ಬೆಂಗಳೂರು: ನನ್ನ ತಂದೆ ಆರೋಗ್ಯ ಲೆಕ್ಕಿಸದೇ ಜನರಿಗಾಗಿ ಕೆಲಸ ಮಾಡುತ್ತಿದ್ದಾರೆ ಎಂದು ನಿಖಿಲ್ ಕುಮಾರಸ್ವಾಮಿ ಭಾವುಕರಾಗಿದ್ದಾರೆ.
ಬೆಂಗಳೂರಿನಲ್ಲಿ ಬಿಜೆಪಿ ಪಾದಯಾತ್ರೆ ಕುರಿತು ಸುದ್ದಿಗೋಷ್ಠಿ ನಡೆಸುವ ವೇಳೆಯೇ ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಮೂಗಿನಲ್ಲಿ ರಕ್ತಸ್ರಾವ ಆಗಿತ್ತು. ಕೂಡಲೇ ಅವರನ್ನು ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲು ಮಾಡಿ, ಚಿಕಿತ್ಸೆ ನೀಡಲಾಯಿತು. ಸದ್ಯ ಕುಮಾರಸ್ವಾಮಿ ಅವರು ಆರೋಗ್ಯದಿಂದ ಇದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಬಗ್ಗೆ ಪುತ್ರ ನಿಖಿಲ್ ಕುಮಾರಸ್ವಾಮಿ ಮಾಹಿತಿ ನೀಡಿದ್ದು, ಕಳೆದ 15 ದಿನಗಳಿಂದ ಕುಮಾರಸ್ವಾಮಿ ಅವರು ನಿರಂತರ ಓಡಾಟ ನಡೆಸಿದ್ದಾರೆ. ಕೆಲಸದ ಒತ್ತಡದಿಂದ ಮೂಗಿನಲ್ಲಿ ರಕ್ತಸ್ರಾವ ಆಗಿದೆ. ಅವರ ಆರೋಗ್ಯದಲ್ಲಿ ಏನು ಸಮಸ್ಯೆಯಿಲ್ಲ. ಕೆಲಸದ ಒತ್ತಡದ ನಡುವೆ ಬೆಳಿಗ್ಗೆ 4.30ಕ್ಕೆ ಎದ್ದೇಳುತ್ತಿದ್ದರು. ಮಲಗೋದು ರಾತ್ರಿ 1 ಗಂಟೆ ಆಗುತ್ತಿತ್ತು. ಹೀಗಾಗಿ ಅವರಿಗೆ ವಿಶ್ರಾಂತಿಯ ಅವಶ್ಯಕತೆಯಿದೆ. ಡಾಕ್ಟರ್ ಕೂಡ ಕುಮಾರಸ್ವಾಮಿ ಅವರ ಆರೋಗ್ಯದ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ ಎಂದು ಮಾಹಿತಿ ನೀಡಿದರು.
ಇನ್ನು ಕುಮಾರಸ್ವಾಮಿ ಅವರಿಗೆ ಚಿಕಿತ್ಸೆ ನೀಡಿದ ವೈದ್ಯ ಯತೀಶ್ ಪ್ರತಿಕ್ರಿಯೆ ನೀಡಿದ್ದು, ಕುಮಾರಸ್ವಾಮಿ ಅವರಿಗೆ ಮೂರು ಸಲ ಹೃದಯದ ಚಿಕಿತ್ಸೆ ನೀಡಲಾಗಿದೆ. ಯಾರೂ ಏನೂ ಆತಂಕ ಪಡುವ ಅಗತ್ಯವಿಲ್ಲ. ಅವರು ಅಡ್ಮಿಷನ್ ಆಗಿಲ್ಲ. ತಪಾಸಣೆ ಮುಗಿಸಿ ಹೊರಡುತ್ತಾರೆ ಎಂದು ಸ್ಪಷ್ಟಪಡಿಸಿದ್ದಾರೆ.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…