಳನ್ನು ಸರ್ಕಾರ ಹಿಂಪಡೆಯಲು…
ಬೆಂಗಳೂರು: ಕಾನೂನಾತ್ಮಕವಾಗಿ 52 ಪ್ರಕರಣಗಳನ್ನು ಹಿಂಪಡೆಯಬಹುದು ಎಂದು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್…
ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣದ ಪ್ರಸಿದ್ಧ ವೆಲ್ಲೆಸ್ಲಿ ಸೇತುವೆ ಆತ್ಮಹತ್ಯೆ ಹಾಟ್ಸ್ಪಾಟ್ ಆಗುತ್ತಿದ್ದು, ಸೇತುವೆ ಮೇಲಿಂದ ನದಿಗೆ ಧುಮುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವವರ ಸಂಖ್ಯೆ…
ನವದೆಹಲಿ: ಆಫ್ರಿಕಾದ ಹಲವು ಭಾಗಗಳಲ್ಲಿ ಕೋವಿಡ್ಗಿಂತಲೂ ಡೆಡ್ಲಿಯಾದ ಎಬೋಲಾ ವೈರಸ್ ಹಾವಳಿ ಕಂಡುಬಂದಿರುವ ಹಿನ್ನೆಲೆಯಲ್ಲಿ ಭಾರತದಲ್ಲೂ ಕಟ್ಟೆಚ್ಚರಕ್ಕೆ ಆದೇಶ ನೀಡಲಾಗಿದೆ.…
ನವದೆಹಲಿ: ಕರ್ನಾಟಕ ನಾಲ್ಕು ಸೇರಿದಂತೆ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆಯಾಗಿದೆ. ಮಲ್ಲಿಕಾರ್ಜುನ ಖರ್ಗೆ, ಎಚ್.ಡಿ.ದೇವೇಗೌಡ, ಈರಣ್ಣ ಕಡಾಡಿ,…