ಬೆಂಗಳೂರು: ನನ್ನ ತಂದೆ ಆರೋಗ್ಯ ಲೆಕ್ಕಿಸದೇ ಜನರಿಗಾಗಿ ಕೆಲಸ ಮಾಡುತ್ತಿದ್ದಾರೆ ಎಂದು ನಿಖಿಲ್ ಕುಮಾರಸ್ವಾಮಿ ಭಾವುಕರಾಗಿದ್ದಾರೆ.
ಬೆಂಗಳೂರಿನಲ್ಲಿ ಬಿಜೆಪಿ ಪಾದಯಾತ್ರೆ ಕುರಿತು ಸುದ್ದಿಗೋಷ್ಠಿ ನಡೆಸುವ ವೇಳೆಯೇ ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಮೂಗಿನಲ್ಲಿ ರಕ್ತಸ್ರಾವ ಆಗಿತ್ತು. ಕೂಡಲೇ ಅವರನ್ನು ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲು ಮಾಡಿ, ಚಿಕಿತ್ಸೆ ನೀಡಲಾಯಿತು. ಸದ್ಯ ಕುಮಾರಸ್ವಾಮಿ ಅವರು ಆರೋಗ್ಯದಿಂದ ಇದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಬಗ್ಗೆ ಪುತ್ರ ನಿಖಿಲ್ ಕುಮಾರಸ್ವಾಮಿ ಮಾಹಿತಿ ನೀಡಿದ್ದು, ಕಳೆದ 15 ದಿನಗಳಿಂದ ಕುಮಾರಸ್ವಾಮಿ ಅವರು ನಿರಂತರ ಓಡಾಟ ನಡೆಸಿದ್ದಾರೆ. ಕೆಲಸದ ಒತ್ತಡದಿಂದ ಮೂಗಿನಲ್ಲಿ ರಕ್ತಸ್ರಾವ ಆಗಿದೆ. ಅವರ ಆರೋಗ್ಯದಲ್ಲಿ ಏನು ಸಮಸ್ಯೆಯಿಲ್ಲ. ಕೆಲಸದ ಒತ್ತಡದ ನಡುವೆ ಬೆಳಿಗ್ಗೆ 4.30ಕ್ಕೆ ಎದ್ದೇಳುತ್ತಿದ್ದರು. ಮಲಗೋದು ರಾತ್ರಿ 1 ಗಂಟೆ ಆಗುತ್ತಿತ್ತು. ಹೀಗಾಗಿ ಅವರಿಗೆ ವಿಶ್ರಾಂತಿಯ ಅವಶ್ಯಕತೆಯಿದೆ. ಡಾಕ್ಟರ್ ಕೂಡ ಕುಮಾರಸ್ವಾಮಿ ಅವರ ಆರೋಗ್ಯದ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ ಎಂದು ಮಾಹಿತಿ ನೀಡಿದರು.
ಇನ್ನು ಕುಮಾರಸ್ವಾಮಿ ಅವರಿಗೆ ಚಿಕಿತ್ಸೆ ನೀಡಿದ ವೈದ್ಯ ಯತೀಶ್ ಪ್ರತಿಕ್ರಿಯೆ ನೀಡಿದ್ದು, ಕುಮಾರಸ್ವಾಮಿ ಅವರಿಗೆ ಮೂರು ಸಲ ಹೃದಯದ ಚಿಕಿತ್ಸೆ ನೀಡಲಾಗಿದೆ. ಯಾರೂ ಏನೂ ಆತಂಕ ಪಡುವ ಅಗತ್ಯವಿಲ್ಲ. ಅವರು ಅಡ್ಮಿಷನ್ ಆಗಿಲ್ಲ. ತಪಾಸಣೆ ಮುಗಿಸಿ ಹೊರಡುತ್ತಾರೆ ಎಂದು ಸ್ಪಷ್ಟಪಡಿಸಿದ್ದಾರೆ.
ಹಾಸನ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ. ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.…
ಬೆಂಗಳೂರು: ಕರ್ನಾಟಕದ ಹಲವೆಡೆ ಮುಂದಿನ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೀದರ್, ಕಲಬುರ್ಗಿ,…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಜಾತ್ರಾ ಮಹೋತ್ಸವದ ಅಂಗವಾಗಿ…
ಇಸ್ಲಾಮಾಬಾದ್: ಇರಾನ್, ಅಮೇರಿಕಾ-ಇಸ್ರೇಲ್ ಯುದ್ಧದಿಂದಾಗಿ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ತೈಲ ಬಿಕ್ಕಟ್ಟು ಉಲ್ಬಣಗೊಂಡಿದೆ. ಇದರಿಂದ ಪಾಕಿಸ್ತಾನದಲ್ಲಿ ಗಣರಾಜ್ಯೋತ್ಸವ ಮೆರವಣಿಗೆ ರದ್ದಾಗಿದೆ. ಮಾರ್ಚ್.23ರಂದು…
ಮಡಿಕೇರಿ: ನಾಡಿನಾದ್ಯಂತ ಇಂದು ಹೊಸ ವರ್ಷ ಯುಗಾದಿ ಸಂಭ್ರಮ ಮನೆ ಮಾಡಿದ್ದು, ಕೊಡಗಿನ ಮನೆ ಮನೆಯಲ್ಲೂ ಯುಗಾದಿ ಹಬ್ಬದ ಸಡಗರ…
ಟಿ.ನರಸೀಪುರ: ನಾಡಿನೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಪುಣ್ಯಸ್ನಾನಕ್ಕೆಂದು ತ್ರಿವೇಣಿ ಸಂಗಮಕ್ಕೆ ಭಕ್ತರ ದಂಡೇ ಹರಿದು ಬರುತ್ತಿದೆ. ಮೈಸೂರು ಜಿಲ್ಲೆ…